ಬೆಂಗಳೂರು, ಜು.31-ಸಭಾಧ್ಯಕ್ಷರ ಅನುಪಸ್ಥಿತಿಯಲ್ಲಿ ವಿಧಾನಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲು ಆರು ಮಂದಿ ಹಿರಿಯ ಶಾಸಕರನ್ನು ನಾಮ ನಿರ್ದೇಶನ ಮಾಡಲಾಗಿದೆ.ಅಪ್ಪಾಜಿ ನಾಡಗೌಡ, ತನ್ನೀರ್ ಸೇಠ್, ಬಿ. ಆರ್. ಪಾಟೀಲ್, ಅಬ್ಬಯ್ಯ ಪ್ರಸಾದ್, ಆರಗ ಜ್ಞಾನೇಂದ್ರ, ಎಂ. ಟಿ. ಕೃಷ್ಣಪ್ಪ ಅವರು ಸಭಾಧ್ಯಕ್ಷರ ಅನುಪಸ್ಥಿತಿಯಲ್ಲಿ ವಿಧಾನಸಭೆಯ ಅಧ್ಯಕ್ಷತೆ ವಹಿಸಲಿರುವ ಸದಸ್ಯರೆಂದು ಸಭಾಧ್ಯಕ್ಷ ಯು.ಟಿ.ಖಾದರ್ ನಾಮ ನಿರ್ದೇಶನ ಮಾಡಿದ್ದಾರೆ.
ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳ ನಿಯಮ 9ರ ಮೇರೆಗೆ ಸಭಾಧ್ಯಕ್ಷರು 6 ಮಂದಿ ವಿಧಾನಸಭಾ ಸದಸ್ಯರನ್ನು ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಎಂಇಎಸ್ ಪುಂಡರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಪೊಲೀಸಪ್ಪ, ಕೆರಳಿ ಕೆಂಡವಾದ ಕನ್ನಡಿಗರು
- ಮುಂಬೈ ವಿಮಾನ ನಿಲ್ದಾಣದಲ್ಲಿ 47 ಕೋಟಿ ಮೌಲ್ಯದ ಕೊಕೇನ್ ವಶ
- ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸುವ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ : ಡಿಕೆಶಿ
- ಬೆಂಗಳೂರಲ್ಲಿ ಹೆಚ್ಚುತ್ತಲೇ ಇವೆ ರೋಡ್ರೇಜ್ ಪ್ರಕರಣಗಳು
- ಒಂಟಿ ಮಹಿಳೆಯರ ಸರ ಎಗರಿಸುತ್ತಿದ್ದ ಕುಖ್ಯಾತ ಐದು ಮಂದಿ ಸರಗಳ್ಳರ ಬಂಧನ
