Saturday, July 27, 2024
Homeಬೆಂಗಳೂರುಬೆಂಗಳೂರು : ಆಟೋ ಚಾಲಕನ ಬರ್ಬರ ಹತ್ಯೆ

ಬೆಂಗಳೂರು : ಆಟೋ ಚಾಲಕನ ಬರ್ಬರ ಹತ್ಯೆ

ಬೆಂಗಳೂರು,ಡಿ.6- ಸ್ನೇಹಿತರೊಂದಿಗೆ ರಸ್ತೆಬದಿ ಮಾತನಾಡುತ್ತಾ ನಿಂತಿದ್ದ ಆಟೋಚಾಲಕನನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬ್ಯಾಟರಾಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.ಬ್ಯಾಟರಾಯಪುರ ನಿವಾಸಿ ಅರುಣ್(24) ಕೊಲೆಯಾದ ಆಟೋ ಚಾಲಕ.

ರಾತ್ರಿ 10.30 ರ ಸುಮಾರಿನಲ್ಲಿ ಟಿಂಬರ್ ಲೇಔಟ್ ಬಳಿ ಸ್ನೇಹಿತರ ಜೊತೆ ಅರುಣ್ ಮಾತನಾಡುತ್ತಾ ನಿಂತಿದ್ದರು. ಆ ಸಂದರ್ಭದಲ್ಲಿ ಬೈಕ್ಗಳಲ್ಲಿ ಬಂದ ಆರೇಳು ಮಂದಿ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಅರುಣ್ ಮೇಲೆ ಮನಬಂದಂತೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಮುಸ್ಲಿಮರಿಗೆ 10,000 ಕೋಟಿ ಕೊಡುವುದಾಗಿ ಸಿಎಂ ಹೇಳಿಕೆ, ಸದನ ಕೋಲಾಹಲ

ಸುದ್ದಿ ತಿಳಿದು ಬ್ಯಾಟರಾಯಪುರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗೆ ಶೋಧ ಕೈಗೊಂಡಿದ್ದಾರೆ.

ಆಟೋ ಚಾಲಕ ಅರುಣ್ ಮದುವೆಯಾಗಲು ಸಿದ್ದತೆ ಮಾಡಿಕೊಂಡಿದ್ದರು. ಇದೀಗ ಆತನೇ ಕೊಲೆಯಾಗಿದ್ದು, ಯಾವ ಕಾರಣಕ್ಕೆ ಯಾರು ಕೊಲೆ ಮಾಡಿದ್ದಾರೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಯುವತಿ ವಿಚಾರದಲ್ಲಿ ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES

Latest News