Saturday, September 23, 2023
Homeಇದೀಗ ಬಂದ ಸುದ್ದಿರೈಲು ದುರಂತ : 300 ದಾಟಿದ ಸಾವಿನ ಸಂಖ್ಯೆ, 1000ಕ್ಕೂ ಹೆಚ್ಚು ಜನರಿಗೆ ಗಾಯ

ರೈಲು ದುರಂತ : 300 ದಾಟಿದ ಸಾವಿನ ಸಂಖ್ಯೆ, 1000ಕ್ಕೂ ಹೆಚ್ಚು ಜನರಿಗೆ ಗಾಯ

- Advertisement -

ಭುವನೇಶ್ವರ (ಒಡಿಶಾ), ಜೂ.3- ಇತ್ತೀಚಿನ ದಶಕಗಳಲ್ಲೇ ಅತೀ ದೊಡ್ಡ ದುರಂತ ಎಂದೇ ಹೇಳಲಾಗಿರುವ ಬೆಂಗಳೂರು-ಹೌರಾ ಸೂಪರ್‍ಫಾಸ್ಟ್ ಎಕ್ಸ್‍ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‍ಪ್ರೆಸ್ ಮತ್ತು ಗೂಡ್ಸ್ ರೈಲು ನಡುವಿನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 300ಕ್ಕೆ ಏರಿಕೆಯಾಗಿದ್ದು, 1 ಸಾವಿರಕ್ಕೂ ಹೆಚ್ಚಿನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ವಾಯುಸೇನೆಯ ಹೆಲಿಕಾಪ್ಟರ್ ಗಳು ಕೂಡ ರಕ್ಷಣಾ ಕಾರ್ಯಾ ಚರಣೆಯಲ್ಲಿ ತೊಡಗಿವೆ. ರಾತ್ರಿಯಿಂದಲೇ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸಮೀಪದ ಜಿಲ್ಲೆಗಳ ಎಲ್ಲಾ ಆಸ್ಪತ್ರೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಮೂರು ಎನ್‍ಡಿಆರ್‍ಎಫ್ ಘಟಕಗಳು, 4 ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆಗಳು, 15ಕ್ಕೂ ಹೆಚ್ಚು ಅಗ್ನಿಶಾಮಕ ರಕ್ಷಣಾ ತಂಡಗಳು, 30 ವೈದ್ಯರು, 200 ಪೊಲೀಸ್ ಸಿಬ್ಬಂದಿ ಮತ್ತು 60 ಆಂಬ್ಯುಲೆನ್ಸ್‍ಗಳನ್ನು ಘಟನಾ ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ತಿಳಿಸಿದ್ದಾರೆ.

- Advertisement -

ಗ್ಯಾರಂಟಿ ಅನುಷ್ಠಾನಕ್ಕೆ ಸಂಪನ್ಮೂಲ ಕ್ರೂಢೀಕರಿಸಲು ಸಿಎಂ ಸರಣಿ ಸಭೆ

ಖುದ್ದು ಕೇಂದ್ರ ರೈಲ್ವೆ ಸಚಿವ ಆಶ್ವಿನಿ ವೈಷ್ಣವ್ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸ್ಥಳದಲ್ಲೇ ಮೊಕ್ಕಂ ಹೂಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ವಾಯುಪಡೆಯನ್ನು ಸ್ಥಳಕ್ಕೆ ಕರೆಸಲಾಗಿದೆ.

ಎಲ್ಲಾ ಗಾಯಗೊಂಡ ಸಂತ್ರಸ್ತರಿಗೆ ಬಿಎಸ್‍ಕೆವೈ ಸೌಲಭ್ಯದ ಆಸ್ಪತ್ರೆಗಳು ಮತ್ತು ಇತರ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸುವಂತೆ ಸಿಎಂ ಆದೇಶಿಸಿದ್ದಾರೆ. ಚಿಕಿತ್ಸಾ ವೆಚ್ಚವನ್ನು ರಾಜ್ಯವು ಭರಿಸಲಿದೆ ಎಂದು ಅವರು ಹೇಳಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡಲು ಬಾಲಸೋರ್, ಭದ್ರಕ್, ಜಾಜ್‍ಪುರ್ ಮತ್ತು ಕೆಂದುಜಾರ್‍ನ ಜಿಲ್ಲಾ ಆಡಳಿತದ ಕಲೆಕ್ಟರ್‍ಗಳು, ಎಸ್‍ಪಿ ಮತ್ತು ಅಧಿಕಾರಿಗಳನ್ನು ಸಹಾಯ ಕೇಳಲಾಗಿದೆ. ಭುವನೇಶ್ವರದ ಎಸ್‍ಆರ್‍ಸಿಯ ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸುತ್ತಿದೆ.

ಈಗಾಗಲೇ ಕೇಂದ್ರ ರೈಲ್ವೆ ಇಲಾಖೆ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರೆ, ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಘೋಷಣೆ ಮಾಡಿದೆ.ಪ್ರಧಾನಿ ಮೋದಿ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಪ್ರಧಾನಿ ಧನ ಪರಿಹಾರ ನಿಯಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಈ ನಡುವೆ ಪರಿಹಾರ ಕಾರ್ಯಾಚರಣೆ ಭರದಿಂದ ಸಾಗಿದೆ.

ಭುವನೇಶ್ವರದ ಎಸ್‍ಆರ್‍ಸಿಯ ಕಂಟ್ರೋಲ್ ರೂಂ ಕಾರ್ಯನಿರ್ವಹಿಸುತ್ತಿದೆ ಎಂದು ಅಕಾರಿಗಳು ತಿಳಿಸಿದ್ದಾರೆ. ಒಡಿಶಾ ರಾಜ್ಯದ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ, ಡೆವಲಪ್‍ಮೆಂಟ್ ಕಮಿಷನರ್-ಕಮ್-ಎಸಿಎಸ್-ಅನು ಗಾರ್ಗ್, ಐ ಪಿಆರ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಂಜಯ್ ಕುಮಾರ್ ಸಿಂಗ್, ಎಂಡಿ, ಒಎಸ್‍ಡಿಎಂಎ ಜ್ಞಾನ್ ದಾಸ್ ಅವರು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡಲು ಎಸ್‍ಆರ್‍ಸಿಯ ನಿಯಂತ್ರಣ ಕೊಠಡಿಯಲ್ಲಿದ್ದಾರೆ.

ಒಡಿಶಾದ ಬಾಲಸೋರ್‍ನ ಬಹನಾಗಾ ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‍ಪ್ರೆಸ್‍ನ ಹಲವಾರು ಬೋಗಿಗಳು ಹಳಿತಪ್ಪಿದ್ದವು.ರೈಲ್ವೇ ವಕ್ತಾರ ಅಮಿತಾಭ್ ಶರ್ಮಾ ಅವರ ಪ್ರಕಾರ, ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

ಬಾಡಿಗೆ ಮನೆಯಲ್ಲಿರುವವರಿಗೂ ಗೃಹಜ್ಯೋತಿ ಭಾಗ್ಯ : ಡಿಸಿಎಂ ಡಿಕೆಶಿ

ಸಂಜೆ 7 ಗಂಟೆ ಸುಮಾರಿಗೆ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‍ಪ್ರೆಸ್‍ನ 10-12 ಬೋಗಿಗಳು ಬಾಲೇಶ್ವರ ಬಳಿ ಹಳಿತಪ್ಪಿ ಎದುರಿನ ಹಳಿಯಲ್ಲಿ ಬಿದ್ದವು. ಸ್ವಲ್ಪ ಸಮಯದ ನಂತರ ಮತ್ತೊಂದು ರೈಲು ಯಶವಂತಪುರದಿಂದ ಹೌರಾಕ್ಕೆ ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದು ಅದರ 3-4 ಕೋಚ್‍ಗಳು ಹಳಿತಪ್ಪಿದವು ಎಂದು ಶರ್ಮಾ ಮಾಹಿತಿ ನೀಡಿದ್ದಾರೆ.

ಒಡಿಶಾದ ಬಾಲಸೋರ್‍ನಲ್ಲಿ ಶುಕ್ರವಾರ ಸಂಜೆ ರೈಲು ಹಳಿತಪ್ಪಿದ ಪರಿಣಾಮ ಭೀಕರ ಅಪಘಾತವೇ ಸಂಭವಿಸಿದೆ. ಹಳಿತಪ್ಪಿದ ರೈಲು ಪ್ಯಾಸೆಂಜರ್ ರೈಲಿನ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಬಸಕ್ಕೆ ನಾಲ್ಕು ಬೋಗಿಗಳು ಪಲ್ಟಿ ಹೊಡೆದಿವೆ. ಪರಿಣಾಮ 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು 1 ಸಾವಿರ ಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ. ಮೂರನೇ ಸರಕು ಸಾಗಣೆ ರೈಲು ಕೂಡ ಈ ಅಪಘಾತದಲ್ಲಿ ಸಿಲುಕಿದೆ.

ಬೆಂಗಳೂರು-ಹೌರಾ ಸೂಪರ್‍ಫಾಸ್ಟ್ ಎಕ್ಸ್‍ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‍ಪ್ರೆಸ್ ಮತ್ತು ಗೂಡ್ಸ್ ರೈಲುಗಳನ್ನು ಸೇರಿವೆ. ಈ ಅಪಘಾತದಿಂದಾಗಿ ಇದುವರೆಗೆ ಇದೇ ಮಾರ್ಗದಲ್ಲಿ ಸಂಚರಿಸುವ 18 ರೈಲುಗಳನ್ನು ರದ್ದುಗೊಳಿಸಲಾಗಿದೆ.2016ರಲ್ಲಿ ಇಂದೋರ್-ಪಟನಾ ಎಕ್ಸ್‍ಪ್ರೆಸ್ ರೈಲು (19321) ಕಾನ್ಪುರ ಬಳಿ ಅಪಘಾತಕ್ಕೀಡಾಗಿ 150 ಮಂದಿ ಸಾವಿಗೀಡಾಗಿದ್ದರು. ಇದಾದ ಬಳಿಕ ಹಲವು ಅಪಘಾತಗಳು ಸಂಭವಿಸಿದ್ದರೂ ಸಹ ಈ ಪ್ರಮಾಣದಲ್ಲಿ ಸಾವು ನೋವು ಸಂಭವಿಸಿರಲಿಲ್ಲ.

#Balasoretrainaccident, 300killed, 1000injured, #three-train #Odisha,

- Advertisement -
RELATED ARTICLES
- Advertisment -

Most Popular