Thursday, May 2, 2024
Homeರಾಜಕೀಯಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು,ಫೆ.2- ಈ ಹಿಂದೆ ಕಾಂಗ್ರೆಸ್ ಪಕ್ಷ ದೇಶವನ್ನೇ ತನ್ನ ಸ್ವಂತ ಆಸ್ತಿಯಂತೆ ನೋಡುತ್ತಿತ್ತು. ಈಗ ಕೊಳ್ಳೆ ಹೊಡೆಯಲು ಉಳಿದಿರುವುದು ರಾಜ್ಯ ಮಾತ್ರ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ರಾಜ್ಯ ಬಿಜೆಪಿ ಹರಿಹಾಯ್ದಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಇಲ್ಲಿಯೂ ತನಗೆ ಕೊಟ್ಟಿರುವುದು ಆಡಳಿತ ಮಾಡುವ ಜವಾಬ್ದಾರಿ ಎಂಬುದನ್ನೂ ಮರೆತು ಜನರ ತೆರಿಗೆ ಹಣದಿಂದಲೇ ನಡೆಸುವ ಯೋಜನೆಗಳನ್ನು ಮುಂದಿಟ್ಟು ಜನರನ್ನೇ ಬ್ಲಾಕ್ಮೇಲ್ ಮಾಡುವ ಹತಾಶ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಲೇವಡಿ ಮಾಡಿದೆ.

ಈ ಹಿಂದೆ ಕಾಂಗ್ರೆಸ್ ಪಕ್ಷ ದೇಶವನ್ನೇ ತನ್ನ ಸ್ವಂತ ಆಸ್ತಿಯಂತೆ ನೋಡುತ್ತಿತ್ತು. ಈಗ ಕೊಳ್ಳೆ ಹೊಡೆಯಲು ಉಳಿದಿರುವುದು ರಾಜ್ಯ ಮಾತ್ರ. ಇಲ್ಲಿಯೂ ತನಗೆ ಕೊಟ್ಟಿರುವುದು ಆಡಳಿತ ಮಾಡುವ ಜವಾಬ್ದಾರಿ ಎಂಬುದನ್ನೂ ಮರೆತು, ಜನರ ತೆರಿಗೆ ಹಣದಿಂದಲೇ ನಡೆಸುವ ಯೋಜನೆಗಳನ್ನು ಮುಂದಿಟ್ಟು ಜನರನ್ನೇ ಬ್ಲಾಕ್ಮೇಲ್ ಮಾಡುವ ಹತಾಶ ಪ್ರಯತ್ನಗಳನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದೆ.

ಬಾಲಕಿಯ ಶಿರಚ್ಛೇದ : ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಉದ್ವಿಗ್ನ ವಾತಾವರಣ

ದೇಶ ಒಡೆಯಲು ಐಎನ್‍ಸಿ ಕಾಂಗ್ರೆಸ್ ಇದುವರೆಗೂ ಮಾಡಿರುವ ಕುತಂತ್ರಗಳು: ಜಿನ್ನಾ-ನೆಹರು ಕುತಂತ್ರದ ಫಲ ಪಾಕಿಸ್ಥಾನ ಸೃಷ್ಟಿ, ದೇಶ ಒಡೆಯಲು ನೆಹರು ಅವರಿಂದ 370ನೇ ವಿ ಗಿಫ್ಟ್, ಖಲಿಸ್ಥಾನಿ ಉಗ್ರ ಭಿಂದ್ರನ್ ವಾಲೆಗೆ ಇಂದಿರೆಯ ಬಲ, ಯಾತ್ರೆ ಮಾಡುತ್ತಾ ದೇಶ ವಿರೋಧಿಗಳನ್ನು ಒಂದುಗೂಡಿಸಿದ ರಾಹುಲ್, ಸಂಸದ ಡಿ. ಕೆ. ಸುರೇಶ್‍ರಿಂದ ಪ್ರತ್ಯೇಕ ರಾಷ್ಟ್ರಕ್ಕಾಗಿ ಬೇಡಿಕೆ, ಕಾಂಗ್ರೆಸ್ಸಿನ ತುಕ್ಡೇ ತುಕ್ಡೇ ಗ್ಯಾಂಗ್ ಗುಲಾಮರು ಲೋಕಸಭಾ ಚುನಾವಣೆ ಸಮೀಪ ಬರುತ್ತಿದ್ದಂತೆ, ಬಾಲ ಬಿಚ್ಚುತ್ತಿದ್ದಾರೆ. ಸೋತು ಸುಣ್ಣವಾಗಿರುವ ಕಾಂಗ್ರೆಸ್ ದೇಶ ವಿಭಜನೆಯ ಜಪ ಮಾಡುತ್ತಿದೆ ಎಂದು ವ್ಯಂಗ್ಯವಾಡಿದೆ.

RELATED ARTICLES

Latest News