ನಾಳೆಯೊಳಗೆ ಬೆಂಗಳೂರಿನ ಎಲ್ಲ ರಸ್ತೆ ಗುಂಡಿಗಳಿಗೆ ಮುಕ್ತಿ : ತುಷಾರ್‌ ಗಿರಿನಾಥ್‌

ಬೆಂಗಳೂರು,ಸೆ.17- ನಾಳೆಯೊಳಗೆ ರಸ್ತೆಗುಂಡಿಗಳನ್ನು ಸಂಪೂರ್ಣವಾಗಿ ಮುಚ್ಚಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ರಸ್ತೆ ಗುಂಡಿಗಳನ್ನು ಮುಚ್ಚಲು ಎರಡು ವಾರ ಗಡುವು ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಗರಪ್ರದಕ್ಷಿಣೆ ಬಂದಾಗ ಸೆ.20 ರೊಳಗೆ ಎಲ್ಲಾ ಗುಂಡಿಗಳನ್ನೂ ಮುಚ್ಚುವಂತೆ ಸೂಚನೆ ನೀಡಿದ್ದರು. ನಾವು 17ರೊಳಗೆ ಗುಂಡಿಗಳನ್ನು ಮುಚ್ಚಬೇಕು ಎಂದುಕೊಂಡು ಹಗಲು-ರಾತ್ರಿ ಕಾಮಗಾರಿ ಮಾಡಿದ್ದೆವು. ನಾಳೆಯೊಳಗೆ ಎಲ್ಲಾ ಗುಂಡಿಗಳನ್ನೂ ಮುಚ್ಚಲಾಗುವುದು ಎಂದು ಹೇಳಿದರು. ನಿತ್ಯ ಗುಂಡಿ ಗಮನ ಆ್ಯಪ್‌ನಲ್ಲಿ ಪ್ರತಿನಿತ್ಯ … Continue reading ನಾಳೆಯೊಳಗೆ ಬೆಂಗಳೂರಿನ ಎಲ್ಲ ರಸ್ತೆ ಗುಂಡಿಗಳಿಗೆ ಮುಕ್ತಿ : ತುಷಾರ್‌ ಗಿರಿನಾಥ್‌