Wednesday, June 18, 2025
Homeಬೆಂಗಳೂರುಬೈಕ್‌ನಲ್ಲಿ ಹೋಗುತ್ತಿದ್ದಾಗ ತಲೆ ಮೇಲೆ ಮರದ ಕೊಂಬೆ ಬಿದ್ದಿದ್ದ ಅಕ್ಷಯ್‌ ಸ್ಥಿತಿ ಇನ್ನೂ ಗಂಭೀರ

ಬೈಕ್‌ನಲ್ಲಿ ಹೋಗುತ್ತಿದ್ದಾಗ ತಲೆ ಮೇಲೆ ಮರದ ಕೊಂಬೆ ಬಿದ್ದಿದ್ದ ಅಕ್ಷಯ್‌ ಸ್ಥಿತಿ ಇನ್ನೂ ಗಂಭೀರ

Akshay's condition is still critical after a tree branch fell on his head while he was riding a bike

ಬೆಂಗಳೂರು, ಜೂ.18- ಬೈಕ್‌ನಲ್ಲಿ ಹೋಗುತ್ತಿದ್ದಾಗ ಮರದ ಕೊಂಬೆಯೊಂದು ತಲೆ ಮೇಲೆ ಬಿದ್ದು ಗಾಯಗೊಂಡಿರುವ ಅಕ್ಷಯ್‌ ಅವರ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಅಕ್ಷಯ್‌ ಅವರನ್ನು ಸ್ಕ್ಯಾನಿಂಗ್‌ಗೆ ಒಳಪಡಿಸಿದ ನಂತರ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದು, ಸದ್ಯಕ್ಕೆ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಕೋಮಾ ಸ್ಥಿತಿಗೆ ತಲುಪಿದ್ದಾರೆ.

ಅಕ್ಷಯ್‌ ಅವರ ತಲೆ ಬುರುಡೆ ಹಾಗೂ ಮೆದುಳಿಗೆ ತೀವ್ರ ಪೆಟ್ಟುಬಿದ್ದಿರುವುದರಿಂದ ವೆಂಟಿಲೇಟರ್‌ ನೆರವಿನಲ್ಲಿ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ನರತಜ್ಞರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಶ್ರೀನಿವಾಸ ನಗರದ ನಿವಾಸಿ ಅಕ್ಷಯ್‌ ಅವರು ಕಳೆದ ಭಾನುವಾರ ಮಧ್ಯಾಹ್ನ ಬನಶಂಕರಿಯ ಬ್ರಹಚೈತನ್ಯ ಮಂದಿರದ ಬಳಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಇವರ ತಲೆ ಮೇಲೆ ಮರದ ಕೊಂಬೆ ಬಿದ್ದಾಗ ನಿಯಂತ್ರಣ ತಪ್ಪಿ ನೆಲಕ್ಕುರುಳಿದ್ದರಿಂದ ತಲೆಗೆ ಗಂಭೀರ ಪೆಟ್ಟಾಗಿ ತೀವ್ರರಕ್ತ ಸೋರಿಕೆಯಾಗಿತ್ತು. ಸಾರ್ವಜನಿಕರು ತಕ್ಷಣ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ.

ಅಕ್ಷಯ್‌ ಅವರ ಸಹೋದರ ಹನುಮಂತನಗರ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.ಅಕ್ಷಯ್‌ ಅವರು ಸದ್ಯಕ್ಕೆ ಮಾತನಾಡುವ ಸ್ಥಿತಿಯಲ್ಲಿಲ್ಲ ಹಾಗಾಗಿ ನಂತರ ದೂರು ನೀಡುವುದಾಗಿ ಹೇಳಿದ್ದಾರೆ.ಈ ನಡುವೆ ಅಕ್ಷಯ್‌ ಅವರ ಚಿಕಿತ್ಸಾ ವೆಚ್ಚವನ್ನು ಬಿಬಿಎಂಪಿ ಭರಿಸುವುದಾಗಿ ತಿಳಿಸಿದೆ.

RELATED ARTICLES

Latest News