Friday, May 3, 2024
Homeರಾಜಕೀಯಅಸ್ಸಾಂನಲ್ಲಿ "ಕೈ"ಬಿಟ್ಟ ಮತ್ತೊಬ್ಬ ಶಾಸಕ

ಅಸ್ಸಾಂನಲ್ಲಿ “ಕೈ”ಬಿಟ್ಟ ಮತ್ತೊಬ್ಬ ಶಾಸಕ

ಗುವಾಹಟಿ, ಮಾ 25 (ಪಿಟಿಐ) : ಅಸ್ಸಾಂನ ಲಖಿಂಪುರ ಜಿಲ್ಲೆಯ ನೌಬೋಚಾದ ಶಾಸಕ ಭರತ್ ಚಂದ್ರ ನರಹ್ ಅವರು ಇಂದು ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ್ದಾರೆ. ಉದಯ್ ಶಂಕರ್ ಹಜಾರಿಕಾ ಅವರನ್ನು ಲಖಿಂಪುರ ಲೋಕಸಭಾ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಿಸಿದ ಎರಡು ದಿನಗಳ ನಂತರ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ನರಹ್ ಅವರು ತಮ್ಮ ಪತ್ನಿ ರಾನೀ ನರಹ್ ಅವರನ್ನು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಭರವಸೆ ಹೊಂದಿದ್ದರು. ಅವರು ಪಿಟಿಐ ಜೊತೆ ಹಂಚಿಕೊಂಡ ಒಂದು ಸಾಲಿನ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ್ದಾರೆ.

ತಕ್ಷಣದಿಂದ ಜಾರಿಗೆ ಬರುವಂತೆ ನಾನು ಈ ಮೂಲಕ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ಗೆ ರಾಜೀನಾಮೆ ನೀಡುತ್ತೇನೆ ಎಂದು ಶಾಸಕರು ಪತ್ರದಲ್ಲಿ ತಿಳಿಸಿದ್ದಾರೆ. ನಿನ್ನೆ ಅಸ್ಸಾಂ ಕಾಂಗ್ರೆಸ್‍ನ ಮಾಧ್ಯಮ ಘಟಕದ ಅಧ್ಯಕ್ಷ ಸ್ಥಾನಕ್ಕೂ ಅವರು ರಾಜೀನಾಮೆ ನೀಡಿದ್ದರು.

RELATED ARTICLES

Latest News