Tuesday, April 30, 2024
Homeರಾಜಕೀಯಮೂರು ದಿನದೊಳಗೆ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ : ಜಿ.ಟಿ.ದೇವೇಗೌಡ

ಮೂರು ದಿನದೊಳಗೆ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ : ಜಿ.ಟಿ.ದೇವೇಗೌಡ

ಬೆಂಗಳೂರು,ಮಾ.14- ಲೋಕಸಭೆ ಚುನಾವಣೆಯ ಪಕ್ಷದ ಅಭ್ಯರ್ಥಿಗಳನ್ನು ಮೂರು ದಿನದಲ್ಲಿ ಘೋಷಣೆ ಮಾಡಲಿದ್ದು, ಇನ್ನೂ ಒಂದು ಕ್ಷೇತ್ರವನ್ನು ಬಿಟ್ಟುಕೊಡುವಂತೆ ಬಿಜೆಪಿ ವರಿಷ್ಠರನ್ನು ಕೋರಲಾಗುವುದು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ, ಮಂಡ್ಯ, ಕೋಲಾರ ಕ್ಷೇತ್ರವನ್ನು ನಮ್ಮ ಪಕ್ಷಕ್ಕೆ ಬಿಟ್ಟುಕೊಟ್ಟಿದ್ದು, ನಾವು ಪ್ರಾಬಲ್ಯವಿರುವ ಮತ್ತೊಂದು ಕ್ಷೇತ್ರವನ್ನು ಬಿಟ್ಟುಕೊಡುವಂತೆ ಕೇಳಿದ್ದೇವೆ. ರಾಜ್ಯಾಧ್ಯಕ್ಷರು ಇನ್ನು ಮೂರು ದಿನದಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಪ್ರಕಟಿಸಲಿದ್ದಾರೆ ಎಂದರು.

ಬಿಜೆಪಿಯವರು ಕೂಡ ಮತ್ತೊಂದು ಕ್ಷೇತ್ರವನ್ನು ಬಿಟ್ಟುಕೊಡಲು ಸಿದ್ಧರಿದ್ದಾರೆ, ಮೈಸೂರು ಕ್ಷೇತ್ರಕ್ಕೆ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೊಡುವಂತೆ ನಿನ್ನೆಯವರೆಗೂ ಮನವಿ ಮಾಡಿದ್ದೆವು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರು ರಾಜಮನೆತನದ ಇತಿಹಾಸ ಕೊಡುಗೆಗಳನ್ನು ಆಧರಿಸಿ ಅವರ ಕುಟುಂಬದವರಿಗೆ ಟಿಕೆಟ್ ಕೊಟ್ಟಿದ್ದಾರೆ.

ಬಿಜೆಪಿ-ಜೆಡಿಎಸ್‍ನಲ್ಲಿ ಯಾರೇ ಅಭ್ಯರ್ಥಿಗಳಿದ್ದರೂ ಎರಡೂ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಿ ರಾಜ್ಯದ 28 ಕ್ಷೇತ್ರಗಳಲ್ಲಿ ಗೆಲ್ಲಲು ಹೋರಾಟ ನಡೆಸುತ್ತೇವೆ ಎಂದು ಹೇಳಿದರು. ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕೆಂಬುದು ನಮ್ಮ ಗುರಿಯಾಗಿದ್ದು, ಆ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ ಎಂದರು.

RELATED ARTICLES

Latest News