Saturday, October 19, 2024
Homeರಾಜ್ಯಸರ್ಕಾರಿ ಕಚೇರಿಗಳಲ್ಲಿ ಇಂದೇ ಆಯುಧ ಪೂಜೆ ಸಂಭ್ರಮ

ಸರ್ಕಾರಿ ಕಚೇರಿಗಳಲ್ಲಿ ಇಂದೇ ಆಯುಧ ಪೂಜೆ ಸಂಭ್ರಮ

Ayudha Pooja in Govt Office

ಬೆಂಗಳೂರು, ಅ.10– ಆಯುಧಪೂಜೆ ಹಾಗೂ ವಿಜಯದಶಮಿ ಅಂಗವಾಗಿ ಸಾಲುಸಾಲು ರಜೆ ಹಿನೆ್ನಲೆಯಲ್ಲಿ ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಇಂದೇ ಪೂಜೆ ಸಲ್ಲಿಸಲಾಯಿತು.

ಶಕ್ತಿಕೇಂದ್ರ ವಿಧಾನಸೌಧ, ಶಾಸಕರ ಭವನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪೊಲೀಸ್ ಆಯುಕ್ತರ ಕಚೇರಿ, ಬಿಬಿಎಂಪಿ ಕೇಂದ್ರ ಕಚೇರಿ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಇಂದೇ ಪೂಜೆ ಮಾಡಲಾಗಿದೆ.

ವಿಧಾನ ಸೌಧದ ಸಚಿವರ ಕೊಠಡಿಗಳು ತಳಿರುತೋರಣಗಳಿಂದ ಶೃಂಗರಿಸಲಾಗಿದ್ದು, ಬಣ್ಣಬಣ್ಣದ ರಂಗೋಲಿ ಆಕರ್ಷಣಿಯವಾಗಿತ್ತು.
ಬಾಗಿಲುಗಳಿಗೆ ಮಾವು, ಹೂವಿನ ತೋರಣ, ಬಾಳೆಕಂದುಗಳನ್ನು ಆಯಾಯ ಇಲಾಖೆಯ ಅಧಿಕಾರಿಗಳು ತಮ ತಮ ಕಚೇರಿ ಹಾಗೂ ಸಚಿವರ ಕಚೇರಿಗಳಲ್ಲಿ ದೇವರ ಫೋಟೋಗಳನ್ನಿಟ್ಟು ಪೂಜೆ ಸಲ್ಲಿಸಿದರು.

ಗೃಹಸಚಿವರಾದ ಡಾ.ಜಿ.ಪರಮೇಶ್ವರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷೀ ಹೆಬ್ಬಾಳ್ಕರ್, ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ತಮ ಕಛೇರಿ ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಸಚಿವರು ಹಾಗೂ ಇಲಾಖೆಯ ವಾಹನಗಳನ್ನು ಚಾಲಕರುಗಳು ತೊಳೆದು, ಹೂಗಳಿಂದ ಶೃಂಗರಿಸಿ, ಪೂಜೆ ಸಲ್ಲಿಸಿದರು. ಇದೇ ವೇಳೆ ಅಧಿಕಾರಿಗಳು ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಿ ರಾಜ್ಯದಲ್ಲಿ ಉತ್ತಮ ಮಳೆ-ಬೆಳೆಯಾಗಿ ರಾಜ್ಯ ಸುಭಿಕ್ಷವಾಗಿರಲಿ ಎಂದು ಪ್ರಾರ್ಥಿಸಲಾಯಿತು.

RELATED ARTICLES

Latest News