3ನೇ ದಿನಕ್ಕೆ ಕಾಲಿಟ್ಟ ಬಿಜೆಪಿ-ಜೆಡಿಎಸ್‌‍ ‘ಮೈಸೂರು ಚಲೋ’ ಪಾದಯಾತ್ರೆ

ಬೆಂಗಳೂರು,ಆ.5- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾದಲ್ಲಿ) ಅಕ್ರಮ ನಿವೇಶನ ಹಂಚಿಕೆಗೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್‌‍ ಜಂಟಿಯಾಗಿ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಶನಿವಾರ ಕೆಂಗೇರಿಯಿಂದ ಆರಂಭವಾದ ಪಾದಯಾತ್ರೆ ಭಾನುವಾರ ಕೆಂಗಲ್‌ನಲ್ಲಿ ಕೊನೆಗೊಂಡಿತ್ತು. ಇಂದು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನಲ್ಲಿರುವ ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್‌ ಹನುಮಂತಯ್ಯ ಅವರ ಹುಟ್ಟೂರು ಕೆಂಗಲ್‌ನಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮೂರನೇ ದಿನದ ಪಾದಯಾತ್ರೆಗೆ ಚಾಲನೆ ಕೊಡಲಾಯಿತು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು … Continue reading 3ನೇ ದಿನಕ್ಕೆ ಕಾಲಿಟ್ಟ ಬಿಜೆಪಿ-ಜೆಡಿಎಸ್‌‍ ‘ಮೈಸೂರು ಚಲೋ’ ಪಾದಯಾತ್ರೆ