Tuesday, May 21, 2024
Homeರಾಜಕೀಯ25 ಸ್ಥಾನ ಉಳಿಸಿಕೊಳ್ಳು ಬಿಜೆಪಿ ನಾಯಕರು ಒಗ್ಗಟ್ಟಿನ ಪ್ರಯತ್ನ

25 ಸ್ಥಾನ ಉಳಿಸಿಕೊಳ್ಳು ಬಿಜೆಪಿ ನಾಯಕರು ಒಗ್ಗಟ್ಟಿನ ಪ್ರಯತ್ನ

ಬೆಂಗಳೂರು,ಡಿ.11-ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯದಲ್ಲಿ ಪ್ರತಿಪಕ್ಷ ?ತ ಬಿಜೆಪಿ ತಮ್ಮ ಲೋಕಸಭಾ ಚುನಾವಣಾ ಕರ್ಯತಂತ್ರವನ್ನು ಮರು ಪರಿಶೀಲಿಸುವ ಸಾಧ್ಯತೆಯಿದೆ. 25 ಸ್ಥಾನ ಉಳಿಸಿಕೊಳ್ಳುವ ಗುರಿ ಹೊಂದಿರುವ ಬಿಜೆಪಿ ತನ್ನ ರಾಜ್ಯ ನಾಯಕರಲ್ಲಿ ಒಗ್ಗಟ್ಟು ಮೂಡಿಸಲು ಪ್ರಯತ್ನವನ್ನು ದ್ವಿಗುಣಗೊಳಿಸಬೇಕಾಗಿದೆ. ಲೋಕಸಭಾ ಚುನಾವಣೆಗೆ ಸಿದ್ಧತಾ ಕಾರ್ಯಗಳನ್ನು ಈಗಾಗ್ಗಲೇ ಆರಂಭಿಸಿದೆ. ರಾಜ್ಯಮಟ್ಟದ ನಾಯಕರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ನಾಯಕರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.

ಮುಂದಿನ ದಿನಗಳಲ್ಲಿ ಎಲ್ಲಾ ಲೋಕಸಭಾ ವ್ಯಾಪ್ತಿಯಲ್ಲಿನ ನಾಯಕರೊಂದಿಗೆ ಪ್ರತ್ಯೇಕವಾಗಿ ಸಮಾಲೋಚನೆ ನಡೆಸಲಾಗುವುದು, ಸಭೆ ನಡೆಸುವ ಮೂಲಕ ಪ್ರತಿಕ್ರಿಯೆ ಪಡೆದು ಅಡೆತಡೆ ನಿವಾರಿಸಲಾಗುವುದು, 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಇದರ ಪ್ರಮುಖ ಉದ್ದೇಶವಾಗಿದೆ.

2019ರ ಚುನಾವಣೆ ಸಂದರ್ಭದಲ್ಲಿ 25 ಲೋಕಸಭಾ ಕ್ಷೇತ್ರಗಳಲ್ಲಿಯೂ ಗೆಲುವು ಸಾಸಿದ್ದರೂ ವಿಧಾನಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ಕಂಡುಬಂದಿದ್ದ ಬಗ್ಗೆ ನಾಯಕರು ಚರ್ಚಿಸಿದ್ದು, ಮುಂದಿನ ಇಂತಹ ದೋಷಗಳಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಾಯಕರು ಸೂಚಿಸಿದ್ದಾರೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

BIG NEWS : 370ನೇ ವಿಧಿ ರದ್ದುಗೊಳಿಸಿದ ಆದೇಶ ಎತ್ತಿ ಹಿಡಿದ ಸುಪ್ರೀಂ

ಬೆಳಗಾವಿಯಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅವೇಶನದಲ್ಲಿ ಬಿಜೆಪಿ ನಾಯಕರ ನಡುವೆ ಸರಿಯಾದ ಹೊಂದಾಣಿಕೆಯ ಕೊರತೆ ಎದ್ದು ಕಾಣುತ್ತಿದೆ. ಬಿಜೆಪಿ ಮುಖಂಡರೊಬ್ಬರ ಮೇಲೆ ಕಾಂಗ್ರೆಸ್ ಶಾಸಕರು ಮತ್ತು ಅವರ ಸಹಚರರು ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವಾಗ ಪಕ್ಷದ ಶಾಸಕರು ಒಂದೇ ಕಡೆ ಇರಲಿಲ್ಲ. ಇನ್ನುಳಿದ ಐದು ದಿನಗಳ ಅವೇಶನದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ, ಪಕ್ಷದ ರಾಜಾ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಹಿರಿಯ ಶಾಸಕರು ಹೇಗೆ ಉತ್ತಮ ಸಮನ್ವಯ ಸಾಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ವಿಜಯೇಂದ್ರ ಅವರನ್ನು ಬಿಜೆಪಿ ರಾಜಾ್ಯಧ್ಯಕ್ಷರನ್ನಾಗಿ ನೇಮಿಸಿದ ನಂತರ ಮತ್ತು ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ 3:1 ಫಲಿತಾಂಶಗ ಅದರ ನೈತಿಕತೆಯನ್ನು ಹೆಚ್ಚಿಸಿದ್ದು, ಪಕ್ಷದ ಕರ್ಯರ್ತರು ಆತ್ಮವಿಶ್ವಾಸವನ್ನು ಮರಳಿ ಪಡೆಯುತ್ತಿದ್ದಾರೆ. ಆದರೆ ಹಿರಿಯ ನಾಯಕರಿಂದ ಬರುತ್ತಿರುವ ಅಪಸ್ವರಗಳು ಅಡ್ಡಿಯಾಗುತ್ತಲೇ ಇವೆ. ಅದನ್ನು ತ್ವರಿತವಾಗಿ ಪರಿಹರಿಸಲು ವಿಫಲವಾದರೆ ಲೋಕಸಭೆ ಚುನಾವಣೆಗೆ ಪಕ್ಷದ ಸಿದ್ಧತೆಯ ಮೇಲೆ ಪರಿಣಾಮ ಬೀರಬಹುದು.

ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ, ಅತೃಪ್ತ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಸುಲಭದ ಕೆಲಸವಲ್ಲ, ಆದರೆ ಕೇಂದ್ರ ನಾಯಕತ್ವವು ಹೊಸ ರಾಜಾ್ಯಧ್ಯಕ್ಷರನ್ನು ಸಂಪೂರ್ಣವಾಗಿ ಬೆಂಬಲಿಸುವ ನಿರೀಕ್ಷೆಯಿದೆ. ಬಿಜೆಪಿಗೆ ರ್ನಾಟಕವು ದಕ್ಷಿಣ ಭಾರತದ ಏಕೈಕ ರಾಜ್ಯವಾಗಿದ್ದು ಅದು ಉತ್ತಮ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುವ ಭರವಸೆ ಇದೆ.

ವಿಜಯೇಂದ್ರ ನೇಮಕದ ನಂತರ ರ್ನಾಟಕದಲ್ಲಿ ರಚನೆಯಾಗಲಿರುವ ಹೊಸ ಪದಾಕಾರಿಗಳ ತಂಡವು ತಳಮಟ್ಟದಲ್ಲಿ ಸಂಘಟನೆ ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪಕ್ಷವು ಪ್ರಧಾನಿ ನರೇಂದ್ರ ಮೋದಿ ಅವರ ಇಮೇಜ್ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಅನುಭವದ ಮೇಲೆ ನಿಂತಿದೆ.

80ರ ವಯಸ್ಸಿನ ಲಿಂಗಾಯತ ಪ್ರಬಲ ವ್ಯಕ್ತಿ ತನ್ನ ಸಾಂಪ್ರದಾಯಿಕ ಲಿಂಗಾಯತ ಬೆಂಬಲದ ನೆಲೆಯನ್ನು ಉಳಿಸಿಕೊಳ್ಳಲು ಪಕ್ಷಕ್ಕೆ ಸಹಾಯ ಮಾಡುವ ಮನವಿಯೊಂದಿಗೆ ಅವಿಶ್ರಾಂತ ಪ್ರಚಾರಕರಾಗಿದ್ದಾರೆ, ಇದು ತನ್ನ ಲೋಕಸಭಾ ಸ್ಥಾನಗಳನ್ನು ಉಳಿಸಿಕೊಳ್ಳಲು ನರ್ಣಾಯಕವಾಗಿದೆ. ಅಲ್ಲದೆ, ಯಡಿಯೂರಪ್ಪನವರ ರಾಜಕೀಯವು ಮುಖ್ಯವಾಗಿ ಅವರ ಪಕ್ಷದಲ್ಲಿನ ಕಠಿಣ ಧ್ವನಿಗಳಿಗಿಂತ ಭಿನ್ನವಾಗಿ ಕೃಷಿ ಸಮಸ್ಯೆಗಳ ಸುತ್ತ ಸುತ್ತುತ್ತದೆ. ಜೆಡಿಎಸ್ ನೊಂದಿಗೆ ಹೊಂದಾಣಿಕೆ ಖಾತ್ರಿಪಡಿಸಿಕೊಳ್ಳುವ ಕಷ್ಟಕರವಾದ ಕೆಲಸವನ್ನು ಹೊಂದಿರುವ ಹೊಸ ತಂಡಕ್ಕೆ ಅವರ ರಾಜಕೀಯ ಚಾಣಾಕ್ಷತ ನೆರವಾಗುತ್ತದೆ. 2024 ರ ಲೋಕಸಭಾ ಚುನಾವಣೆಯು ಅವರ ಪುತ್ರ ಮತ್ತು ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರ ನಾಯಕತ್ವಕ್ಕೆ ಮೊದಲ ದೊಡ್ಡ ಪರೀಕ್ಷೆಯಾಗಿದೆ. ಡಿಸೆಂಬರ್ 15 ರಂದು ವಿಧಾನಸಭೆ ಅವೇಶನ ಮುಗಿದ ನಂತರ ಲೋಕಸಭೆ ಚುನಾವಣೆ ಸಿದ್ಧತೆಗೆ ಧುಮುಕಲು ಬಿಜೆಪಿ ಸಜ್ಜಾಗಿದೆ
.
ಈ ಬಾರಿಯ ಚುನಾವಣೆಯಲ್ಲಿ ಕಳೆದ ಐದು ವರ್ಷಗಳಲ್ಲಿ ಅವರು ತೋರಿರುವ ಕ್ಷಮತೆಯನ್ನು ಪರಿಗಣಿಸಿ ಹಾಗೂ ಕೆಲವು ಕ್ಷೇತ್ರಗಳಲ್ಲಿ ಮುಂದಿನ ತಲೆಮಾರಿನ ನಾಯಕರನ್ನು ಬೆಳೆಸುವ ಅನಿವಾರ್ಯತೆ ಇರುವ ದೃಷ್ಟಿಯಲ್ಲಿ ಕೆಲವು ಹಾಲಿ ಸಂಸದರಿಗೆ ಟಿಕೆಟ್ ನೀಡದೇ ಇರಬಹುದು ಎಂದು ಹೇಳಲಾಗಿದೆ.

ಅವರಲ್ಲಿ ದಾವಣಗೆರೆಯ ಸಂಸದ ಜಿಎಂ ಸಿದ್ದೇಶ್ವರ, ಚಾಮರಾಜ ನಗರ ಸಂಸದ ಶ್ರೀನಿವಾಸ್ ಪ್ರಸಾದ್, ಉತ್ತರ ಕನ್ನಡದ ಸಂಸದ ಅನಂತ ಕುಮಾರ್ ಹೆಗ್ಡೆ, ಬಿಜೆಪಿ ರಾಜಾ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮುಂತಾದವರು ಸೇರಿದ್ದಾರೆ. ಈ ಕುರಿತು ದೆಹಲಿ ಮಟ್ಟದಲ್ಲಿ ಚರ್ಚೆ ನಡೆದಿದ್ದು, 75 ವರ್ಷ ದಾಟಿದ ಮತ್ತು ಪಕ್ಷದಲ್ಲಿ ಸಕ್ರಿಯವಾಗಿಲ್ಲದ ಕೆಲ ಸಂಸದರಿಗೆ ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದಿರಲು ಬಿಜೆಪಿ ವರಿಷ್ಠರು ತೀರ್ಮಾನಿಸಿದ್ದಾರೆ.

ಹಾಲಿ ಸಂಸದರಿಗೆ ಈ ಕುರಿತು ಈಗಾಗಲೇ ಮಾಹಿತಿ ನೀಡಲಾಗಿದೆ. ಪಕ್ಷದ ವಿರುದ್ದ ಬಂಡಾಯ ಚಟುವಟಿಕೆ ನಡೆಸದೇ, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ ಎಂಬ ಸೂಚನೆಯನ್ನು ನೀಡಲಾಗಿದೆ. ಮುಂಬರುವ ದಿನಗಳಲ್ಲಿ ನಿಮಗೆ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂಬ ಭರವಸೆಯನ್ನು ನೀಡಲಾಗಿದೆ. ಇನ್ನೊಂದೆಡೆ ಈ ಬಾರಿ 12ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಯುವ ಮುಖಗಳಿಗೆ ಮಣೆ ಹಾಕಲು ನಿರ್ಧರಿಸಲಾಗಿದೆ. ಹೀಗಾಗಿ ಹೊಸ ಮುಖಗಳಿಗಾಗಿ ಈಗಾಗಲೇ ಹುಡುಕಾಟ ನಡೆದಿದೆ.

ಬೆಂಗಳೂರು ಉತ್ತರ ಕ್ಷೇತ್ರದ ಸಂಸದ, ಮಾಜಿ ಸಿಎಂ ಸದಾನಂದ ಗೌಡ, ಚಿಕ್ಕಬಳ್ಳಾಪುರದ ಸಂಸದ ಬಚ್ಚೇಗೌಡ, ಕೋಲಾರ ಸಂಸದ ಮುನಿಸ್ವಾಮಿ, ಚಾಮರಾಜನಗರದ ಸಂಸದ ಶ್ರೀನಿವಾಸ ಪ್ರಸಾದ್, ವಿಜಯಪುರ ಸಂಸದ ರಮೇಶ್ ಜಿಗಜಿಣಗಿ, ತುಮಕೂರು ಸಂಸದ ಜಿ.ಎಸ್.ಬಸವರಾಜು, ಕೊಪ್ಪಳದ ಸಂಸದ ಸಂಗಣ್ಣ ಕರಡಿ, ದಾವಣಗೆರೆಯ ಸಂಸದ ಜಿ.ಎಂ.ಸಿದ್ದೇಶ್ವರ ಸೇರಿದ್ದಾರೆ ಎನ್ನಲಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬದಲಾವಣೆಯ ಪ್ರಯೋಗಗಳನ್ನು ಮಾಡಿದರೂ ಬಿಜೆಪಿಗೆ ಗೆಲುವು ಸಿಕ್ಕಲಿಲ್ಲ ಎಂಬುದು ಬೇರೆ ಮಾತು. ಹಾಗಿದ್ದರೂ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಇದೇ ರೀತಿಯ ಪ್ರಯೋಗವನ್ನು ಮಾಡಲು ಬಿಜೆಪಿ ನಿರ್ಧರಿಸಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬದಲಾವಣೆಯ ತಂತ್ರಗಾರಿಕೆಯನ್ನು ಅನುಸರಿಸಿದ್ದು ಸರಿಯಾಗಿದೇ ಇತ್ತು. ಆದರೆ, ರಾಜ್ಯದಲ್ಲಿ ಅದಾಗಲೇ ಬಿಜೆಪಿ ವಿರೋ ಅಲೆ ಪ್ರಬಲವಾಗಿದ್ದರಿಂದ, ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಕೆಲವು ಸಚಿವರು ಹಾಗೂ ಶಾಸಕರ ವಿರುದ್ಧ ಭ್ರಷ್ಟಾಚಾರ ಆರೋಪಗಳು ಇದ್ದಿದ್ದರಿಂದ, ಮೇಲಾಗಿ ಜನಾಭಿಪ್ರಾಯವವೂ ಅದೇ ಆಗಿದ್ದರಿಂದಾಗಿ ಬಿಜೆಪಿಯ ಪ್ರಯೋಗಗಳು ಫಲಿಸಲಿಲ್ಲ.

ಆದರೆ, ಲೋಕಸಭಾ ಚುನಾವಣೆಯಲ್ಲಿ ಹಾಗಾಗುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಖಂಡಿತವಾಗಿಯೂ ಪ್ರಧಾನಿ ಮೋದಿಯವರ ಪ್ರಭಾವ ಹೆಚ್ಚಾಗಿ ಕೆಲಸ ಮಾಡುತ್ತದೆ. ಅಲ್ಲಿ, ಗೆಲುವು ಬಿಜೆಪಿಗೆ ಕಟ್ಟಿಟ್ಟ ಬುತ್ತಿ. ಹಾಗಾಗಿ, ಈ ಬಾರಿಯೂ ಪ್ರಯೋಗಗಳಿಗೆ ಇನ್ನೂ ಅವಕಾಶವಿದೆ ಎಂಬುದು ಬಿಜೆಪಿ ಲೆಕ್ಕಾಚಾರವಾಗಿದೆ.

RELATED ARTICLES

Latest News