ಬೆಂಗಳೂರು,ಆ.2- ಅಂತೂ ಇಂತೂ ಬಿಬಿಎಂಪಿಗೆ ಎಲೆಕ್ಷನ್ ನಡೆಯುವ ಸಾಧ್ಯತೆಗಳು ಗೋಚರಿಸುತ್ತಿವೆ.ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ಡಿಸಂಬರ್ ಒಳಗೆ ಬಿಬಿಎಂಪಿಯ ಐದು ಪಾಲಿಕೆಗೆ ಎಲೆಕ್ಷನ್ ನಡೆಸಲು ಸರ್ಕಾರ ಸಿದ್ದವಿದೆ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ.
ಅವರು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಅಫಿಡವಿಟ್ ಈ ಸಂಜೆಗೆ ಲಭ್ಯವಿದೆ. 26 ಪುಟಗಳ ಪ್ರಮಾಣ ಪತ್ರದಲ್ಲಿ ಬಿಬಿಎಂಪಿಯನ್ನು ಐದು ಪಾಲಿಕೆಗಳನ್ನಾಗಿ ವಿಂಗಡಿಸಿ, ಗಡಿ ಗುರುತಿಸಲಾಗಿದೆ. ಈ ಐದು ಪಾಲಿಕೆಗೆ ಚುನಾವಣೆ ನಡೆಸಲು ಸಿದ್ದವಿರೋದಾಗಿ ತಿಳಿಸಲಾಗಿದೆ.
ಬೆಂಗಳೂರು ಪಶ್ಚಿಮ ನಗರ ಪಾಲಿಕೆ,ಚ ಬೆಂಗಳೂರು ದಕ್ಷಿಣ ನಗರ ಪಾಲಿಕೆ, ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಪೂರ್ವ ನಗರ ಪಾಲಿಕೆ ಹಾಗೂ ಬೆಂಗಳೂರು ಉತ್ತರ ನಗರ ಪಾಲಿಕೆ ರಚನೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಗರಿಗೆದರಿದ ಚಟುವಟಿಕೆ: ನವಂಬರ್ ಒಳಗೆ ಎಲ್ಲಾ ಜಿಬಿಎ ರಚನೆ ಕಾರ್ಯಗಳನ್ನು ಪೂರ್ಣಗೊಳಿಸಿ ಚುನಾವಣೆ ನಡೆಸಲು ಸಿದ್ದ ಎಂದು ಸರ್ಕಾರ ಪ್ರಮಾಣ ಪತ್ರ ಸಲ್ಲಿಸುತ್ತಿದ್ದಂತೆ ಕಳೆದ ಐದು ವರ್ಷಗಳಿಂದ ಚುನಾವಣೆಗಾಗಿ ಕಾಯುತ್ತಿದ್ದ ಆಕಾಂಕ್ಷಿಗಳು ನಿದ್ದೆಯಿಂದ ಎಚ್ಚೆತ್ತವರಂತೆ ಚುರುಕಾಗಿದ್ದಾರೆ.ಈಗಾಗಲೇ ಕೆಲ ಶಾಸಕರು ತಮ ಬೆಂಬಲಿಗರೊಂದಿಗೆ ಚುನಾವಣೆ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇದುವರೆಗೂ ಶಾಸಕರ ಕೈಗೆ ಸಿಗದೆ ಸಬೂಬು ಹೇಳಿ ತಪ್ಪಿಸಿಕೊಳ್ಳುತ್ತಿದ್ದ ಆಕಾಂಕ್ಷಿಗಳು ತಮ ನಾಯಕರ ಮನೆಗಳಿಗೆ ದೌಡಾಯಿಸಿ ಅವರ ಆರ್ಶೀವಾದ ಪಡೆದು ಟಿಕೆಟ್ ಗಿಟ್ಟಿಸಿಕೊಳ್ಳುವ ಕಾರ್ಯಕ್ಕೂ ಕೈ ಹಾಕಿದ್ದಾರೆ ಎಂದು ತಿಳಿದುಬಂದಿದೆ.
2026ಕ್ಕೆ ಚುನಾವಣೆ: ಸರ್ಕಾರ ಜಿಬಿಎ ಕಾರ್ಯವನ್ನು ನವಂಬರ್ ಅಂತ್ಯದೊಳಗೆ ಪೂರ್ಣಗೊಳಿಸಿದರೂ ಚುನಾವಣೆ ನಡೆಸಲು ನಮಗೆ ಎರಡು ತಿಂಗಳ ಸಮಯ ಬೇಕು ಎಂದು ಚುನಾವಣಾ ಆಯೋಗ ನ್ಯಾಯಾಲಯಕ್ಕೆ ತಿಳಿಸಿರುವುದರಿಂದ ಎಲ್ಲಾ ಅಂದುಕೊಂಡಂತೆ ನಡೆದರೆ 2026ರ ಆರಂಭದಲ್ಲಿ ಬಿಬಿಎಂಪಿಯ ಐದು ಪಾಲಿಕೆಗಳಿಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ.
- ಹೈಕೋರ್ಟ್ ಎಚ್ಚರಿಕೆ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದ ಸಾರಿಗೆ ನೌಕರರು
- ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ಗೆ ಮತ್ತೆ 40 ದಿನಗಳ ಪೆರೋಲ್
- “ಸಿದ್ದರಾಮಯ್ಯನವರೇ, ಈ ನವರಂಗಿ ಆಟ ನಿಲ್ಲಿಸಿ, ರಾಜೀನಾಮೆ ನೀಡಿ ಕರ್ನಾಟಕವನ್ನು ಉಳಿಸಿ” : ಆರ್.ಅಶೋಕ್
- ರಾಹುಲ್ ಗಾಂಧಿಗೆ ಛೀಮಾರಿ ಹಾಕಿದ ಸುಪ್ರೀಂ, ಇಂಡಿ ನಾಯಕರ ಆಕ್ಷೇಪ
- ಉತ್ತರ ಕಾಶಿಯಲ್ಲಿ ಭೀಕರ ಮೇಘ ಸ್ಫೋಟ : ಹಲವರ ಸಾವು, 60ಕ್ಕೂ ಹೆಚ್ಚು ಜನ ನಾಪತ್ತೆ