Thursday, June 5, 2025
Homeಬೆಂಗಳೂರುಐಪಿಎಲ್ ಪಂದ್ಯದ ವೇಳೆ ಅತಿರೇಕದ ವರ್ತನೆ ತೋರಿದರೆ ಹುಷಾರ್

ಐಪಿಎಲ್ ಪಂದ್ಯದ ವೇಳೆ ಅತಿರೇಕದ ವರ್ತನೆ ತೋರಿದರೆ ಹುಷಾರ್

Be careful if you behave excessively during the IPL match

ಬೆಂಗಳೂರು, ಜೂ.3-ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್‌ನ ಫೈನಲ್ ಪಂದ್ಯದಲ್ಲಿ ಯಾವುದೇ ತಂಡ ಗೆದ್ದ ನಂತರ ಸಂಭ್ರಮಾಚರಣೆ ಮಾಡುವ ಸಂದರ್ಭದಲ್ಲಿ ಕಾನೂನು ಚೌಕಟ್ಟಿನ್ನಲೇ ಆಚರಿಸಬೇಕು, ಇತರರಿಗೆ ತೊಂದರೆ ಕೊಡಬಾರದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಾದ್ಯಂತ ಪೊಲೀಸರು ಬಂದೋಬಸ್ತ್ ಮಾಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ, ಸರ್ಕಾರಿ ಕಚೇರಿಗಳ ಬಳಿ ನಾವು ಅಧಿಕಾರಿಗಳನ್ನು ನಿಯೋಜಿಸಿದ್ದೇವೆ ಎಂದರು.

ಕ್ರಿಕೆಟ್ ಅಭಿಮಾನಿಗಳು ಸಂಭ್ರಮದ ವೇಳೆ ಯಾವುದೇ ರೀತಿಯ ಅತಿರೇಕದ ವರ್ತನೆ ತೋರಬಾರದು.ಕಾನೂನು ಚೌಕಟ್ಟಿನಲ್ಲಿ ಆಚರಿಸಿ ಇತರರಿಗೆ ತೊಂದರೆ ಕೊಡಬೇಡಿ ಎಂದು ಪುನರುಚ್ಚರಿಸಿದರು.

ಆರ್‌ಸಿಬಿ ಮತ್ತು ಪಂಜಾಬ್ ನಡುವೆ ನಡೆಯಲಿರುವ ಟಿ-20 ಕ್ರಿಕೆಟ್ ವೀಕ್ಷಣೆಗಾಗಿ ನಗರದ ಬಹುತೇಕ ಕಡೆಗಳಲ್ಲಿ ದೊಡ್ಡ ದೊಡ್ಡ ಸ್ಟೀನ್‌ಗಳನ್ನು ಅಳವಡಿಸಲಾಗಿದೆ. ಅಲ್ಲಿಯೂ ಸಹ ಆವೇಶಕ್ಕೊಳಗಾಗಿ ಯಾವುದೇ ರೀತಿಯ ಘಟನೆಗಳು ನಡೆಯದಂತೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಒಟ್ಟಾರೆ ಅಭಿಮಾನಿಗಳು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ವರ್ತಿಸಬೇಕೆಂದು ಆಯುಕ್ತರು ಮನವಿ ಮಾಡಿದ್ದಾರೆ.

RELATED ARTICLES

Latest News