Tuesday, February 11, 2025
Homeರಾಷ್ಟ್ರೀಯ | Nationalಅಯೋಧ್ಯೆ ಮಂದಿರಕ್ಕೆ 25 ಕೆಜಿ ಚಿನ್ನ -25 ಕೋಟಿ ರೂ ದೇಣಿಗೆ

ಅಯೋಧ್ಯೆ ಮಂದಿರಕ್ಕೆ 25 ಕೆಜಿ ಚಿನ್ನ -25 ಕೋಟಿ ರೂ ದೇಣಿಗೆ

ಅಯೋಧ್ಯೆ,ಫೆ.25- ಬಾಲರಾಮನ ಮಂದಿರಕ್ಕೆ 25 ಕೆಜಿ ಚಿನ್ನ ಮತ್ತು ಬೆಳ್ಳಿಯ ಆಭರಣ ಸೇರಿದಂತೆ ಸುಮಾರು 25 ಕೋಟಿ ರೂ. ದೇಣಿಗೆ ಹರಿದು ಬಂದಿದೆ. ಈ ಬಗ್ಗೆ ರಾಮಮಂದಿರ ಟ್ರಸ್ಟ್‍ನ ಅಧಿಕಾರಿ ಪ್ರಕಾಶ್ ಗುಪ್ತಾ ಮಾತನಾಡಿ, 25 ಕೋಟಿ ರೂ. ಮೊತ್ತದಲ್ಲಿ ಚೆಕ್‍ಗಳು, ಡ್ರಾಫ್ಟ್‍ಗಳು ಮತ್ತು ದೇವಸ್ಥಾನದ ಟ್ರಸ್ಟ್‍ನ ಕಚೇರಿಯಲ್ಲಿ ಠೇವಣಿ ಮಾಡಿದ ನಗದು ಮತ್ತು ಪೆಟ್ಟಿಗೆಗಳಲ್ಲಿ ಹಾಕಲಾದ ಕಾಣಿಕೆ ಸೇರಿದೆ. ಇನ್ನೂ ಟ್ರಸ್ಟ್‍ನ ಬ್ಯಾಂಕ್ ಖಾತೆಗಳಲ್ಲಿ ನೇರವಾಗಿ ಮಾಡಿದ ಆನ್‍ಲೈನ್ ವಹಿವಾಟಿನ ಬಗ್ಗೆ ನಮಗೆ ತಿಳಿದಿಲ್ಲ ಎಂದು ತಿಳಿಸಿದ್ದಾರೆ.

ರಾಮನವಮಿಯಂದು 50 ಲಕ್ಷ ಜನ ಭಕ್ತರು ಸೇರುವ ಸಾಧ್ಯತೆ ಇದೆ. ಆ ಸಮಯದಲ್ಲಿ ದೇಣಿಗೆ ಇನ್ನೂ ಹೆಚ್ಚಳವಾಗುವ ನಿರೀಕ್ಷೆ ಇದೆ. ಈ ವೇಳೆ ಭಕ್ತರು ನೀಡಿದ ಕಾಣಿಕೆಯನ್ನು ಎಣಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಾಲ್ಕು ಸ್ವಯಂಚಾಲಿತ ಹೈಟೆಕ್ ಯಂತ್ರಗಳನ್ನು ಸ್ಥಾಪಿಸಿದೆ ಎಂದು ಅವರು ತಿಳಿಸಿದ್ದಾರೆ.
ರಶೀದಿಗಳನ್ನು ನೀಡಲು ಟ್ರಸ್ಟ್‍ನಿಂದ ಹತ್ತಾರು ಗಣಕೀಕೃತ ಕೌಂಟರ್‍ಗಳನ್ನು ಮಾಡಲಾಗಿದೆ.

ಪಕ್ಷಾತೀತವಾಗಿ ಮಹಿಳಾ ನೌಕರರ ಸಂಘ ಮುನ್ನಡೆಯಲಿ: ಲಕ್ಷ್ಮೀ ಹೆಬ್ಬಾಳ್ಕರ್

ರಾಮಮಂದಿರ ಟ್ರಸ್ಟ್‍ನಿಂದ ದೇವಾಲಯದ ಆವರಣದಲ್ಲಿ ಹೆಚ್ಚುವರಿ ಕಾಣಿಕೆ ಪೆಟ್ಟಿಗೆಗಳನ್ನು ಇರಿಸಲಾಗುತ್ತಿದೆ. ಶೀಘ್ರದಲ್ಲೇ ರಾಮಮಂದಿರದ ಆವರಣದಲ್ಲಿ ದೊಡ್ಡ ಮತ್ತು ಸುಸಜ್ಜಿತ ಎಣಿಕೆ ಕೊಠಡಿಯನ್ನು ನಿರ್ಮಿಸಲಾಗುತ್ತದೆ. ಇನ್ನೂ ರಾಮಲಲ್ಲಾಗೆ ಉಡುಗೊರೆಯಾಗಿ ಸ್ವೀಕರಿಸಿದ ಚಿನ್ನ ಮತ್ತು ಬೆಳ್ಳಿ ಆಭರಣಗಳು ಮತ್ತು ಅಮೂಲ್ಯ ವಸ್ತುಗಳ ಮೌಲ್ಯಮಾಪನ ಮತ್ತು ಅವುಗಳ ನಿರ್ವಹಣೆಗೆ ಭಾರತ ಸರ್ಕಾರದ ಟಂಕಸಾಲೆಗೆ ಹಸ್ತಾಂತರಿಸಲಾಗಿದೆ ಎಂದು ರಾಮಮಂದಿರ ಟ್ರಸ್ಟ್‍ನ ಟ್ರಸ್ಟಿ ಅನಿಲ್ ಮಿಶ್ರಾ ಹೇಳಿದ್ದಾರೆ.

ರಾಮಮಂದಿರದ ದೇಣಿಗೆ, ಕೊಡುಗೆಗಳು, ಚೆಕ್‍ಗಳು, ಡ್ರಾಫ್ಟ್‍ಗಳು ಮತ್ತು ನಗದು ಸಂಗ್ರಹಣೆಯ ಸಂಪೂರ್ಣ ಜವಾಬ್ದಾರಿಯನ್ನು ಎಸ್‍ಬಿಐ ತೆಗೆದುಕೊಳ್ಳುತ್ತದೆ. ದೇಣಿಗೆ ನೀಡಿದ ಹಣವನ್ನು ಪ್ರತಿದಿನ ಎರಡು ಪಾಳಿಗಳಲ್ಲಿ ಎಣಿಕೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

RELATED ARTICLES

Latest News