ಇಂಪಾಲ,ಫೆ.21- ಮಣಿಪುರದ ಕಾಕ್ಚಿಂಗ್ ಜಿಲ್ಲೆಯಲ್ಲಿ ಬಾಂಬ್ ಸೋಟಗೊಂಡು ಚುನವನಾ ಕರ್ತವ್ಯದಲ್ಲಿದ್ದ ಇಬ್ಬರು ಐಟಿಬಿಟಿ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.ರಾಜ್ಯ ರಾಜಧಾನಿ ಇಂಫಾಲದಿಂದ ಸುಮಾರು 60 ಕಿ.ಮೀಗಳಷ್ಟು ದೂರವಿರುವ ವಾಂಗೂ ತೇರಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಸುಮಾರು 8 ಗಂಟೆ ವೇಳೆಗೆ ಬಾಂಬ್ ಸೋಟಿಸಿತು ಎಂದು ಅವರು ಹೇಳಿದ್ದಾರೆ.
ಘಟನೆ ಸಂಭವಿಸಿದಾಗ ಐಟಿಬಿಟಿ ಸಿಬ್ಬಂದಿ ರಾತ್ರಿ ಗಸ್ತಿನಲ್ಲಿದ್ದರು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು ಇವರನ್ನು ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.ಉತ್ತರಾಖಂಡ್ ಮೂಲದವರಾದ ಈ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಇಂಪಾಲದ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.
ಮಣಿಪುರ ವಿಧಾನಸಭೆಗೆ ಫೆ.28 ಮತ್ತು ಮಾ.5ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾ.10ರಂದು ಮತಗಳ ಎಣಿಕೆ ನಡೆಯಲಿದೆ.
