Thursday, July 24, 2025
Homeರಾಜ್ಯಬಿಕ್ಲು ಶಿವ ಕೊಲೆ ಪ್ರಕರಣ : 2ನೇ ಬಾರಿಗೆ ವಿಚಾರಣೆಗೆ ಹಾಜರಾದ ಭೈರತಿ ಬಸವರಾಜ್‌

ಬಿಕ್ಲು ಶಿವ ಕೊಲೆ ಪ್ರಕರಣ : 2ನೇ ಬಾರಿಗೆ ವಿಚಾರಣೆಗೆ ಹಾಜರಾದ ಭೈರತಿ ಬಸವರಾಜ್‌

Biklu Shiva murder case: Bhairati Basavaraj appears for questioning for the 2nd time

ಬೆಂಗಳೂರು,ಜು.23-ರೌಡಿ ಶಿವಪ್ರಕಾಶ್‌ ಅಲಿಯಾಸ್‌‍ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಶಾಸಕ ಭೈರತಿಬಸವರಾಜು ಅವರು ಇಂದು ಭಾರತಿನಗರ ಪೊಲೀಸ್‌‍ ಠಾಣೆಯಲ್ಲಿ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.

ತನಿಖಾಧಿಕಾರಿಯಾಗಿರುವ ಎಸಿಪಿ ಅವರು ಇಂದು ಬೆಳಗ್ಗೆ ಬೈರತಿಬಸವರಾಜು ಅವರನ್ನು ವಿಚಾರಣೆಗೆ ಒಳಪಡಿಸಿ ಈ ಪ್ರಕರಣದ ಬಗ್ಗೆ ಕೆಲವು ಮಾಹಿತಿ ಗಳನ್ನು ಪಡೆದುಕೊಂಡರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಶನಿವಾರ ಬೈರತಿಬಸವರಾಜು ಅವರು ಠಾಣೆಗೆ ಹಾಜರಾಗಿದ್ದ ಸಂದರ್ಭದಲ್ಲಿ ಸತತ 3 ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದರು.

ಇಂದು ಮತ್ತೆ ವಿಚಾರಣೆಗೆ ಬರುವಂತೆ ಸೂಚಿಸಿದ್ದರಿಂದ ಎರಡನೇ ಬಾರಿಗೆ ಹಾಜರಾದರು. ಈ ಪ್ರಕರಣದಲ್ಲಿ ಈಗಾಗಲೇ 11 ಮಂದಿಯನ್ನು ಬಂಧಿಸಿರುವ ಪೊಲೀಸರು, ಅವರುಗಳ ಪಾತ್ರದ ಬಗ್ಗೆ ಒಬ್ಬಬ್ಬರಿಂದಲೂ ನಿಖರವಾದ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.

RELATED ARTICLES

Latest News