Friday, May 3, 2024
Homeರಾಜ್ಯಹೊಸಕೋಟೆ : ಮನೆಗೆ ನುಗ್ಗಿ ವೃದ್ಧ ದಂಪತಿ ಭೀಕರ ಹತ್ಯೆ

ಹೊಸಕೋಟೆ : ಮನೆಗೆ ನುಗ್ಗಿ ವೃದ್ಧ ದಂಪತಿ ಭೀಕರ ಹತ್ಯೆ

ಬೆಂಗಳೂರು, ಡಿ.11- ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ವೃದ್ಧ ದಂಪತಿ ಯನ್ನು ಬರ್ಬರವಾಗಿ ಕೊಲೆ ಮಾಡಿ ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿರುವ ಘಟನೆ ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಹೊಸಕೋಟೆ ತಾಲೂಕಿನ ಸೂಲಿಬೆಲೆ ಸಮೀಪದ ವಾಲ್ಮಿಕಿ ನಗರದ ನಿವಾಸಿಗಳಾದ ರಾಮಕೃಷ್ಣಪ್ಪ(70) ಮತ್ತು ಮುನಿರಾಮಕ್ಕ(65) ಕೊಲೆಯಾದ ವೃದ್ಧ ದಂಪತಿ.

ವ್ಯವಸಾಯ ಮಾಡಿಕೊಂಡಿದ್ದ ಈ ದಂಪತಿಗೆ ಐದು ಮಂದಿ ಮಕ್ಕಳು. ನಾಲ್ಕು ಹೆಣ್ಣು ಮಕ್ಕಳು ಹಾಗೂ ಒಬ್ಬ ಗಂಡು ಮಗ. ಎಲ್ಲರಿಗೂ ಮದುವೆಯಾಗಿದ್ದು, ಮಗ ಬೇರೆ ವಾಸವಿದ್ದಾರೆ.ದಂಪತಿಗೆ ಎರಡು ಎಕರೆ ಜಮೀನು ಹಾಗೂ ಸೂಲಿಬೆಲೆಯಲ್ಲಿ ಸೈಟುಗಳಿದ್ದು, ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೂ ಪಾಲು ಕೊಡಬೇಕೆಂದು ಮಗನಿಗೆ ಹೇಳಿದ್ದರು. ಇದೇ ವಿಚಾರಕ್ಕೆ ತಂದೆ-ತಾಯಿ ಜೊತೆ ಮಗ ಜಗಳ ಮಾಡಿಕೊಂಡಿದ್ದನು.

ಶನಿವಾರ ರಾತ್ರಿ ಇವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ರಾಡಿನಿಂದ ದಂಪತಿ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿ ನಂತರ ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾರೆ. ಹೆಣ್ಣು ಮಕ್ಕಳು ಆಗಾಗ್ಗೆ ತಂದೆ- ತಾಯಿಗೆ ಪೊನ್ ಮಾಡಿ ಆರೋಗ್ಯ ವಿಚಾರಿಸಿಕೊಳ್ಳುತ್ತಿದ್ದರು. ಅದರಂತೆ ಭಾನುವಾರ ಬೆಳಗ್ಗೆ ಒಬ್ಬ ಮಗಳು ಪೊನ್ ಮಾಡಿದಾಗ ಕರೆ ಸ್ವೀಕರಿಸಿಲ್ಲ. ಹಲವಾರು ಬಾರಿ ಮಾಡಿದರೂ ಪೊನ್ ತೆಗೆಯದಿದ್ದಾಗ ಅನುಮಾನಗೊಂಡು ಸಂಜೆ ಮನೆ ಬಳಿ ಬಂದು ನೋಡಿದಾಗ ಮನೆ ಬೀಗ ಹಾಕಿರುವುದು ಕಂಡು ಬಂದಿದೆ.

ಈರುಳ್ಳಿ ನಂತರ ಈಗ ಬೆಳ್ಳುಳ್ಳಿ ಬೆಲೆ ಏರಿಕೆ

ಮನೆ ಹೊರಗಡೆ ಚಪ್ಪಲಿಗಳಿರುವುದು ಗಮನಿಸಿ ಮಗಳು ಅನುಮಾನಗೊಂಡು ಕಿಟಕಿ ಮೂಲಕ ನೋಡಿದಾಗ ಅಪ್ಪ- ಅಮ್ಮ ಕೊಲೆಯಾಗಿರುವುದು ಕಂಡು ಬಂದಿದೆ. ತಕ್ಷಣ ಪೊಲೀಸರಿಗೆ ಹಾಗೂ ಅಕ್ಕ-ಪಕ್ಕದವರಿಗೆ ವಿಷಯ ತಿಳಿಸಿದ್ದಾರೆ. ಸುದ್ದಿ ತಿಳಿದು ಸೂಲಿಬೆಲೆ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮನೆಯ ಬೀಗ ಒಡೆದು ಒಳಗೆ ಹೋಗಿ ಪರಿಶೀಲಿಸಿದಾಗ ದಂಪತಿ ಕೊಲೆಯಾಗಿರುವುದು ಕಂಡು ಬಂದಿದೆ.

ಮೃತದೇಹಗಳನ್ನು ಎಂವಿಜೆ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಶೋಧ ಕೈಗೊಂಡಿದ್ದಾರೆ. ಆಸ್ತಿ ವಿಚಾರಕ್ಕೆ ದಂಪತಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಸಂಬಂಕರಿಂದ ಹಲವು ಮಾಹಿತಿಗಳನ್ನು ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News