Sunday, April 28, 2024
Homeಬೆಂಗಳೂರುಬೆಂಗಳೂರು : ಕಟ್ಟಡದಿಂದ ಜಿಗಿದು ನವವಿವಾಹಿತ ಆತ್ಮಹತ್ಯೆ

ಬೆಂಗಳೂರು : ಕಟ್ಟಡದಿಂದ ಜಿಗಿದು ನವವಿವಾಹಿತ ಆತ್ಮಹತ್ಯೆ

ಬೆಂಗಳೂರು,ಸೆ.24- ನವವಿವಾಹಿತೆಯೊಬ್ಬರು ಕಟ್ಟಡದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಭುವನೇಶ್ವರಿನಗರದ ನಾಲ್ಕನೇ ಕ್ರಾಸ್ ನಿವಾಸಿ ರಮ್ಯಾ (27) ಆತ್ಮಹತ್ಯೆ ಮಾಡಿಕೊಂಡಿರುವ ನವವಿವಾಹಿತೆ.

ಒಂದೂವರೆ ವರ್ಷದ ಹಿಂದೆಯಷ್ಟೇ ವೆಂಕಟೇಶ್ ಎಂಬುವವರನ್ನು ರಮ್ಯಾ ವಿವಾಹವಾಗಿದ್ದು, ಭುವನೇಶ್ವರಿ ನಗರದಲ್ಲಿ ವಾಸವಾಗಿದ್ದರು. ದಂಪತಿ ಅನ್ಯೋನ್ಯವಾಗಿಯೇ ಇದ್ದರು ಎಂದು ಹೇಳಲಾಗಿದೆ.

BIG NEWS : ಸೆ.29 ರಂದು ‘ಕರ್ನಾಟಕ ಬಂದ್’ಗೆ ಕರೆಕೊಟ್ಟ ವಾಟಾಳ್

ರಾತ್ರಿ 8 ಗಂಟೆ ಸುಮಾರಿನಲ್ಲಿ ರಮ್ಯಾ ಮನೆಯ ಮೂರನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಸುದ್ದಿ ತಿಳಿದು ಜ್ಞಾನಭಾರತಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News