ಮೈಸೂರು, ಜೂ 26- ಚಾಮುಂಡಿ ಬೆಟ್ಟದಲ್ಲಿ ಮೊಬೈಲ್ ಹಾಗೂ ಕ್ಯಾಮೆರಾಗಳಲ್ಲಿ ರೀಲ್ಸ್ ಮಾಡುವುದು ಹಾಗೂ ಫೋಟೋ ತೆಗೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಆಷಾಢ ಮಾಸ ಹಿನ್ನೆಲೆಯಲ್ಲಿ ಅಷಾಢ ಶುಕ್ರವಾರಗಳಂದು ತಾಯಿ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವದಂದು ಪ್ರಾತಃಕಾಲ 05.30ಕ್ಕೆ ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆ, ಮಂಗಳಾರತಿ ಬೆಳಿಗ್ಗೆ 09.30ಕ್ಕೆ ಮಹಾಮಂಗಳಾರತಿ ನಂತರ ಬೆಳಿಗ್ಗೆ 10.30ಕ್ಕೆ ಅಮ್ಮನವರಿಗೆ ಚಿನ್ನದ ಪಲ್ಲಕ್ಕಿ ಉತ್ಸವ ಮಂಟಪೋತ್ಸವ, ಪ್ರಸಾದ ವಿನಿಯೋಗ ರಾತ್ರಿ 08.30ಕ್ಕೆ ಶ್ರೀಯವರಿಗೆ ಉತ್ಸವ ಫಲಪೂಜೆ, ದರ್ಬಾರ್ ಉತ್ಸವ, ಮಂಟಪೋತ್ಸವ, ರಾಷ್ಟ್ರಾಶೀರ್ವಾದ ಜರುಗಲಿದೆ.
ಈ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಾಲಯದಲ್ಲಿ ಉತ್ಸವ ಮೂರ್ತಿ, ಗರ್ಭಗುಡಿ ಮತ್ತು ಪ್ರಾಂಗಣದಲ್ಲಿ ಮೊಬೈಲ್ ಹಾಗೂ ಕ್ಯಾಮೆರಾದಲ್ಲಿ ರೀಲ್ಸ್ ಮಾಡುವುದು ಹಾಗೂ ಫೋಟೋ ತೆಗೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಫೋಟೋ ವಿಡಿಯೋ ಮಾಡಿದ್ದು ಕಂಡುಬಂದಲ್ಲಿ ಮೊಬೈಲ್ / ಕ್ಯಾಮೆರಾವನ್ನು ಶಾಶ್ವತವಾಗಿ ವಶಪಡಿಸಿಕೊಳ್ಳಲಾಗುತ್ತದೆ .
ಇನ್ನು ಮುಂದೆ ಪ್ರಾಧಿಕಾರದ ವತಿಯಿಂದಲೇ ಉತ್ಸವ ಮೂರ್ತಿಯ ಫೋಟೋ ಹಾಗೂ ವಿಡಿಯೋ ಚಿತ್ರೀಕರಿಸಿ ಮತ್ತು ನೇರಪ್ರಸಾರವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗುತ್ತದೆ.ಆಷಾಢ ಮಾಸದಲ್ಲಿ ಶುಕ್ರವಾರ, ಶನಿವಾರ ಮತ್ತು ಭಾನುವಾರ ಯಾವುದೇ ಖಾಸಗಿ ವಾಹನಗಳಿಗೆ ಬೆಟ್ಟಕ್ಕೆ ಪ್ರವೇಶವಿರುವುದಿಲ್ಲ.
- ಚೀನಾದಲ್ಲಿ ಪ್ರವಾಹಕ್ಕೆ ಆರು ಮಂದಿ ಬಲಿ
- ಸಂಸತ್ಗಿಂತ ಸಂವಿಧಾನವೇ ಸರ್ವೋಚ್ಚ : ಸಿಜೆಐ ಬಿ.ಆರ್. ಗವಾಯಿ
- 50 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಪೊಲೀಸರು
- ರಕ್ಷಣಾ ಸ್ವಾವಲಂಬನೆಗೆ ಒತ್ತು : ಪ್ರಧಾನಿ ಮೋದಿ
- ಅಧ್ಯಕ್ಷರು, ಸಚಿವರ ಬದಲಾವಣೆ : ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಗರಿಗೆದರಿದ ಚರ್ಚೆ