ಕೆಂಗೇರಿ ಕೆರೆಯಲ್ಲಿ ಮುಳುಗಿದ್ದ ಅಣ್ಣ-ತಂಗಿಯ ಶವಗಳು ಪತ್ತೆ

ಬೆಂಗಳೂರು, ಅ.22 : ಕೆಂಗೇರಿ ಕೆರೆಯಲ್ಲಿ ಮುಳುಗಿದ್ದ ಅಣ್ಣ-ತಂಗಿಯ ಶವಗಳನ್ನು ಕೆರೆಯಿಂದ ಅಗ್ನಿಶಾಮಕ ಸಿಬ್ಬಂದಿ ಹೊರ ತೆಗೆದಿದ್ದಾರೆ. ಬೆಳಿಗ್ಗೆ ಅಣ್ಣ ಜಾನ್ಸಿಸೀನ (13) ಶವ ಪತ್ತೆಯಾಗಿತ್ತು. ಇಂದು ಸಂಜೆ 4.30 ರ ಸುಮಾರಿಗೆ ತಂಗಿ ಮಹಾಲಕ್ಷ್ಮಿ (11) ಶವವನ್ನು ಹೊರತೆಗೆದಿದ್ದಾರೆ. ಎರಡೂ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದೆ. ನಿನ್ನೆ ಸಂಜೆ ಕೆರೆಯಿಂದ ನೀರು ತರಲು ಬಿಂದಿಗೆ ತೆಗೆದುಕೊಂಡು ಹೋಗಿದ್ದ ಅಣ್ಣ-ತಂಗಿ ನೀರಿನಲ್ಲಿ ಮುಳುಗಿಹೋಗಿದ್ದರು. ನಂತರ ಅವರ ತಾಯಿ ಕೆಂಗೇರಿ ಪೊಲೀಸರಿಗೆ ತಿಳಿಸಿದರು. ಇಂದು ಬೆಳಿಗ್ಗೆ … Continue reading ಕೆಂಗೇರಿ ಕೆರೆಯಲ್ಲಿ ಮುಳುಗಿದ್ದ ಅಣ್ಣ-ತಂಗಿಯ ಶವಗಳು ಪತ್ತೆ