ಬೆಂಗಳೂರು,ಜು.31-ಕೌಟುಂಬಿಕ ಕಲಹದಿಂದ ಮನನೊಂದ ಪತ್ನಿ ತನ್ನ ಕರಳ ಕುಡಿಗೆ ವಿಷ ಕುಡಿಸಿ ನಂತರ ತಾನೂ ಕುಡಿದು ಆತಹತ್ಯೆಗೆ ಯತ್ನಿಸಿದ್ದು, ದುರದೃಷ್ಟವಶಾತ್ ಮಗು ಮೃತಪಟ್ಟಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯಲ್ಲಿ ಒಂದು ವರ್ಷ ಎಂಟು ತಿಂಗಳ ಹೆಣ್ಣು ಮಗು ಮೃತಪಟ್ಟಿದ್ದು, ತಾಯಿ ಚಂದ್ರಿಕಾ (26) ಸ್ಥಿತಿ ಗಂಭೀರವಾಗಿದೆ.ತಿಗಳರಪಾಳ್ಯದಲ್ಲಿ ಲೋಕೇಶ್ – ಚಂದ್ರಿಕಾ ದಂಪತಿ ವಾಸವಾಗಿದ್ದು,
ಇವರಿಗೆ ಒಂದು ಮಗುವಿದೆ. ದಂಪತಿ ಮಧ್ಯೆ ಕೌಟುಂಬಿಕ ವಿಚಾರಕ್ಕೆ ಜಗಳವಾಗಿದೆ. ನಿನ್ನೆ ಲೋಕೇಶ್ ಅವರು ಕೆಲಸಕ್ಕೆ ಹೋಗಿದ್ದಾಗ, ಗಂಡನ ಮೇಲಿನ ಕೋಪಕ್ಕೆ ಚಂದ್ರಿಕಾ ಕ್ರಿಮಿನಾಶಕವನ್ನು ಟೀ ಯಲ್ಲಿ ಬೆರೆಸಿ ಅದನ್ನು ಮೊದಲು ಮಗುವಿಗೆ ಕುಡಿಸಿ ನಂತರ ತಾನೂ ಸೇವಿಸಿದ್ದಾರೆ.
ಹೊಟ್ಟೆ ನೋವಿನಿಂದ ಚಂದ್ರಿಕಾ ಕೂಗಾಡುತ್ತಿದ್ದಾಗ ಅಕ್ಕಪಕ್ಕದವರು ಬಂದು ನೋಡಿ ತಕ್ಷಣ ತಾಯಿ ಮಗುವನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ.ವೈದ್ಯರು ಮಗುವನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಹೇಳಿದ್ದಾರೆ. ಚಂದ್ರಿಕಾ ಸ್ಥಿತಿ ಗಂಭೀರವಾಗಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.ಈ ಬಗ್ಗೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
- ಲಭ್ಯವಾಗಿರುವ ಅಸ್ಥಿಪಂಜರಗಳ ರಹಸ್ಯ ಬೇಧಿಸಲು ಮುಂದಾದ ಎಸ್ಐಟಿ
- ಹೂವಿನಲ್ಲಿ ಅರಳಲಿದ್ದಾರೆ ಕಿತ್ತೂರು ರಾಣಿ ಚೆನ್ನಮ ಮತ್ತು ಸಂಗೊಳ್ಳಿ ರಾಯಣ್ಣ
- ರಾಹುಲ್ ಗಾಂಧಿ ಆರೋಪಗಳು ಆಧಾರ ರಹಿತ : ಚುನಾವಣಾ ಆಯೋಗ
- ಸ್ಮೋಕಿಂಗ್ ಜೋನ್ ಇಲ್ಲದ ಬಾರ್ಗಳಿಗೆ ನೋಟೀಸ್
- ಮುಂದುವರೆದ ಸಿಎಂ-ಡಿಸಿಎಂ ಮುಸುಕಿನ ಗುದ್ದಾಟ, ಸಂಧಾನಕ್ಕೆ ‘ಕೈ’ಕಮಾಂಡ್ ಸರ್ಕಸ್