ಬೆಂಗಳೂರು, ಜು.30– ಕಳೆದ ಒಂದು ವಾರದಲ್ಲೇ 10 ಸಾವಿರಕ್ಕೂ ಹೆಚ್ಚು ಮಂದಿಗೆ ಬೀದಿ ನಾಯಿ ಕಚ್ಚಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ.ನಗರದ ಬೀದಿ ನಾಯಿಗಳ ದಾಳಿಗೆ ವೃದ್ಧರೊಬ್ಬರು ಬಲಿಯಾದ ಬಳಿಕ ಜನರಲ್ಲಿ ನಾಯಿಗಳ ಬಗ್ಗೆ ಭಯ ಹುಟ್ಟಿರುವ ಸಂದರ್ಭದಲ್ಲೇ ಈ ಅಂಕಿ ಅಂಶ ಬಹಿರಂಗಗೊಂಡಿದೆ.
ಇಲ್ಲಿಯವರೆಗೆ ರಾಜ್ಯದಲ್ಲಿ 2.60 ಲಕ್ಷಕ್ಕೂ ಹೆಚ್ಚು ಮಂದಿಗೆ ಬೀದಿ ನಾಯಿಗಳು ಕಚ್ಚಿರುವುದು ಬೆಳಕಿಗೆ ಬಂದಿದೆ.ಆದರಲ್ಲೂ ಕಳೆದ ಒಂದೇ ವಾರದಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಮೇಲೆ ಶ್ವಾನಗಳು ದಾಳಿ ನಡೆಸಿವೆಯಂತೆ.
ಇದುವರೆಗೂ 2.60 ಲಕ್ಷ ಮಂದಿಗೆ ಬೀದಿ ನಾಯಿಗಳು ಕಚ್ಚಿದ್ದು ಅವರಲ್ಲಿ 23 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.ಅದರಲ್ಲೂ ಕಳೆದ ಕೆಲವು ದಿನಗಳಿಂದ 10242 ಮಂದಿ ಮೇಲೆ ಶ್ವಾನಗಳು ದಾಳಿ ನಡೆಸಿದ್ದು, ಮೊನ್ನೆಯಷ್ಟೇ ಕೊಡಿಗೆಹಳ್ಳಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಗೆ ಸೀತಪ್ಪ ಎಂಬ ವೃದ್ಧರು ಪ್ರಾಣ ಕಳೆದುಕೊಂಡಿದ್ದರು.ಹೀಗಾಗಿ ನಗರದಲ್ಲಿ ಹೆಚ್ಚುತ್ತಿರುವ ನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಪ್ರಜ್ಞಾವಂತ ನಾಗರೀಕರು ಆಗ್ರಹಿಸುತ್ತಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-07-2025)
- ಡಿ.ಕೆ. ಸುರೇಶ ಕೆಎಂಎಫ್ ಅಧ್ಯಕ್ಷಗಾದಿ ಕನಸಿಗೆ ನಾನಾ ವಿಘ್ನ
- “ದಿ ರಾಮೇಶ್ವರಂ ಕೆಫೆ” ವತಿಯಿಂದ ಉತ್ತರ ಭಾರತದ ಶೈಲಿಯ “ತೀರ್ಥ” ಕೆಫೆ ಆರಂಭ
- ಆ.1 ರಿಂದ ಬೆಸ್ಕಾಂ ಬಿಲ್ ಪಾವತಿಯ ATP ಸೇವೆ ಸ್ಥಗಿತ
- ಮನೆಯ ಟೆರೇಸ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗರ್ಭಿಣಿ ಶವ ಮಹಿಳೆ