Friday, September 20, 2024
Homeಜಿಲ್ಲಾ ಸುದ್ದಿಗಳು | District Newsಡೆತ್‌ನೋಟ್‌ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್‌ ಕಪಿಲಾ ನದಿಯಲ್ಲಿ ಶವವಾಗಿ ಪತ್ತೆ

ಡೆತ್‌ನೋಟ್‌ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್‌ ಕಪಿಲಾ ನದಿಯಲ್ಲಿ ಶವವಾಗಿ ಪತ್ತೆ

ಮೈಸೂರು, ಜು. 28- ಸಾಲಗಾರರ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್‌ ಶವವಾಗಿ ಪತ್ತೆಯಾಗಿದ್ದಾರೆ.ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಪೊಲೀಸ್‌‍ ಠಾಣಾ ವ್ಯಾಪ್ತಿಯ ಕಟ್ಟುವಾಡಿ ಗ್ರಾಮದಿಂದ ಜು.20ರಂದು ಕಾಣೆಯಾಗಿದ್ದ ಪ್ರಸಾದ್‌ ಹೆಚ್‌ಡಿ ಕೋಟೆಯ ಸರಗೂರಿನ ಕಪಿಲಾ ನದಿ ದಂಡೆ ಸೋಮೇಶ್ವರ ದೇವಸ್ಥಾನದ ಬಳಿ ನೀರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನನ್ನ ಸಾವಿಗೆ ಫೈನಾನ್ಸ್ ಮಧು ಹಾಗೂ ಟೆಂಪೋ ಕಿರಣ ಕಾರಣ ಎಂದು ಡೆತ್‌ ನೋಟ್‌ ಬರೆದು ಆಟೋದಲ್ಲಿ ಇಟ್ಟು ನಾಪತ್ತೆಯಾಗಿದ್ದರು.

ಫೈನಾನ್ಸ್ ಮಧು ಬಳಿ ಕಿರಣ್‌ ಜಾಮೀನು ನೀಡಿ ಹಣ ಸಾಲ ಕೊಡಿಸಿದ್ದ.ನಿಗದಿತ ಸಮಯಕ್ಕೆ ಹಣ ಹಿಂದಿರುಗಿಸಿಲ್ಲ. ಹೀಗಾಗಿ ಕಿರಣ್‌ ಆಗಾಗ ಮನೆಗೆ ಬಂದು ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಪ್ರಸಾದ್‌ ಡೆತ್‌ ನೋಟ್‌ ಬರೆದು ನಾಪತ್ತೆಯಾಗಿದ್ದರು. ಹೆಚ್‌ಡಿ ಕೋಟೆ ಸರಗೂರಿನಲ್ಲಿ ಪ್ರಸಾದ್‌ ಮೃತದೇಹ ದೊರೆತಿದೆ.

ಪ್ರಸಾದ್‌ ಆತಹತ್ಯೆಗೆ ಶರಣಾಗಿ ರಬಹುದೆಂದು ಶಂಕಿಸಲಾಗಿದೆ. ಸರಗೂರು ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಳೆದ ಜು.20ರಂದು ಪತ್ನಿಗೆ ಗದ್ದುಗೆಗೆ ಹೋಗಿ ಬರುವುದಾಗಿ ತಿಳಿಸಿ ಪ್ರಸಾದ್‌ ಮನೆಯಿಂದ ತೆರಳಿದ್ದು, ಎರಡು ದಿನಗಳಾದರೂ ಮನೆಗೆ ವಾಪಸ್‌‍ ಬಂದಿರಲಿಲ್ಲ. ಮೊಬೈಲ್‌ ಸಂಪರ್ಕಕ್ಕೂ ಕೂಡ ಸಿಕ್ಕಿರಲಿಲ್ಲ. ಮನೆ ಮುಂದೆ ನಿಲ್ಲಿಸಿದ್ದ ಆಟೋದಲ್ಲಿ ಡೆತ್‌ನೋಟ್‌ ಪತ್ತೆಯಾಗಿತ್ತು.

ಆಕ್ರಂದನ: ಕುಟುಂಬಕ್ಕೆ ಆಧಾರವಾಗಿದ್ದ ಪತಿಯನ್ನು ಕಳೆದುಕೊಂಡ ಪತ್ನಿಯ ಆಕ್ರಂದನ ಮುಗಿಲು ಮುಟ್ಟಿತ್ತು. ಇನ್ನು ಕುಟುಂಬಕ್ಕೆ ಯಾರು ದಿಕ್ಕು ಎಂದು ಪತ್ನಿ ಕಣ್ಣೀರಿಡುತ್ತಿದ್ದ ದೃಶ್ಯ ಮನಕಲಕುವಂತಿತ್ತು.

RELATED ARTICLES

Latest News