Friday, May 3, 2024
Homeರಾಜ್ಯವಿದ್ಯೆ ಕೇವಲ ಸರ್ಟಿಫಿಕೇಟ್ ಆಗಿರಬಾರದು, ಸಂಸ್ಕಾರ ಒಳಗೊಂಡಿರಬೇಕು : ಎಚ್‍ಡಿಡಿ

ವಿದ್ಯೆ ಕೇವಲ ಸರ್ಟಿಫಿಕೇಟ್ ಆಗಿರಬಾರದು, ಸಂಸ್ಕಾರ ಒಳಗೊಂಡಿರಬೇಕು : ಎಚ್‍ಡಿಡಿ

ಬೆಂಗಳೂರು, ಅ.17- ವಿದ್ಯೆ ಹಣ ಗಳಿಕೆಯ ಸಾಧನವಾಗದೆ ವ್ಯಕ್ತಿತ್ವ ರೂಪಿಸುವ ಸಾಧನವಾದಾಗ ಮಾತ್ರ ಬದುಕಿನಲ್ಲಿ ಸುಖ, ಶಾಂತಿ, ನೆಮ್ಮದಿ ಸಿಗಲು ಸಾಧ್ಯ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದರು. ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೊತಿ ಸಭಾಂಗಣದಲ್ಲಿ ನಡೆದ ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ ಮಾತನಾಡಿದ ಅವರು, ವಿದ್ಯೆ ಕೇವಲ ಕಾಗದದ ಸರ್ಟಿಫಿಕೇಟ್ ಆಗಿರಬಾರದು. ಅದು ಸಂಸ್ಕಾರವನ್ನು ಸಹ ಒಳಗೊಂಡಿರಬೇಕು ಎಂದರು.

ಪ್ರಸ್ತುತ ಎಲ್ಲಾ ವಿದ್ಯಾರ್ಥಿಗಳಿಗೂ ಗುಣಮಟ್ಟದ ಹಾಗೂ ನೈತಿಕ ಶಿಕ್ಷಣದ ಅಗತ್ಯ ಹೆಚ್ಚಿದೆ. ಅಂತಹ ಶಿಕ್ಷಣವನ್ನು ಬೆಂಗಳೂರು ವಿಶ್ವವಿದ್ಯಾಲಯ ನೀಡುತ್ತಿದೆ ಎಂದು ಹೇಳಿದರು. ವಿದ್ಯೆ ಮತ್ತು ಸಂಸ್ಕಾರ ಬದುಕಿನ ಬೇರುಗಳಿದ್ದಂತೆ. ಈ ಎರಡೂ ಒಟ್ಟಿಗೆ ಬೆಳೆದಾಗ ಮಾತ್ರ ಬದುಕಿಗೊಂದು ಸಾರ್ಥಕತೆ ಸಿಗುತ್ತದೆ. ಶಿಕ್ಷಣ ಅಂದರೆ ಪುಸ್ತಕ ಜ್ಞಾನ, ಅಕ್ಷರ ಜ್ಞಾನ ಮಾತ್ರವಲ್ಲ ಮನಸ್ಸಿಗೆ ಸಂಸ್ಕಾರವನ್ನು ಕೊಡುವುದೂ ಸಹ ಶಿಕ್ಷಣದ ಭಾಗ, ಬುದ್ದಿಯ ವಿಕಾಸದೊಂದಿಗೆ ಹೃದಯವಂತಿಕೆಯನ್ನೂ ಬೆಳೆಸಬೇಕು ಎಂದು ತಿಳಿಹೇಳಿದರು.

ವಿದ್ಯೆ ವಿನಯವನ್ನು ನೀಡುತ್ತದೆ. ವಿನಯದಿಂದ ಮನಷ್ಯನ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಆ ವ್ಯಕ್ತಿಯಿಂದ ಹಣ ಸಂಪಾದನೆ ಆಗುತ್ತದೆ. ಸಂಪಾದಿಸಿದ ಹಣದಿಂದ ಧರ್ಮ ಕಾರ್ಯಗಳನ್ನು ನಡೆಸಿದಾಗ ಮಾತ್ರ ಮನಸ್ಸಿಗೆ ತೃಪ್ತಿ ಸಿಗುತ್ತದೆ ಎಂದರು.

ವಿದ್ಯಾರ್ಥಿ ಜೀವನ ಒಂದು ತಪಸ್ಸು ಇದ್ದಂತೆ. ಪ್ರತಿ ವಿದ್ಯಾರ್ಥಿಯ ಜೀವನ ಕ್ರಮ ಶಿಸ್ತಿಗೆ ಒಳಪಡಬೇಕು. ವಿದ್ಯೆ ಕೇವಲ ಒಬ್ಬನ ಜೀವನವನ್ನು ಕಟ್ಟಿಕೊಡುವುದಷ್ಟೇ ಅಲ್ಲ ಒಂದು ದೇಶದ ಬೆಳವಣಿಗೆಯನ್ನೂ, ದೇಶದ ಸಂಸ್ಕೃತಿಯನ್ನು ಉನ್ನತಮಟ್ಟಕ್ಕೆ ಕೊಂಡೊಯ್ಯುತ್ತದೆ. ಒಟ್ಟಾರೆ ಹೇಳಬೇಕೆಂದರೆ ವಿದ್ಯೆ ಸಂಪತ್ತು ಹೌದು, ಸಂಸ್ಕಾರವೂ ಹೌದು ಎಂದು ಎಂದರು.

ಬೆಂಗಳೂರು ವಿಶ್ವವಿದ್ಯಾಲಯ ಲಕ್ಷಾಂತರ ವಿದ್ಯಾರ್ಥಿಗಳ ಜ್ಞಾನಭಂಡಾರ, ವಿದ್ಯಾರ್ಥಿಗಳಿಗೆ ನೈತಿಕ ಹಾಗೂ ಗುಣಮಟ್ಟದ ಶಿಕ್ಷಣವನ್ನು ಧಾರೆ ಎರೆಯುತ್ತಿರುವ ಜ್ಞಾನಾಲಯ, ಉನ್ನತ ಶಿಕ್ಷಣದಲ್ಲಿ ಉತ್ಕೃಷ್ಟತೆಯನ್ನು ಸಾಸುತ್ತಿರುವ ವಿಶ್ವವಿದ್ಯಾಲಯದ ಬಗ್ಗೆ ನನಗೆ ಅಪಾರ ಗೌರವವಿದೆ ಎಂದರು.

ಈ ಸಂಧರ್ಭದಲ್ಲಿ ಇಸ್ರೋದ ಅಧ್ಯಕ್ಷರಾದ ಎಸ್ ಸೋಮನಾಥ್ ಅವರಿಗೆ ನಾನು ವಿಶೇಷವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಯಶಸ್ವಿ ಚಂದ್ರಯಾನ-3ರ ರೂವಾರಿ ಆಗಿರುವ ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ನೀಡುತ್ತಿರುವುದು ನನಗೆ ಬಹಳ ಸಂತೋಷ ತಂದಿದೆ. ಇಸ್ರೋ ಸಂಸ್ಥೆ ಇವತ್ತು ನಮ್ಮ ಭಾರತ ದೇಶವನ್ನು ಬಾಹ್ಯಾಕಾಶದ ಭೂಪಟದಲ್ಲಿ ವಿಶ್ವಕ್ಕೆ ಪರಿಚಯ ಮಾಡಿ ನಮಗೆಲ್ಲಾ ಹೆಮ್ಮೆ ತಂದಿದೆ. ಈ ಸಂದರ್ಭದಲ್ಲಿ ಎಲ್ಲಾ ವಿಜ್ಞಾನಿಗಳು ಅಭಿನಂದಿಸುತ್ತೇನೆ ಎಂದರು.

ಹೊರ ರಾಜ್ಯದ ವಾಹನಗಳಿಗೆ ವಿನಾಯತಿ ನೀಡಿದ ಕರ್ನಾಟಕ ಸರ್ಕಾರ

ಬೆಂಗಳೂರು ವಿಶ್ವವಿದ್ಯಾನಿಲಯ ನನಗೆ ನೀಡಿರುವ ಗೌರವ ಡಾಕ್ಟರೇಟ್‍ನ್ನು ತುಂಬಾ ಸಂತೋಷದಿಂದ ಸ್ವೀಕರಿಸಿದ್ದೇನೆ ಎಂದು ಗೌಡರು ಹೇಳಿದರು. ಇಸ್ರೋದ ಅಧ್ಯಕ್ಷರಾದ ಎಸ್. ಸೋಮನಾಥ್ ಮಾತನಾಡಿ, ಬಾಹ್ಯಾಕಾಶ ಸಂಸ್ಥೆಯ ಪ್ರತಿನಿಯಾಗಿ ನನಗೆ ಲಭಿಸಿರೋ ಈ ಗೌರವ ಅತೀವ ಸಂತಸ ತಂದಿದೆ. ನೂತನ ತಂತ್ರಜ್ಞಾನಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ವೇದಿಕೆಯಾಗಿದೆ ಎನ್ನುವುದರಲ್ಲಿ ಸಂಶಯವಿಲ್ಲ. ದೇವೇಗೌಡರು ಹಿರಿಯ ರಾಜಕಾರಣಿ, ರಾಜಕೀಯ ವಿಶ್ಲೇಷಕ ಮಾತ್ರವಲ್ಲದೇ ಜನರ ಪ್ರಧಾನಿಯಾಗಿದ್ದವರು. ನನಗೆ ನೀಡಿದ ಗೌರವ ಡಾಕ್ಟರೇಟ್‍ಅನ್ನು ಚಂದ್ರಯಾನದ ಪ್ರತಿಯೊಬ್ಬ ವಿಜ್ಞಾನಿ ಹಾಗು ತಂತ್ರಜ್ಞಾನಿಗೂ ಅರ್ಪಿಸುತ್ತೇನೆ ಎಂದರು.

ನಾವು ಅನೇಕ ಬಾಹ್ಯಾಕಾಶ ವಿಚಾರದಲ್ಲಿ ಇಂದಿಗೂ ಅನ್ವೇಷಣೆ ನಡೆಸುತ್ತಲೇ ಇದ್ದೇವೆ. ಭಾರತದ ಶಕ್ತಿಯನ್ನು ಮತ್ತೊಮ್ಮೆ ಚಂದ್ರಯಾನ ಮುಖಾಂತರ ಸಾಬೀತು ಮಾಡಿದ್ದೇವೆ ಎಂದು ಅವರು ಹೇಳಿದರು. ಸೋಮನಾಥ್ ಅವರ ಅನುಪಸ್ಥಿತಿಯಲ್ಲಿ ಅವರ ಸಂದೇಶದ ವಿಡಿಯೋವನ್ನು ಘಟಿಕೋತ್ಸವದಲ್ಲಿ ಪ್ರದರ್ಶಿಸಲಾಯಿತು.

ಬೆಂಗಳೂರು ವಿಶ್ವ ವಿದ್ಯಾಲಯದ ಕುಲಾಪತಿಗಳಾದ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಲೋಟ್, ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ ಸುಧಾಕರ್, ಝರೋದಾ ಸಹ ಪ್ರಾಧ್ಯಾಕರಾದ ನಿಖಿಲ್ ಕಾಮತ್, ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಜಯಕರ, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಘಟಿಕೋತ್ಸವದಲ್ಲಿ ಒಟ್ಟು 299 ಚಿನ್ನದ ಪದಕ ಹಾಗೂ 113 ನಗದು ಬಹುಮಾನಗಳನ್ನು ಒಟ್ಟು 193 ವಿದ್ಯಾರ್ಥಿಗಳಿಗೆ ನೀಡಲಾಯಿತು. 204 ವಿದ್ಯಾರ್ಥಿಗಳಿಗೆ ಪಿಎಚ್‍ಡಿ ಪದವಿ ಪ್ರದಾನ ಮಾಡಲಾಗಿದೆ.

RELATED ARTICLES

Latest News