Friday, May 3, 2024
Homeಮನರಂಜನೆದ್ವಾರಕೀಶ್ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆಗೆ ನಿರ್ಧಾರ

ದ್ವಾರಕೀಶ್ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆಗೆ ನಿರ್ಧಾರ

ಹುಣಸೂರು, ಏ.17- ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರ ಹೆಸರಿನಲ್ಲಿ ರಾಜ್ಯಮಟ್ಟದ ದತ್ತಿನಿಧಿ ಪ್ರಶಸ್ತಿ ಸ್ಥಾಪನೆ ಮಾಡಲು ಶಾಸಕ ಜಿ.ಡಿ. ಹರೀಶ್ ಗೌಡ ನಿರ್ಧರಿಸಿದ್ದಾರೆ. ದ್ವಾರಕೀಶ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಅವರು, ಕನ್ನಡ ಮಾತ್ರವಲ್ಲದೆ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ದ್ವಾರಕೀಶ್ ಅವರು ಹುಣಸೂರಿನ ಪುತ್ರರಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದಿದ್ದಾರೆ.

ದ್ವಾರಕೀಶ್ ಅವರು ಮೂಲತಃ ಹುಣಸೂರಿನವರು. ಆಗಸ್ಟ್ 19, 1942ರಂದು ಶಾಮರಾವ್ ಮತ್ತು ಜಯಮ್ಮ ಅವರ ಪುತ್ರರಾಗಿ ಜನಿಸಿದರು. ಅನಂತರ ಮೈಸೂರಿನ ಶಾರದಾ ವಿಲಾಸ ಮತ್ತು ಬನುಮಯ್ಯ ಶಾಲೆಯಲ್ಲಿ ತಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಪಡೆದ ಅವರು ನಂತರ ಮೈಸೂರಿನ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಮಾಡಿದರು.

ಬಳಿಕ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಪ್ರಾರಂಭಿಸಿದರು. 1963ರಲ್ಲಿ ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು. ಕನ್ನಡದ ಪ್ರಮುಖ ನಟರ ಜೊತೆಯಲ್ಲಿ ನಟಿಸಿದ್ದಾರೆ. ಚಲನ ಚಿತ್ರ ನಾಯಕರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಸೇವೆ ಸಲ್ಲಿಸಿ ಹುಣಸೂರಿನ ಮಗ ರಾಜ್ಯದ ಮನೆಮಾತಾಗಿದ್ದಾರೆ.

ಹುಣಸೂರಿನ ಕಲಾವಿದ ದ್ವಾರಕೀಶ್ ಅವರು ಮಂಗಳವಾರ ನಿಧನರಾಗಿದ್ದರಿಂದ ಕನ್ನಡ ಚಲನಚಿತ್ರ ರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿಸಿಗಲಿ ಹಾಗೂ ಇವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಪ್ರಶಸ್ತಿ ಸ್ಥಾಪನೆ: ಇವರ ಹೆಸರಿನಲ್ಲಿ ರಾಜ್ಯ ಸರ್ಕಾರ ಪ್ರಶಸ್ತಿ ಪ್ರಕಟ ಮಾಡುವಂತೆ ಮುಖ್ಯಮಂತ್ರಿಗಳನ್ನು ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವರನ್ನು ಒತ್ತಾಯಿಸುತ್ತೇನೆ. ನಾನು ಕೂಡ ನನ್ನ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಜನಿಸಿದ ಹಿರಿಯ ನಟ ದ್ವಾರಕೀಶ್ ಅವರ ಹೆಸರಿನಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಾನು ವೈಯಕ್ತಿಕವಾಗಿ 2 ಲಕ್ಷ ರೂ.ಗಳ ಮೊತ್ತದ ಹಣವನ್ನು ಠೇವಣಿಯಾಗಿ ಇಟ್ಟು ಪ್ರತಿ ವರ್ಷ ಸಕ್ರಿಯವಾಗಿ ಚಲನಚಿತ್ರ ವಿಭಾಗದಲ್ಲಿ ಸೇವೆ ಸಲ್ಲಿಸುವ ಪತ್ರಕರ್ತರಿಗೆ ಹಿರಿಯ ನಟ ದ್ವಾರಕೀಶ್ ಹೆಸರಿನಲ್ಲಿ KWJU ನಲ್ಲಿ ರಾಜ್ಯ ಮಟ್ಟದ ದತ್ತಿ ನಿಧಿ ಪ್ರಶಸ್ತಿಯನ್ನು ಸ್ಥಾಪನೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಈ ಕೋರಿದ್ದೇನೆಂದು ಪತ್ರಿಕಾ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

RELATED ARTICLES

Latest News