2023ರಲ್ಲೂ ಬಿಜೆಪಿಗೆ ಬಹುಮತ : ಸಮೀಕ್ಷೆಯಿಂದ ಬೊಮ್ಮಾಯಿ ಫುಲ್ ಖುಷ್

Social Share

ಬೆಂಗಳೂರು,ಜು.19- ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಇತರ ಎಲ್ಲಾ ಪಕ್ಷಗಳನ್ನು ಹಿಂದಿಕ್ಕಿ ಆಡಳಿತಾರೂಢ ಬಿಜೆಪಿ ಹೆಚ್ಚು ಸ್ಥಾನ ಗಳಿಸುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಇದೆ.
ಭಾರೀ ಜಿದ್ದಾಜಿದ್ದಿನ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಹೆಚ್ಚುಕಡಿಮೆ ಕಳೆದ ಬಾರಿಯಷ್ಟೇ ಸ್ಥಾನ ಗಳಿಸುವ ಸಾಧ್ಯತೆಯಿದೆ ಎಂದು ಆಂತರಿಕ ಸಮೀಕ್ಷೆಯಿಂದ ಗೊತ್ತಾಗಿದೆ.

2018ರಲ್ಲಿ 104 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ 2023ರಲ್ಲೂ ಹೆಚ್ಚು ಕಡಿಮೆ ಅಷ್ಟೇ ಸ್ಥಾನವನ್ನು ಪಡೆಯಬಹುದೆಂದು ದೆಹಲಿ ಮೂಲದ ಖಾಸಗಿ ಸಂಸ್ಥೆ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ. ಮಿಷನ್ 150 ಎಂದು ಬಿಜೆಪಿಯ ಎಲ್ಲ ನಾಯಕರು ಹೇಳುತ್ತಿದ್ದರಾದರೂ ಆಡಳಿತ ವಿರೋಧಿ ಅಲೆ, ಸರ್ಕಾರದ ಮೇಲೆ ಬಂದಿರುವ ಗಂಭೀರ ಸ್ವರೂಪದ ಭ್ರಷ್ಟಾಚಾರದ ಆರೋಪಗಳು, ಸಮರ್ಥ ನಾಯಕತ್ವ ಇಲ್ಲದಿರುವುದು, ಗೊಂದಲ ಹೀಗೆ ಹತ್ತು ಹಲವು ಕಾರಣಗಳಿಂದ ಬಿಜೆಪಿ ಮೂರಂಕಿ ದಾಟಬಹುದೆಂದು ಸಮೀಕ್ಷೆ ಹೇಳಿದೆ.

ರಾಜ್ಯದ ಜನತೆಗೆ ಬಿಜೆಪಿ ಬಗ್ಗೆ ಹೇಳಿಕೊಳ್ಳುವಂತಹ ಸದಾಭಿಪ್ರಾಯ ಇಲ್ಲ. ಆದರೆ ಪ್ರಧಾನಿ ನರೇಂದ್ರಮೋದಿಯವರ ವ್ಯಕ್ತಿತ್ವವೇ ಕಮಲ ನಾಯಕರಿಗೆ ಆಸರೆಯಾಗಲಿದೆ ಎಂದು ಸಮೀಕ್ಷೆ ಹೇಳುತ್ತಿದೆ. ರಾಜಧಾನಿ ಬೆಂಗಳೂರು, ಮೈಸೂರು ಕರ್ನಾಟಕ, ಕರಾವಳಿ, ಮಧ್ಯಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಸೇರಿದಂತೆ 5 ಭಾಗಗಳಲ್ಲಿ ಸಮೀಕ್ಷೆ ನಡೆಸಲಾಗಿತ್ತು.

ಸಮೀಕ್ಷೆಯಲ್ಲಿ ಬಹುತೇಕ ಮತದಾರರು ದೆಹಲಿ ಬಿಜೆಪಿ ನಾಯಕರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುತ್ತಿದ್ದಾರೆ ಎಂಬ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ. ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಕೇವಲ ಮತ ಗಳಿಕೆಗಾಗಿ ಮಾತ್ರ ಬಳಸಿಕೊಳ್ಳಲಾಗುತ್ತದೆ. ಅವರಿಗಾದರೂ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕೆಂದು ಹಲವರು ಒತ್ತಾಯಿಸಿದ್ದಾರೆ.

2023ರ ಚುನಾವಣೆಯಲ್ಲಿ ಎಂದಿನಂತೆ ಭ್ರಷ್ಟಾಚಾರ, ಜಾತಿ, ಹಣಬಲವೇ ಮೇಳೈಸಲಿದ್ದು, ಬಿಜೆಪಿಗೆ ಭದ್ರ ಬುನಾದಿಯಾಗಿರುವ ವೀರಶೈವ ಲಿಂಗಾಯಿತ ಸಮುದಾಯ, ಹಿಂದುಳಿದ ಜಾತಿಗಳಲ್ಲಿ ಕೆಲವು ಸಣ್ಣಪುಟ್ಟ ಸಮುದಾಯಗಳು, ದಲಿತ ಸಮುದಾಯದಲ್ಲಿ ಎಡಗೈ ಕೈ ಹಿಡಿಯುವ ಸಾಧ್ಯತೆಯಿದೆ.

ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕದಲ್ಲಿ ಪ್ರಬಲವಾಗಿರುವ ವೀರಶೈವ ಲಿಂಗಾಯಿತರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ಕೋಮು ದೃವೀಕರಣದಿಂದಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು ಹಾಗೂ ಮಡಿಕೇರಿಯಲ್ಲಿ ಬಿಜೆಪಿ ಪ್ರಾಬಲ್ಯ ಸಾಸುವ ಸಾಧ್ಯತೆ ಇದೆ.

ಮೋದಿ-ಯಡಿಯೂರಪ್ಪ ಆಸರೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಪ್ರಧಾನಿ ನರೇಂದ್ರಮೋದಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರ ನಾಮಬಲವೇ ಕಮಲ ನಾಯಕರಿಗೆ ಆಸರೆಯಾಗಲಿದೆ.

ಜೊತೆಗೆ ಈ ಸಮೀಕ್ಷೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬಗ್ಗೆಯೂ ಭಾರೀ ಸದಾಭಿಪ್ರಾಯ ವ್ಯಕ್ತವಾಗಿದ್ದು, ಅವರು ಪ್ರಚಾರ ಮಾಡಿದಷ್ಟೂ ಬಿಜೆಪಿಗೆ ಹೆಚ್ಚು ಅನುಕೂಲವಾಗಲಿದೆ ಎಂಬುದು ಮತದಾರರ ನಾಡಿಮಿಡಿತದಿಂದ ಗೊತ್ತಾಗಿದೆ.

ನರೇಂದ್ರಮೋದಿ ಮತ್ತು ಯೋಗಿ ಆದಿತ್ಯನಾಥ್ ಅವರ ಕಾರಣದಿಂದಾಗಿ ಬಿಜೆಪಿಗೆ ಮತ ಹಾಕುತ್ತೇವೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಇಬ್ಬರು ನಾಯಕರು ಭ್ರಷ್ಟಾಚಾರಕ್ಕೆ ಅವಕಾಶ ಕೊಡುವುದಿಲ್ಲ. ಕುಟುಂಬ ರಾಜಕಾರಣವನ್ನು ಪೆÇ್ರೀತ್ಸಾಹಿಸುವುದಾಗಲಿ ಇಲ್ಲವೇ ಸ್ವಜನ ಪಕ್ಷಪಾತಕ್ಕೂ ಅವಕಾಶ ನೀಡುವುದಿಲ್ಲ. ನಮಗೆ ಬಿಜೆಪಿ ಬಗ್ಗೆ ಬೇಸರವಿದ್ದರೂ ಯೋಗಿ ಮತ್ತು ಮೋದಿ ಅವರ ಮುಖ ನೋಡಿಕೊಂಡು ಮತ ಹಾಕುತ್ತೇವೆ ಎಂದು ಹೇಳಿದ್ದಾರೆ.

ಸಾಮಾನ್ಯವಾಗಿ ಬಿಜೆಪಿ ಪ್ರತಿ ಚುನಾವಣೆಯಲ್ಲೂ ದೆಹಲಿ ಮೂಲದ ಸಂಸ್ಥೆಯಿಂದಲೇ ಸಮೀಕ್ಷೆ ನಡೆಸುತ್ತದೆ. 2018ರ ವಿಧಾನಸಭೆ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲೂ ಈ ಸಂಸ್ಥೆಯಿಂದಲೇ ಸಮೀಕ್ಷೆ ನಡೆಸಲಾಗಿತ್ತು.
2018ರಲ್ಲಿ ಬಿಜೆಪಿ 105 ಸ್ಥಾನವನ್ನು ಗೆಲ್ಲಲಿದೆ ಎಂದು ಇದೇ ಸಂಸ್ಥೆ ಹೇಳಿತ್ತು. ಅಂತಿಮವಾಗಿ ಫಲಿತಾಂಶದಲ್ಲಿ 104 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿತ್ತು.

ಕರಾವಳಿ ಕರ್ನಾಟಕ, ಮುಂಬೈ-ಕರ್ನಾಟಕ,ಕಲ್ಯಾಣ-ಕರ್ನಾಟಕ ಮತ್ತು ಮಧ್ಯ ಕರ್ನಾಟಕದಂತಹ ಬಿಜೆಪಿಯ ಸಾಂಪ್ರದಾಯಿಕ ಬೆಂಬಲ ಪ್ರದೇಶಗಳಿಂದ ಸಕಾರಾತ್ಮಕ ಪ್ರತಿಕ್ರಿಯೆಗಳು ಬರುತ್ತಿವೆ ಎಂದು ಸಮೀಕ್ಷೆ ಸೂಚಿಸುತ್ತದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯೇತರ ಸಾಂಪ್ರದಾಯಿಕ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಕೋಲಾರ, ಮೈಸೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ಬಿಜೆಪಿ ಪ್ರಾಬಲ್ಯವಿದ್ದರೂ, ಈ ಕ್ಷೇತ್ರಗಳಲ್ಲಿ ಪಕ್ಷ ಗೆಲ್ಲಿಸಲು ಸಮರ್ಥವಾಗಿಲ್ಲ, ಈ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಜೊತೆ ಬಿಜೆಪಿ ಹೋರಾಟ ನಡೆಸಬೇಕಿದೆ.

2008ರಿಂದ ಸಾಂಪ್ರಾದಾಯಿಕವಾಗಿ ಬಿಜೆಪಿ ಗೆಲ್ಲುತ್ತಿರುವ ಕ್ಷೇತ್ರಗಳಲ್ಲಿ ಆಡಳಿತ ವಿರೋ ಅಲೆಯಿಂದ ಈ ಶಾಸಕರಿಗೆ ಯಾವುದೇ ಹಾನಿಯಾಗುವುದಿಲ್ಲ ಎಂಬುದನ್ನು ಸಮೀಕ್ಷೆ ತಿಳಿಸಿದೆ. ಸದ್ಯ ಬಿಜೆಪಿ ಸರ್ಕಾರವು 104 ಬಿಜೆಪಿ ಸದಸ್ಯರನ್ನು ಹೊಂದಿದೆ.
ಕಾಂಗ್ರೆಸ್‍ನ 14 ಮತ್ತು ಜೆಡಿಎಸ್‍ನ ಮೂವರು ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡ ನಂತರ ಕೊರತೆಯಿದ್ದ 17 ಸ್ಥಾನವನ್ನು ತುಂಬಲಾಯಿತು.

ಈ ಎಲ್ಲಾ 17 ಕ್ಷೇತ್ರಗಳಲ್ಲಿ ಬಿಜೆಪಿ ಪರವಾಗಿ ಯಾವುದೇ ದೊಡ್ಡ ಅಲೆ ಇಲ್ಲ ಎಂದು ಸಮೀಕ್ಷೆ ತಿಳಿಸಿದೆ.
8 ತಿಂಗಳ ಹಿಂದೆ ನಡೆಸಿದ್ದ ಸಮೀಕ್ಷೆಯಲ್ಲಿ ಬಿಜೆಪಿ 70 ಸ್ಥಾನಗಳಿಂದ 40ಕ್ಕೆ ಇಳಿಯುತ್ತದೆ ಎಂದು ತಿಳಿಸಿತ್ತು, ಆದರೆ ಇತ್ತೀಚಿನ ಸಮೀಕ್ಷೆ ಪ್ರಕಾರ ಬಿಜೆಪಿ 104 ಸ್ಥಾನ ಗೆಲ್ಲಲು ಸಶಕ್ತವಾಗಿದೆ ಎಂದು ತಿಳಿಸಿದೆ.

ರಾಜ್ಯದ ಪ್ರಮುಖ ಪ್ರತಿಪಕ್ಷವಾಗಿರುವ ಕಾಂಗ್ರೆಸ್ ಆಡಳಿತ ಪಕ್ಷದ ದೌರ್ಬಲ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ.

Articles You Might Like

Share This Article