Friday, May 17, 2024
Homeರಾಷ್ಟ್ರೀಯರಾಹುಲ್ ವಿರುದ್ಧ ಮಾನನಷ್ಟ ದಾಖಲಿಸಿದ್ದ ಪೂರ್ಣೇಶ್ ಮೋದಿಗೆ ಖುಲಾಯಿಸಿದ ಲಕ್

ರಾಹುಲ್ ವಿರುದ್ಧ ಮಾನನಷ್ಟ ದಾಖಲಿಸಿದ್ದ ಪೂರ್ಣೇಶ್ ಮೋದಿಗೆ ಖುಲಾಯಿಸಿದ ಲಕ್

ನವದೆಹಲಿ,ನ.18- ಮೋದಿ ಉಪನಾಮೆಗೆ ಸಂಬಂಧಿಸಿದಂತೆ ರಾಹುಲ್‍ಗಾಂಧಿ ವಿರುದ್ಧ ಗುಜರಾತ್‍ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದ ಪೂರ್ಣೇಶ್ ಮೋದಿಗೆ ಲಕ್ ಖುಲಾಯಿಸಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಪೂರ್ಣೇಶ್ ಮೋದಿ ಅವರನ್ನು ದಾದ್ರಾ ನಗರ ಹವೇಲಿ ಮತ್ತು ದಿಯು ದಮನ್‍ನಲ್ಲಿ ಬಿಜೆಪಿ ಪಕ್ಷದ ರಾಜಕೀಯ ವ್ಯವಹಾರಗಳ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪೂರ್ಣೇಶ್ ಮೋದಿಯನ್ನು ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯು ಉಸ್ತುವಾರಿ ಮತ್ತು ದುಶ್ಯಂತ್ ಪಟೇಲ್ ಸಹ-ಪ್ರಭಾರಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದ್ದಾರೆ ಎಂದು ಪಕ್ಷವು ಅಸೂಚನೆಯಲ್ಲಿ ತಿಳಿಸಿದೆ.

2019 ರ ಏಪ್ರಿಲ್‍ನಲ್ಲಿ ಕರ್ನಾಟಕದ ಕೊಲಾರದಲ್ಲಿ ನಡೆದ ರ್ಯಾಲಿಯೊಂದರಲ್ಲಿ ಹೇಳಿಕೆ ನೀಡಿದ ನಂತರ ಬಿಜೆಪಿಯ ಸೂರತ್ ಪಶ್ಚಿಮ ಶಾಸಕ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಸೂರತ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಮಧ್ಯಪ್ರದೇಶದಲ್ಲಿ 340 ಕೋಟಿ ರೂ.ಮೌಲ್ಯದ ಮಾದಕ ವಸ್ತು, ನಗದು ಜಪ್ತಿ

ಮಾರ್ಚ್‍ನಲ್ಲಿ, ಸೂರತ್ ನ್ಯಾಯಾಲಯವು ಗಾಂಯನ್ನು ತಪ್ಪಿತಸ್ಥರೆಂದು ಘೋಷಿಸಿತು ಮತ್ತು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು, ನಂತರ ಅವರನ್ನು ವಯನಾಡ್ ಲೋಕಸಭಾ ಕ್ಷೇತ್ರದ ಸಂಸದರಾಗಿ ಅನರ್ಹಗೊಳಿಸಲಾಗಿತ್ತು.

ಆಗಸ್ಟ್‍ನಲ್ಲಿ ಸುಪ್ರೀಂ ಕೋರ್ಟ್ ಅವರ ಅಪರಾಧವನ್ನು ತಡೆಹಿಡಿದ ನಂತರ ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಲಾಯಿತು.

RELATED ARTICLES

Latest News