Friday, May 30, 2025
Homeಜಿಲ್ಲಾ ಸುದ್ದಿಗಳು | District Newsಬಳ್ಳಾರಿ : ಹೃದಯಾಘಾತದಿಂದ ಹೆಡ್ ಕಾನ್‌ಸ್ಟೇಬಲ್ ಸಾವು

ಬಳ್ಳಾರಿ : ಹೃದಯಾಘಾತದಿಂದ ಹೆಡ್ ಕಾನ್‌ಸ್ಟೇಬಲ್ ಸಾವು

Bellary: Head constable dies of heart attack

ಬಳ್ಳಾರಿ, ಮೇ 26- ಹೃದಯಾಘಾತದಿಂದ ಮುಖ್ಯ ಪೇದೆಯೊಬ್ಬರು ಮೃತಪಟ್ಟಿದ್ದಾರೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಕರ್ತವ್ಯ ನಿರ್ವಹಿಸುತ್ತಿದ್ದ ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಮದ ಆರ್.ದಾದಾಸಾಹೇಬ್ (51) ಮೃತರು. ಇವರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಆಗಲಿದ್ದಾರೆ.

ಕಳೆದ 26 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಾದಾಸಾಹೇಬ್ ಅವರು ಪ್ರಸ್ತುತ ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಹೃದಯಾಘಾತದಿಂದ ಮೃತಪಟ್ಟ ದಾದಾಸಾಹೇಬ್ ಅವರ ಅಕಾಲಿಕ ಸಾವಿಗೆ ಪೊಲೀಸ್ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ಹೊಸಪೇಟೆಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿ ವಾರಸುದಾರರಿಗೆ ಶವ ಹಸ್ತಾಂತರಿಸಲಾಗಿದೆ.

RELATED ARTICLES

Latest News