ಕಾವೇರಿದ ಚುನಾವಣೆ : ವಲಸೆ ತಡೆಯಲು ನಾಯಕರ ಹೆಣಗಾಟ

Social Share

ಬೆಂಗಳೂರು,ಮಾ.19- ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಟಿಕೆಟ್‍ಗಾಗಿ ಪಕ್ಷದ ಅಭ್ಯರ್ಥಿಗಳ ಮಧ್ಯೆ ಈಗಾಗಲೇ ಹಗ್ಗಜಗ್ಗಾಟ ಜೋರಾಗಿದ್ದು, ಕೆಲವರು ಟಿಕೆಟ್ ಸಿಗಲ್ಲ ಎಂದು ಕಾತರಿಯಾಗುತ್ತಿದ್ದಂತೆ ಒಂದು ಪಕ್ಷದಿಂದ ಮತ್ತೊಂದು ಪಕ್ಷದತ್ತ ವಲಸೆ ಹೋಗುತ್ತಿದ್ದಾರೆ.

ಅದರಲ್ಲೂ ಮುಖ್ಯವಾಗಿ ಆಡಳಿರೂಢ ಬಿಜೆಪಿ ಪಕ್ಷದ ಮಾಜಿ ಶಾಸಕರು, ನಾಯಕರುಗಳು ಕಾಂಗ್ರೆಸ್ ಹಾಗೂ ಜೆಡಿಎಸ್‍ಗೆ ಸೇರ್ಪಡೆಯಾಗುತ್ತಿದ್ದಾರೆ. ಆಡಳಿತ ವಿರೋಧಿ ಅಂಶ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಆಡಳಿತಾರೂಢ ಬಿಜೆಪಿ ತನ್ನ ನಾಯಕರು ಕಾಂಗ್ರೆಸ್‍ಗೆ ಸೇರದಂತೆ ಉಳಿಸಿಕೊಳ್ಳಲು ಹೆಣಗಾಡುತ್ತಿರುವಂತೆ ಕಂಡುಬರುತ್ತಿದೆ.

ವಸತಿ ಸಚಿವ ವಿ ಸೋಮಣ್ಣ ಅವರನ್ನು ಮನವೊಲಿಸುವಲ್ಲಿ ಪಕ್ಷದ ಹೈಕಮಾಂಡ್ ಯಶಸ್ವಿಯಾಗಿದೆ. ಆದರೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರ ಕಾನೂನು ಸಲಹೆಗಾರರಾಗಿದ್ದ ಹಿರಿಯ ನಾಯಕ ಮೋಹನ್ ಲಿಂಬಿಕಾಯಿ ಬೆಳಗಾವಿಯಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಲಿಂಬಿಕಾಯಿ ಸ್ರ್ಪಧಿಸುವ ಸಾಧ್ಯತೆ ಇದೆ.

ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ ಸಾಧ್ಯತೆ

ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಕೆಜೆಪಿ ಮಾಜಿ ಶಾಸಕ ಯು.ಬಿ.ಬಣಕಾರ, ಚಿಕ್ಕಮಗಳೂರು ನಗರಸಭೆ ಮಾಜಿ ಅಧ್ಯಕ್ಷ ಎಚ್.ಡಿ.ತಮ್ಮಯ್ಯ, ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಕಿರಣ್‍ಕುಮಾರ್ ಕಾಂಗ್ರೆಸ್ ಸೇರಿದ್ದಾರೆ.

ಇವರೆಲ್ಲರೂ ವೀರಶೈವ-ಲಿಂಗಾಯತ ಸಮುದಾಯದವರಾಗಿದ್ದು, ಯಡಿಯೂರಪ್ಪನವರ ನಿಷ್ಠಾವಂತರಾಗಿದ್ದರು. ಮುಂಬರುವ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗುವ ನಿರೀಕ್ಷೆಯಿದೆ. ಏತನ್ಮಧ್ಯೆ, ಹಾಲಿ ಬಿಜೆಪಿ ಎಂಎಲ್ಸಿ, ಒಕ್ಕಲಿಗ ಪುಟ್ಟಣ್ಣ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಅವ ಇನ್ನೂ ಮೂರು ವರ್ಷ ಉಳಿದಿದೆ.

ಅಖಾಡಕ್ಕಿಳಿದ ಚುನಾವಣಾ ಆಯೋಗ, ಆಮಿಷವೊಡ್ಡುವವರ ತೀವ್ರ ನಿಗಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಂತಹ ನಾಯಕರು ಮಧ್ಯಪ್ರವೇಶಿಸುವುದರೊಂದಿಗೆ ಸೋಮಣ್ಣ ಅವರಂತಹ ಅನುಭವಿಗಳು ಪಕ್ಷ ತೊರೆಯುವುದನ್ನು ತಡೆಯಲು ಬಿಜೆಪಿಗೆ ಸಾಧ್ಯವಾಯಿತು. ಆದರೆ ಎರಡನೇ ಹಂತದ ನಾಯಕರೊಂದಿಗೆ ಮಾತನಾಡಲು ಹೈಕಮಾಂಡ್‍ಗೆ ಸಾಧ್ಯವಾಗಲಿಲ್ಲ. ಚುನಾವಣೆಗಳು ಸಮೀಪಿಸುತ್ತಿರುವಾಗ ಹೆಚ್ಚಿನ ನಾಯಕರು ಪಕ್ಷಗಳನ್ನು ಬದಲಾಯಿಸುವುದನ್ನು ತಳ್ಳಿ ಹಾಕಲಾಗುವುದಿಲ್ಲ.

assembly elections, leader, change, party ,BJP, JDS, Congress,

Articles You Might Like

Share This Article