Monday, October 13, 2025
Homeರಾಷ್ಟ್ರೀಯ | Nationalಲಾಲೂ ಕುಟುಂಬಕ್ಕೆ ಮತ್ತೆ ಕಂಟಕ

ಲಾಲೂ ಕುಟುಂಬಕ್ಕೆ ಮತ್ತೆ ಕಂಟಕ

Big setback for RJD ahead of Bihar election: Charges framed against Lalu, family in IRCTC case

ನವದೆಹಲಿ, ಅ.13- ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾದ ಬೆನ್ನಲ್ಲೇ ಲಾಲೂ ಕುಟುಂಬಕ್ಕೆ ಮತ್ತೆ ಕಂಟಕ ಎದುರಾಗಿದೆ.ಐಆರ್‌ಸಿಟಿಸಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್‌ ಕುಟುಂಬದವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ದೆಹಲಿ ನ್ಯಾಯಲಯ ಇಂದು ಆದೇಶ ಹೊರಡಿಸಿದೆ.

ಲಾಲೂ ಅವರ ಪತ್ನಿ ಮತ್ತು ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಮತ್ತು ಅವರ ಪುತ್ರ ತೇಜಸ್ವಿ ಯಾದವ್‌ ವಿರುದ್ಧ ಆರೋಪಗಳನ್ನು ರೂಪಿಸಲು ದೆಹಲಿ ನ್ಯಾಯಾಲಯ ಆದೇಶಿಸಿದೆ.

ಲಾಲು ಪ್ರಸಾದ್‌ ಯಾದವ್‌ ವಿರುದ್ಧ ಸಾರ್ವಜನಿಕ ಸೇವಕನ ಕ್ರಿಮಿನಲ್‌ ದುರ್ನಡತೆ ಮತ್ತು ವಂಚನೆಗೆ ಕ್ರಿಮಿನಲ್‌ ಪಿತೂರಿ ಆರೋಪ ಹೊರಿಸಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ, ಆದರೆ ರಾಬ್ಡಿ ದೇವಿ ಮತ್ತು ತೇಜಸ್ವಿ ಯಾದವ್‌ ವಿರುದ್ಧ ವಂಚನೆ ಮತ್ತು ವಂಚನೆಗೆ ಪಿತೂರಿ ಆರೋಪಗಳನ್ನು ಎದುರಿಸಬೇಕಾಗುತ್ತದೆ.

RELATED ARTICLES

Latest News