ಬೆಂಗಳೂರು, ಜು. 3- ಒಳ ಮೀಸಲಾತಿ ಸ್ಟಿಕರ್ ಅಳವಡಿಕೆ ಸಂದರ್ಭದಲ್ಲಿ ಮನೆ ಮಾಲಿಕರ ಮೇಲೆ ಹಲ್ಲೆ ನಡೆಸಿದ್ದ ಮೂವರು ಬಿಬಿಎಂಪಿ ಸಿಬ್ಬಂದಿಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಕಂದಾಯ ವಸೂಲಿಗಾರರಾದ ಸೇಂದಿಲ್ ಕುಮಾರ್, ಪೆದ್ದರಾಜು ಹಾಗೂ ರೆವಿನ್ಯೂ ಇನ್್ಸಪೆಕ್ಟರ್ ರಮೇಶ್ ಅಮಾನತುಗೊಂಡ ಬಿಬಿಎಂಪಿ ನೌಕರರಾಗಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಚಿಕ್ಕಕಲ್ಲಸಂದ್ರ ವಾರ್ಡ್ನ ಸಾರ್ವಭೌಮನಗರದಲ್ಲಿ ಬೇಕಾಬಿಟ್ಟಿ ಸ್ಟಿಕ್ಕರ್ ಅಂಟಿಸಿದ್ದೇ ಅಲ್ಲದೆ ಅದನ್ನು ಪ್ರಶ್ನಿಸಿದ್ದ ಮನೆ ಮಾಲೀಕ ನಂದೀಶ್ ಎಂಬುವರ ಮೇಲೆ ಹಲ್ಲೆ ನಡೆಸಿದ್ದರು.
ಬಿಬಿಎಂಪಿ ಸಿಬ್ಬಂದಿಗಳ ಈ ಹಲ್ಲೆ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಹೀಗಾಗಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ರಾವ್ ಆದೇಶ ಹೊರಡಿಸಿದ್ದಾರೆ.
- ಬೈಕ್ ಅಪಘಾತದಲ್ಲಿ ಯೋಗ ಗುರು ವಚನಾನಂದ ಶ್ರೀಗಳ ಸಹೋದರ ಸಾವು
- ಹಾಸನದಲ್ಲಿ ನಿಲ್ಲದ ಹೃದಯಾಘಾತ ಸಾವಿನ ಸರಣಿ, ಮೃತರ ಸಂಖ್ಯೆ 31ಕ್ಕೆ ಏರಿಕೆ
- ಹೃದಯಘಾತಕ್ಕೆ ಕೊರೊನಾ ಲಸಿಕೆ ಕಾರಣ ಎಂಬ ಸಿಎಂ ಹೇಳಿಕೆ ತಪ್ಪು ; ಮಜುಂದಾರ್ ಶಾ
- ಮನೆ ಮಾಲಿಕನ ಮೇಲೆ ಹಲ್ಲೆ ನಡೆಸಿದ್ದ ಬಿಬಿಎಂಪಿ ಸಿಬ್ಬಂದಿಗಳ ಅಮಾನತು
- ಸಚಿವ ಕೆ.ಎನ್. ರಾಜಣ್ಣ ಅವರಿಗೆ ನೋಟಿಸ್ ನೀಡುವಂತೆ ಕಾಂಗ್ರೆಸ್ ಶಾಸಕರು ಆಗ್ರಹ