Monday, June 9, 2025
Homeರಾಜ್ಯಸಿದ್ದರಾಮಯ್ಯನವರೇ, ನೀವು ವಿಧಾನಸೌಧದ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೇ..?

ಸಿದ್ದರಾಮಯ್ಯನವರೇ, ನೀವು ವಿಧಾನಸೌಧದ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೇ..?

are you the Chief Minister only for the steps of Vidhana Soudha..?

ಬೆಂಗಳೂರು,ಜೂ.9– ಕರ್ನಾಟಕಕ್ಕೆ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧದ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ ಎಂಬುದನ್ನು ಸಿಎಂ ಸಿದ್ದರಾಮಯ್ಯ ಅವರೇ ಹೇಳುತ್ತೀರಾ..? ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಸಂಬಂಧ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸರ್ಕಾರ ಆರ್‌ಸಿಬಿ ವಿಜಯೋತ್ಸವ ಆಚರಿಸಿತ್ತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆಂಬ ಸಿದ್ದರಾಮಯ್ಯ ಅವರ ಹೇಳಿಕೆ ಉಲ್ಲೇಖಿಸಿ ಪ್ರಶ್ನಿಸಿದ್ದಾರೆ.

ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದ ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ಕೈ ತೊಳೆದುಕೊಳ್ಳುವುದು ಎಷ್ಟು ಸರಿ ಎಂದು ಅವರು ಕಿಡಿಕಾರಿದ್ದಾರೆ. ಈ ದುರಂತದ ವಿಚಾರದಲ್ಲಿ ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ ಎಂದು ಪ್ರಶ್ನಿಸಿರುವ ಅವರು, ಮೆಟ್ಟಿಲು ಮುಖ್ಯಮಂತ್ರಿ ಎಂದು ಹ್ಯಾಶ್‌ ಟ್ಯಾಗ್‌ ಮಾಡಿದ್ದಾರೆ.

RELATED ARTICLES

Latest News