Friday, September 20, 2024
Homeರಾಜ್ಯನಾಗಮಂಗಲ ಗಲಭೆಯಲ್ಲಿ ಬಾಂಗ್ಲಾದೇಶಿಗಳ ಕೈವಾಡ : ಸುರೇಶ್‌ಗೌಡ ಹೊಸ ಬಾಂಬ್

ನಾಗಮಂಗಲ ಗಲಭೆಯಲ್ಲಿ ಬಾಂಗ್ಲಾದೇಶಿಗಳ ಕೈವಾಡ : ಸುರೇಶ್‌ಗೌಡ ಹೊಸ ಬಾಂಬ್

Bangladeshi involvement in Nagamangala riots: Suresh Gowda

ಮಂಡ್ಯ,ಸೆ.17- ನಾಗಮಂಗಲದಲ್ಲಿ ನಡೆದ ಗಲಭೆಯಲ್ಲಿ ಕೇವಲ ಕೇರಳ ಮೂಲದವರ ಕೈವಾಡವಿಲ್ಲ. ಅಕ್ರಮವಾಗಿ ನಾಗಮಂಗಲದಲ್ಲಿ ನೆಲೆಸಿರುವ ಬಾಂಗ್ಲಾದೇಶಿಗಳು ಇರುವ ಸಾಧ್ಯತೆ ಇದೆ ಎಂದು ಮಾಜಿ ಶಾಸಕ ಶಾಸಕ ಸುರೇಶ್‌ಗೌಡ ಹೇಳಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು ಪೊಲೀಸರು ಈಗ ಕೇರಳ ಮೂಲದ ನಿಷೇದಿತ ಸಂಘಟನೆಯ ಸದಸ್ಯರನ್ನು ಬಂಧಿಸಿದ್ದಾರೆ ಇದನ್ನು ನೋಡಿದರೆ ಗಲಭೆಯಲ್ಲಿ ಕೇವಲ ಕೇರಳ ಮೂಲದ ಪಿಎಫ್‌ಐ ಸಂಘಟನೆಯವರು ಮಾತ್ರವಲ್ಲ. ಬಾಂಗ್ಲಾದೇಶದಿಂದ ಆಕ್ರಮವಾಗಿ ಬಂದು ನಾಗಮಂಗಲ ತಾಲೂಕಿನಲ್ಲಿ ನೆಲಸಿರುವವರು ಸಹ ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ನಾಗಮಂಗಲ ತಾಲೂಕಿನ ಹಲವೆಡೆ ತೋಟದ ಮನೆಗಳಲ್ಲಿ ಅಕ್ರಮವಾಗಿ ಬಾಂಗ್ಲಾದೇಶದಿಂದ ಬಂದವರು ನೆಲೆಸಿದ್ದಾರೆ. ನಾನು ಶಾಸಕನಾಗಿದ್ದ ವೇಳೆ ಪೊಲೀಸ್‌‍ ಇಲಾಖೆಗೆ ಹಾಗೂ ಆಗಿನ ಗೃಹ ಸಚಿವರಿಗೂ ಮಾಹಿತಿ ನೀಡಿದ್ದೇನೆ. ಆದರೆ ಅವರನ್ನು ಪತ್ತೆ ಹಚ್ಚುವ ಕೆಲಸ ಮಾಡಿಲ್ಲ.

ಈ ತನಿಖೆಯನ್ನು ಎನ್‌ಐಎಗೆ ನೀಡಿದರೆ ಎಲ್ಲಾ ಸತ್ಯಗಳು ಹೊರಗೆ ಬರುತ್ತವೆ. ಹೀಗಾಗಿ ನಾಗಮಂಗಲ ಗಲಭೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

RELATED ARTICLES

Latest News