Monday, October 28, 2024
Homeಜಿಲ್ಲಾ ಸುದ್ದಿಗಳು | District Newsಬೆಂಗಳೂರು-ಮೈಸೂರು ಹೆದ್ದಾರಿಯ ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಚಾಲಕ ಸಾವು

ಬೆಂಗಳೂರು-ಮೈಸೂರು ಹೆದ್ದಾರಿಯ ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಚಾಲಕ ಸಾವು

Bus collides with barrier on Bangalore-Mysore highway: Driver dies

ಮಂಡ್ಯ,ಅ.28- ಕೇರಳ ಸರ್ಕಾರಿ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರು-ಮೈಸೂರು ಹೆದ್ದಾರಿಯ ತಡೆಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ಮದ್ದೂರಿನ ಗೆಜ್ಜಲಗೆರೆ ಬಳಿ ಇಂದು ಮುಂಜಾನೆ ನಡೆದಿದೆ.

ಬೆಳಗ್ಗಿನ ಜಾವ 5:30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಬಸ್ ಚಾಲಕ ಆಸೀಫ್ (45) ಮೃತಪಟ್ಟಿದ್ದಾನೆ. ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ಬಸ್ ಕೇರಳಕ್ಕೆ ಹೋಗುತ್ತಿತ್ತು ಚಾಲಕ ನಿದ್ರೆಯ ಮಂಪರಿನಲ್ಲಿ ಬಸ್ ಚಲಾಯಿಸಿದ್ದು ಈ ಅವಘಡಕ್ಕೆ ಕಾರಣವಾಗಿದೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.

ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್‌ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಅದರಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮದ್ದೂರು ಠಾಣೆ ಪೊಲೀಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರ. ಯಾಣಿಕರು ಬೇರೆ ವಾಹನದಲ್ಲಿ ತೆರಳಿದ್ದು ಕೇರಳದ ಸಾರಿಗೆ ಅಧಿಕಾರಿಗಳು ಆಗಮಿಸಿ ಘಟನೆ ಬಗ್ಗೆ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News