ಬರ ಪರಿಹಾರದ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕುಗಳು : HDK ಆಕ್ರೋಶ

ಬೆಂಗಳೂರು,ಮೇ 16- ರೈತರಿಗೆ ನೀಡಿರುವ ಬರ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ರಾಜ್ಯಸರ್ಕಾರ ತಾಕೀತು ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯಸರ್ಕಾರ ಕೂಡಲೇ ರೈತರಿಗೆ ಸಾಲ ನೀಡಿರುವ ಎಲ್ಲಾ ಬ್ಯಾಂಕುಗಳ ಮುಖ್ಯಸ್ಥರ ಸಭೆ ನಡೆಸಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಬೇಕು ಹಾಗೂ ಬರಪರಿಹಾರದ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಬೇಕು ಎಂದಿದ್ದಾರೆ. ಕೇಂದ್ರ ಸರ್ಕಾರದಿಂದ ರೈತರ ಬ್ಯಾಂಕ್‌ ಖಾತೆಗಳಿಗೆ ಜಮೆಯಾಗಿದ್ದ ಬರಪರಿಹಾರದ ಹಣವನ್ನು … Continue reading ಬರ ಪರಿಹಾರದ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕುಗಳು : HDK ಆಕ್ರೋಶ