Sunday, April 28, 2024
Homeಇದೀಗ ಬಂದ ಸುದ್ದಿಸಿದ್ದರಾಮಯ್ಯರನ್ನು ದೃತರಾಷ್ಟ್ರನಿಗೆ ಹೋಲಿಸಿದ ಬಿಜೆಪಿ

ಸಿದ್ದರಾಮಯ್ಯರನ್ನು ದೃತರಾಷ್ಟ್ರನಿಗೆ ಹೋಲಿಸಿದ ಬಿಜೆಪಿ

ಬೆಂಗಳೂರು,ನ.19- ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪುತ್ರ ಯತೀಂದ್ರ ಅವರನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ಪರಿ ದೃತರಾಷ್ಟ್ರನಿಗೂ ಅವರಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಬಿಜೆಪಿ ಕಿಡಿಕಾರಿದೆ.

ತನ್ನ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ವರ್ಗಾವಣೆಗೆ ಫೋನ್ ಕರೆ ಮಾಡಿ ಹಲೋ ಅಪ್ಪ ಎಂದ ಪುತ್ರ ಡಾ.ಯತೀಂದ್ರ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಸಮರ್ಥನೆ ಮಾಡುತ್ತಿರುವ ಪರಿ ದೃತರಾಷ್ಟ್ರನಿಗೂ, ಸಿದ್ದರಾಮಯ್ಯನಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಟೀಕಿಸಿದೆ.

ಡಾ.ಯತೀಂದ್ರ ಅವರನ್ನು ಸಮರ್ಥಿಸಿಕೊಳ್ಳುತ್ತಿರುವ ಪರಿ ಹೇಗಿದೆ ಎಂದರೆ ಸ್ವಾತಂತ್ರ ಇಲ್ವಾ? ಅಧಿಕಾರ ಇಲ್ವಾ? ಶ್ಯಾಡೊ ಸಿಎಂ ಅಲ್ವಾ? ಮುಖ್ಯಮಂತ್ರಿ ಮಗ ಅಲ್ವಾ? ಕ್ಷೇತ್ರ ನೋಡಿಕೊಳ್ಳಬಾರದ?ನನಗೆ ಕ್ಷೇತ್ರ ಬಿಟ್ಟು ಕೊಟ್ಟಿಲ್ವಾ? ಎಂದು ಸಿದ್ದರಾಮಯ್ಯನವರಿಗೆ ಎಕ್ಸ್ ಮೂಲಕ ಟಾಂಗ್ ಕೊಟ್ಟಿದೆ.

ವಿಶ್ವಕಪ್: ಭಾರತದ ಗೆಲುವಿಗೆ ದೇಶಾದ್ಯಂತ ವಿಶೇಷ ಪೂಜೆ, ಹೋಮ-ಹವನ

RELATED ARTICLES

Latest News