Monday, May 6, 2024
Homeರಾಜ್ಯಕಾಂಗ್ರೆಸ್‍ ಖಾಲಿ ಚೊಂಬು ಜಾಹೀರಾತಿಗೆ ರೊಚ್ಚಿಗೆದ್ದ ಬಿಜೆಪಿ ನಾಯಕರಿಂದ ಸುದ್ದಿಗೋಷ್ಠಿ

ಕಾಂಗ್ರೆಸ್‍ ಖಾಲಿ ಚೊಂಬು ಜಾಹೀರಾತಿಗೆ ರೊಚ್ಚಿಗೆದ್ದ ಬಿಜೆಪಿ ನಾಯಕರಿಂದ ಸುದ್ದಿಗೋಷ್ಠಿ

ಬೆಂಗಳೂರು,ಏ.21-ಮುಸ್ಲಿಂ ಗೂಂಡಾಗಳು ನಡೆಸುವ ದಬ್ಬಾಳಿಕೆ ಮತ್ತು ಹಲ್ಲೆಗೆ ರಕ್ಷಣೆ ನೀಡುವುದೇ ಕಾಂಗ್ರೆಸ್ ಗ್ಯಾರಂಟಿ. ಜನರ ಬದುಕನ್ನು ಕಿತ್ತುಕೊಂಡು ದಿವಾಳಿ ಮಾಡಿರುವುದು ಸರ್ಕಾರದ ಸಾಧನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಂಡ ಕಾರಿದ್ದಾರೆ.

ಕಾಂಗ್ರೆಸ್‍ನ ಜಾಹೀರಾತಿಗೆ ಪ್ರತ್ಯುತ್ತರ ಎಂಬಂತೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ತಮ್ಮ ಮಾತಿನುದ್ದಕ್ಕೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈದರು. ದರೋಡೆಕೋರರು, ಭಯೋತ್ಪಾದಕರಿಗೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ. ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕ ಒಂದೇ ವರ್ಷದಲ್ಲಿ ಮತಾಂಧರ ಯುದ್ಧಭೂಮಿಯಾಗಿ ಪರಿವರ್ತನೆಯಾಗಿದೆ. ಸಿದ್ದರಾಮಯ್ಯ ಸರ್ಕಾರ ಮತಾಂಧ ಶಕ್ತಿಯನ್ನು ತಮ್ಮ ಆಡಳಿತದ ಭಾಗವಾಗಿ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ನಡೆಯುತ್ತಿರುವ ಕೊಲೆ , ಸುಲಿಗೆ, ದೌರ್ಜನ್ಯ, ದಬ್ಬಾಕೆಗಳಿಗೆ ಕೊನೆಯೇ ಇಲ್ಲದಂತಾಗಿದೆ. ತುಷ್ಟೀಕರಣದ ನೀತಿಯ ಪರಿಣಾಮವಾಗಿ ಮುಸ್ಲಿಂ ಗೂಂಡಾಗಳಿಗೆ ಸರ್ಕಾರವೇ ರಕ್ಷಣೆ ಗ್ಯಾರಂಟಿ ನೀಡುತ್ತಿದೆ. ಜನರ ನೆಮ್ಮದಿಯ ಬದುಕಿಗೆ ಗ್ಯಾರಂಟಿ ಕೊಡುವವರು ಯಾರು ಎಂದು ಪ್ರಶ್ನೆ ಮಾಡಿದರು.

ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ಕೆಳಗಿಳಿಸಿದ್ದು, ಪಾಕ್ ಪರ ಘೋಷಣೆ, ವಿದ್ಯಾರ್ಥಿನಿ ನೇಹ ಹತ್ಯೆ, ಜೈಶ್ರೀರಾಮ್ ಎನ್ನುವರ ಮೇಲೆ ಹಲ್ಲೆ, ಹರ್ಷಿತ ಪೂಣ್ಣಚ್ಚ ದಂಪತಿ ಮೇಲೆ ದೌರ್ಜನ್ಯ, ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ವಿಡಿಯೋ ಪ್ರಕರಣ ಇವೆಲ್ಲವೂ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿವೆ. ಮಹಿಳೆಯರು, ಮಕ್ಕಳು, ಬದುಕಿನ ಭರವಸೆಯನ್ನೇ ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ದರೋಡೆಕೋರರು, ಭಯೋತ್ಪಾದಕರು, ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅವರ ಬದುಕಿಗೆ ಗ್ಯಾರಂಟಿ ಇದೆಯಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ಇದು ಮನುಷ್ಯತ್ವ, ಮಾನವೀಯತೆ ಇಲ್ಲದ ಸರ್ಕಾರ. ಕಲ್ಲುಬಂಡೆಯ ಸರ್ಕಾರ. ಅಭಿವೃದ್ಧಿಯನ್ನೇ ಸಂಪೂರ್ಣವಾಗಿ ಮರೆತು ಜನವಿರೋಧಿ ಆಡಳಿತ ನಡೆಸುತ್ತಿದ್ದಾರೆ.

ಸರ್ಕಾರ ಸಂಪೂರ್ಣವಾಗಿ ದಿವಾಳಿಯಾಗಿದೆ. ಒಂದೇ ಒಂದು ಅಭಿವೃದ್ಧಿ ಕೆಲಸಗಳು ಕೂಡ ನಡೆಯುತ್ತಿಲ್ಲ. ಅಧಿಕಾರಕ್ಕೆ ಬಂದ ಮೇಲೆ ಒಂದು ಕಿ.ಮೀ ರಸ್ತೆ ಕೂಡ ಮಾಡಿಲ್ಲ. ನೀರಾವರಿ ಯೋಜನೆಗಳು ಸಂಪೂರ್ಣವಾಗಿ ಕುಸಿದು ಬಿದ್ದಿವೆ. ಜನರು ಎಲ್ಲೆಡೆ ಛೀಮಾರಿ ಹಾಕುತ್ತಿದ್ದಾರೆ. ಒಂದು ರೀತಿ ತುಘಲಕ್ ದರ್ಬಾರ್ ನಡೆಯುತ್ತಿದೆ ಎಂದು ಯಡಿಯೂರಪ್ಪ ಟೀಕಾ ಪ್ರಹಾರ ನಡೆಸಿದರು.

ಕಾಂಗ್ರೆಸ್ ನೀಡುತ್ತಿರುವ ಜಾಹಿರಾತುಗಳಿಗೆ ಕವಡೆಕಾಸಿನ ಕಿಮ್ಮತ್ತಿನ ಬೆಲೆಯೂ ಇಲ್ಲ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಲಿದೆ ಎಂಬುದು ಕಾಂಗ್ರೆಸ್ ನಾಯಕರಿಗೆ ಗೊತ್ತಿದೆ. ಹೀಗಾಗಿ ಜನರನ್ನು ದಿಕ್ಕು ತಪ್ಪಿಸುವ ಜಾಹೀರಾತುಗಳನ್ನು ನೀಡುತ್ತಿದ್ದಾರೆ. ಇದಕ್ಕೆಲ್ಲ ಮತದಾರರು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.

ಸವಾಲು:
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು 20 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ. ನಾನು ಅವರಿಗೆ ಒಂದು ಬಹಿರಂಗ ಸವಾಲು ಹಾಕುತ್ತೇನೆ. 28 ಕ್ಷೇತ್ರಗಳಲ್ಲಿ ನೀವು ಗೆಲ್ಲಬಹುದಾದ ಕನಿಷ್ಠ 4ರಿಂದ 5 ಲೋಕಸಭಾ ಕ್ಷೇತ್ರಗಳ ಹೆಸರು ಹೇಳಿ ನೋಡೋಣ ಎಂದು ಸವಾಲು ಹಾಕಿದರು. ನೀವು ಗ್ಯಾರಂಟಿಯಲ್ಲಿ ಗೆದ್ದೇಬಿಡುತ್ತೀರಿ ಎಂಬ ಭ್ರಮೆಯಲ್ಲಿದ್ದೀರಿ. ಆದರೆ ವಾಸ್ತವ ಚಿತ್ರಣವೇ ಬೇರೆ. ನಿಮ್ಮ ಸುಳ್ಳು ಪ್ರಚಾರ ಡೊಂಬರಾಟಕ್ಕೆ ಜನತೆ ಮನ್ನಣೆ ನೀಡುವುದಿಲ್ಲ ಎಂದು ಹೇಳಿದರು.

ತೆರಿಗೆ ವಿಚಾರವಾಗಿ ಸ್ವತಃ ಪ್ರಧಾನಿಯವರೇ ಕರ್ನಾಟಕಕ್ಕೆ ಕೇಂದ್ರದಿಂದ ಎಷ್ಟು ಅನುದಾನ ನೀಡಿದ್ದೇವೆ ಎಂದು ಹೇಳಿದ್ದಾರೆ. ಜೊತೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ನಾಳೆ ಅಮಿತ್ ಷಾ ಅವರು ಇದರ ಬಗ್ಗೆ ಮಾತನಾಡಲಿದ್ದಾರೆ ಎಂದರು.

ಕೇಂದ್ರದ ಮಾಜಿ ಸಚಿವ ಸದಾನಂದಗೌಡ ಮಾತನಾಡಿ, ನಾವು ವಿಶೇಷ ಕಾಲಘಟ್ಟದಲ್ಲಿ ಇದ್ದೇವೆ. ಈ ಚುನಾವಣೆ ಭಯೋತ್ಪಾದಕ ವಿರುದ್ಧ ಮತ್ತು ಹಿಂದೂ ಧಾರ್ಮಿಕ ವಿಧಿವಿಧಾನ ವಿರುದ್ಧ ನಡೆಯುತ್ತಿದೆ. ಹಿಂದೂಗಳನ್ನು ತೃತಿಯ ದರ್ಜೆ ನಾಗರೀಕರ ತರ ನೋಡಲಾಗುತ್ತಿದೆ. ಮುಸ್ಲಿಂ ಮತಾಂದರನ್ನು, ಭಯೋತ್ಪಾದಕರನ್ನು ಅವರ ಕಾರ್ಯವೈಖರಿ ರೀತಿ ಮಾಡಿಕೊಂಡಿದ್ದಾರೆ.

ಕುಕ್ಕರ್ ಬ್ಲಾಸ್ಟ್ ಇಂದ ಹಿಡಿದು, ಎಲ್ಲವೂ ಅವರೇ ಇದ್ದಾರೆ. ಅವರ ಪರವಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇದ್ದಾರೆ. ವಿಶ್ವಮಾನವನ ಸಂದೇಶ ನೀಡಿದ ನಾಡು ಕರ್ನಾಟಕ. ಆದರೆ ಚುನಾವಣೆ ನಡೆಸುವುದೇ ಗೂಂಡಾ ವರ್ತನೆ ರೀತಿ ಇದೆ. ಕರ್ನಾಟಕದಲ್ಲಿ ಯಾರೂ ಮಹಿಳೆಯರು ವೋಟ್ ಹಾಕಲು ಬಾರದ ರೀತಿ ವಾತಾವರಣ ಸೃಷ್ಟಿಯಾಗುತ್ತಿದೆ. ಗ್ಯಾರಂಟಿ ಯಾರಿಗೆ ಗೂಂಡಾಗಳಿಗೆ? ಹಿಂದೂಗಳ ಮೇಲೆ ಸವಾರಿ ಮಾಡುವವರಿಗಾ? ಎಂದು ಪ್ರಶ್ನಿಸಿದರು.

ನಿನ್ನೆ ಮೋದಿ ಅವರು ಬಂದಾಗ ಒಂದು ಮಾತು ಹೇಳಿದ್ದರು. ಜೀವನದ ಭರವಸೆ ನೀಡುವುದೇ ನಮ್ಮ ಗುರಿ. ಈ ಚುನಾವಣೆ ಅತ್ಯಂತ ದೊಡ್ಡ ಸಂದೇಶ ಕಳಿಸುವಂತಾಗಿರಬೇಕು. ಕರ್ನಾಟಕದ ಹಿಡಿತ ತರುವಂತೆ ಆಗ್ರಹ ಮಾಡುತ್ತೇನೆ ಎಂದರು.

RELATED ARTICLES

Latest News