Saturday, May 4, 2024
Homeರಾಜ್ಯಈಶ್ವರಪ್ಪಗೆ ಅಮಿತ್ ಷಾ ಕರೆ, ದೆಹಲಿಗೆ ಬರುವಂತೆ ಬುಲಾವ್

ಈಶ್ವರಪ್ಪಗೆ ಅಮಿತ್ ಷಾ ಕರೆ, ದೆಹಲಿಗೆ ಬರುವಂತೆ ಬುಲಾವ್

ಬೆಂಗಳೂರು,ಏ.2- ಯಡಿಯೂರಪ್ಪ ವಿರುದ್ಧ ತಿರುಗಿಬಿದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯವಾಗಿ ಸ್ಪರ್ಧಿಸಲು ಮುಂದಾಗಿರುವ ಈಶ್ವರಪ್ಪ ಅವರಿಗೆ ಕೇಂದ್ರ ಸಚಿವ ಅಮಿತ್ ಷಾ ಅವರು ಕರೆ ಮಾಡಿದ್ದ ಹಿನ್ನೆಲೆಯಲ್ಲಿ ನಾಳೆ ಈಶ್ವರಪ್ಪ ದೆಹಲಿಗೆ ತೆರಳಲಿದ್ದಾರೆ.

ನನ್ನ ಮಗ ಕಾಂತೇಶ್‍ಗೆ ಹಾವೇರಿಯಲ್ಲಿ ಟಿಕೆಟ್ ತಪ್ಪಿಸಿದ್ದಾರೆ. ನಾನು ಶಿವಮೊಗ್ಗದಲ್ಲಿ ಸ್ಪರ್ಧಿಸಿ ಬಿಎಸ್‍ವೈ ಪುತ್ರ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸುತ್ತೇನೆ ಎಂದು ಶಪಥ ಮಾಡಿರುವ ಈಶ್ವರಪ್ಪ, ಕಳೆದ 15 ದಿನಗಳಿಂದ ಪ್ರಚಾರ ನಡೆಸುತ್ತಿದ್ದಾರೆ.

ಈಶ್ವರಪ್ಪ ಬಂಡಾಯ ಶಮನಕ್ಕೆ ಬಿಜೆಪಿ ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ. ಈಶ್ವರಪ್ಪ ಅವರಿಗೆ ಕರೆ ಮಾಡಿರುವ ಅಮಿತ್ ಷಾ ಅವರು ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ. ನಾನು ದೆಹಲಿಗೆ ಬರುತ್ತೇನೆ. ಆದರೆ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.ನಾನು ಸ್ಪರ್ಧಿಸುತ್ತೇನೆ. ಗೆದ್ದು ಬಿಜೆಪಿಗೆ ಮರಳುತ್ತೇನೆ. ನಿಮ್ಮ ಬೆಂಬಲವಿರಲಿ ಎಂದು ಈಶ್ವರಪ್ಪ ಅವರು ಅಮಿತ್ ಷಾ ಅವರಿಗೆ ಹೇಳಿದ್ದಾರೆಂದು ತಿಳಿದುಬಂದಿದೆ.

ದೆಹಲಿಗೆ ಬಂದಾಗ ಇಲ್ಲಿ ಏನೇನಾಗಿದೆ ಎಂಬುದರ ಬಗ್ಗೆ ಹೇಳುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ. ಒಟ್ಟಾರೆ ಶಿವಮೊಗ್ಗದ ಬಂಡಾಯ ತೀವ್ರಗೊಂಡಿದೆ. ಇದರ ಶಮನಕ್ಕೆ ಹೈಕಮಾಂಡ್ ಎಂಟ್ರಿಯಾಗಿದೆ. ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಕೊಪ್ಪಳ ಕ್ಷೇತ್ರಗಳ ಬಂಡಾಯವನ್ನು ಶಮನಗೊಳಿಸಿದ್ದ ಬಿಜೆಪಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಶಮನಕ್ಕೆ ಮುಂದಾಗಿದೆ. ಮುಂದೇನಾಗಲಿದೆಯೋ ಕಾದು ನೋಡಬೇಕು.

RELATED ARTICLES

Latest News