Sunday, July 7, 2024
Homeರಾಜಕೀಯಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿ ದ್ವೇಷ ರಾಜಕಾರಣ ಮಾಡಿದ್ದರು : ಡಿಕೆಶಿ

ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿ ದ್ವೇಷ ರಾಜಕಾರಣ ಮಾಡಿದ್ದರು : ಡಿಕೆಶಿ

ಬೆಂಗಳೂರು, ಜೂ.14- ಕಾಂಗ್ರೆಸ್‌‍ ಯಾರ ವಿರುದ್ಧವೂ ದ್ವೇಷ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿಸಿ ಕೋರ್ಟಿಗೆ ಹೋಗುವಂತೆ ಮಾಡಿದ್ದು ದ್ವೇಷ ರಾಜಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಬಿಬಿಎಂಪಿ ವತಿಯಿಂದ ಕಬ್ಬನ್‌ಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದ್ವೇಷ ರಾಜಕಾರಣದ ಬಗ್ಗೆ ನಾನು ಮಾತನಾಡಲು ಆರಂಭಿಸಿದರೆ ಅದು ಎಲ್ಲೆಲ್ಲಿಗೋ ಹೋಗುತ್ತದೆ. ನನಗೆ ಅದರ ನೋವು ಗೊತ್ತು. ನಾನು ಅನುಭವಿಸಿದ್ದೇನೆ ಎಂದು ಹೇಳಿದರು.

ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ. ಹಿಂದಿನ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜಾಹೀರಾತು ನೀಡಿದ್ದು, ನಮ ಮೇಲೆ ಕೇಸು ದಾಖಲಿಸಲಿ, ಅದನ್ನು ಎದುರಿಸುತ್ತೇವೆ. ಆದರೆ ರಾಹುಲ್‌ಗಾಂಧಿಯವರನ್ನು ಮಧ್ಯಕ್ಕೆ ತರಲು ಅವರೇನು ಕೆಪಿಸಿಸಿ ಅಥವಾ ಎಐಸಿಸಿ ಅಧ್ಯಕ್ಷರಾಗಿದ್ದರೇ? ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಕಾಮನ್‌ಸೆನ್‌್ಸ ಇರಲಿಲ್ಲವೇ? ಅವರ ಪಕ್ಷದ ಎಂಎಲ್‌ಸಿ ಮೂಲಕ ಕೇಸು ಹಾಕಿಸಿದ್ದೇಕೆ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌‍ನವರು ದ್ವೇಷ ರಾಜಕಾರಣ ಮಾಡುವುದಿಲ್ಲ. ರಾಹುಲ್‌ಗಾಂಧಿಯವರಿಗೆ ಅವರದ್ದೇ ಆದ ತೊಂದರೆಗಳಿವೆ. ಯಡಿಯೂರಪ್ಪ ಅವರ ಪ್ರಕರಣದಲ್ಲಿ ಮೂಗು ತೂರಿಸುವ ಅಗತ್ಯ ಅವರಿಗಿಲ್ಲ . ಕಾಂಗ್ರೆಸ್‌‍ನವರು ದ್ವೇಷ ಸಾಧಿಸಲು ನೀಚ ರಾಜಕಾರಣ ಮಾಡುವುದಿಲ್ಲ ಎಂದರು.2028ಕ್ಕೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷವನ್ನು ಮರಳಿ ಅಧಿಕಾರಕ್ಕೆ ತಂದೇ ತರುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲಾ ಸದಸ್ಯರು ಇದಕ್ಕಾಗಿ ಹಗಲು-ರಾತ್ರಿ ಕೆಲಸ ಮಾಡುತ್ತೇವೆ ಎಂದರು.

ನಾವು ವಿಶ್ವಮಾನವರಾಗಲು ಸಮಾಜದ ಅಭಿಪ್ರಾಯ ಮುಖ್ಯ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಹಿನ್ನಡೆಯಾಗಿರುವುದು ಹಾಗೂ ಮತದಾನ ಏಕೆ ಈ ರೀತಿ ಆಗಿದೆ ಎಂಬುದರ ಕುರಿತು ನಿನ್ನೆ ರಾತ್ರಿ ಒಕ್ಕಲಿಗ ಮುಖಂಡರ ಸಭೆಯಲ್ಲಿ ದೊಡ್ಡ ಚರ್ಚೆಯಾಗಿದೆ ಎಂದು ಹೇಳಿದರು.

ಕಾಂಗ್ರೆಸ್‌‍ ಪಕ್ಷ ಸೋತಿದೆ. ಸೋಲನ್ನು ಒಪ್ಪಿಕೊಳ್ಳುತ್ತೇವೆ. ರಾಜಕಾರಣದಲ್ಲಿ ಸೋಲು-ಗೆಲುವು ಸಾಮಾನ್ಯ. ಚೆಲುವರಾಯಸ್ವಾಮಿ, ಬಾಲಕೃಷ್ಣ, ಬಂಡಿ ಸಿದ್ದನಗೌಡ ಸೇರಿದಂತೆ ಹಲವರು 50 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದರು. ಅದರ ನಂತರದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇವೆಲ್ಲಾ ಸಾಮಾನ್ಯ. ಆರು ತಿಂಗಳಲ್ಲಿ ಪರಿಸ್ಥಿತಿ ಬದಲಾಗುತ್ತಿದೆ. ಜನರ ಭಾವನೆಗಳು, ಕೆಲಸ ಕಾರ್ಯಗಳು ಬದಲಾಗುತ್ತವೆ. ಯಾವುದೂ ಶಾಶ್ವತವಲ್ಲ ಎಂದರು.

ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಒಂದೇ ಸ್ಥಾನದಲ್ಲಿ ಗೆದ್ದಿತ್ತು. ಈಗ 9 ಸ್ಥಾನಗಳನ್ನು ಗೆದ್ದಿದ್ದೇವೆ. ಇನ್ನೂ ನಾಲ್ಕೈದು ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಹಿನ್ನಡೆಯಾಗಿದೆ. ಕಾರ್ಯಕರ್ತರು ಚಿಂತೆ ಮಾಡುವ ಅಗತ್ಯವಿಲ್ಲ. ಮುಂದೆ ನಮ ಸರ್ಕಾರದ ಅಧಿಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

RELATED ARTICLES

Latest News