Saturday, May 18, 2024
Homeಇದೀಗ ಬಂದ ಸುದ್ದಿಕಾನೂನಿಗಿಂತ ಯಾರೂ ದೊಡ್ಡವರಲ್ಲ : ಮಾಜಿ ಸಿಎಂ ಯಡಿಯೂರಪ್ಪ

ಕಾನೂನಿಗಿಂತ ಯಾರೂ ದೊಡ್ಡವರಲ್ಲ : ಮಾಜಿ ಸಿಎಂ ಯಡಿಯೂರಪ್ಪ

ಶಿವಮೊಗ್ಗ,ಮೇ5-ಕಾನೂನಿನ ಪ್ರಕಾರ ಏನಾಗಬೇಕೋ ಅದೇ ಆಗುತ್ತದೆ. ನೆಲದ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಮಹಿಳೆ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎಸ್‌ಐಟಿಯಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹಾಗೂ ಪೆನ್‌ಡ್ರೈವ್‌ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಅವರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾನೂನಿನ ಪ್ರಕಾರವೇ ಎಲ್ಲ ಕ್ರಮಗಳು ಜರುಗುತ್ತವೆ ಎಂದು ತಿಳಿಸಿದರು.

ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪು ಮಾಡಿದ್ದರೆ ಶಿಕ್ಷೆಯಾಗಬೇಕೆಂದು ಸ್ವತಃ ಕುಮಾರಸ್ವಾಮಿಯವರೇ ಹೇಳಿದ್ದಾರೆ. ಕಾನೂನಿಗೆ ತಲೆ ಬಾಗಿ ರೇವಣ್ಣ ಎಸ್‌ಐಟಿಗೆ ಶರಣಾಗಿದ್ದಾರೆ. ಮುಂದೆ ಕಾನೂನು ಪ್ರಕ್ರಿಯೆಗಳು ನಡೆಯುತ್ತವೆ ಎಂದರು.

ಇಂತಹ ಇಳಿ ವಯಸ್ಸಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ನೋವು ತರಿಸುವ ಘಟನೆ ನಡೆದಿದ್ದು ತುಂಬಾ ಬೇಸರ ತಂದಿದೆ. ಆದಷ್ಟು ಬೇಗ ಸತ್ಯಾಂಶ ಹೊರಬರಬೇಕು. ಗೌಡರು ಇದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬಾರದು. ಅವರು ತಮ್ಮ ಆರೋಗ್ಯದ ಕಡೆ ಗಮನಹರಿಸಲಿ ಎಂದು ಬಿಎಸ್‌ವೈ ಮನವಿ ಮಾಡಿದರು.

RELATED ARTICLES

Latest News