Saturday, May 4, 2024
Homeರಾಜ್ಯಕಾಂಗ್ರೆಸ್ ಪಕ್ಷಕ್ಕೆ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆ ಇದೆಯೇ..? : ವಿಜಯೇಂದ್ರ ಪ್ರಶ್ನೆ

ಕಾಂಗ್ರೆಸ್ ಪಕ್ಷಕ್ಕೆ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆ ಇದೆಯೇ..? : ವಿಜಯೇಂದ್ರ ಪ್ರಶ್ನೆ

ಬೆಂಗಳೂರು,ನ.26-ನೆಹರೂ ಕುಟುಂಬದ ಕಟ್ಟಕಡೆಯ ವ್ಯಕ್ತಿಗೂ ಅಧಿಕಾರ ಕೊಡುವುದೇ ಕಾಂಗ್ರೆಸ್ ಪಕ್ಷದ ಗುರಿ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಎಸ್‍ಸಿ ಮೋರ್ಚಾ ವತಿಯಿಂದ ಏರ್ಪಡಿಸಿದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿ. ಡಾ.ಅಂಬೇಡ್ಕರ್ ಹೆಸರನ್ನು ನುಡಿ ಮುತ್ತಾಗಿ ಬಳಸುವ ಕಾಂಗ್ರೆಸ್ ಪಕ್ಷವು ಗೌರವಯುತವಾಗಿ ಅವರ ಶವಸಂಸ್ಕಾರವನ್ನೂ ಮಾಡಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಬಾಬಾಸಾಹೇಬ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.

ನೆಹರೂ ಸ್ಮಾರಕಕ್ಕೆ 30 ಎಕರೆ, ಇಂದಿರಾ ಗಾಂಧಿ ಅವರ ಸ್ಮಾರಕಕ್ಕೆ 20 ಎಕರೆ ನೀಡಿದ್ದರು. ಆದರೆ, ಸಂವಿಧಾನ ನೀಡಿದ ರಾಷ್ಟ್ರೀಯ ಸ್ಮಾರಕವನ್ನೇಕೆ ಮಾಡಿಲ್ಲ? ಅವರ ನೆನಪಾಗಲಿಲ್ಲವೇ ಎಂದು ಪ್ರಶ್ನೆಗಳನ್ನು ಮುಂದಿಟ್ಟರು. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಅಂಬೇಡ್ಕರ್ ಅವರ ಸ್ಮಾರಕ ಘೋಷಿಸಿ ಉದ್ಘಾಟನೆ ಮಾಡಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ಸಿಗರಿಂದ ಅಂಬೇಡ್ಕರ್ ಅವರ ಬಗ್ಗೆ ತಿಳಿದುಕೊಳ್ಳುವ ಅಗತ್ಯ ಬಿಜೆಪಿಯವರಿಗೆ ಇಲ್ಲ ಎಂದ ಅವರು, ಬಿಜೆಪಿ ಸರಕಾರವು ಪಂಚತೀರ್ಥಗಳನ್ನು ಅಭಿವೃದ್ಧಿ ಮಾಡಿದ್ದನ್ನು ನೆನಪಿಸಿದರು. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ ಪಕ್ಷ ಕಾಂಗ್ರೆಸ್ ಎಂದು ವಿವರಿಸಿದರು.

26 ನವೆಂಬರ್ ಅನ್ನು ಸಂವಿಧಾನ ಸಮರ್ಪಣಾ ದಿನ ಎಂದು ಘೋಷಿಸುವ ಮೂಲಕ ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ಸೂಚಿಸಿದ್ದೇ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರಮೋದಿಯವರು. ಬಿಜೆಪಿ ಉದ್ದೇಶವೇ ಕಟ್ಟಕಡೆಯ ವ್ಯಕ್ತಿಗೂ ಕೂಡ ನ್ಯಾಯ ನೀಡುವುದು ಎಂದರು.

ಭ್ರೂಣ ಹತ್ಯೆ ಕೋರರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ

ಸ್ವತಂತ್ರ ಭಾರತದ ಇತಿಹಾಸದಲ್ಲಿ ಇಂದು ಮಹತ್ವದ ದಿನ. 1949 ನವೆಂಬರ್ 26 ರಂದು ಭಾರತೀಯರಿಗೆ ಪವಿತ್ರವಾದ ಸಂವಿಧಾನವನ್ನು ಅಂಗೀಕರಿಸಿದ ದಿನ. ಭಾರತರತ್ನ ಸಿದ್ದರಾಮಯ್ಯನವರು ಮತಬ್ಯಾಂಕ್ ರಾಜಕೀಯವನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಬಾಸಾಹೇಬರ ಆಶಯವನ್ನು ಮೋದಿಜೀ ಅವರು ಅನುಷ್ಠಾನ ಮಾಡುತ್ತಿದ್ದಾರೆ. ಸಂವಿಧಾನವನ್ನು ಉಳಿಸುವ ಮಹತ್ವದ ಜವಾಬ್ದಾರಿ ದೇಶದ ಪ್ರತಿಯೊಬ್ಬ ಪ್ರಜೆಯ ಮೇಲೂ ಇದೆ ಎಂದು ತಿಳಿಸಿದರು.

ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಅತಿಥಿಯಾಗಿ ಮಾತನಾಡಿ, ಕಾಂಗ್ರೆಸ್ ಪಕ್ಷದವರು ದೀನದಲಿತರನ್ನು ಮತಬ್ಯಾಂಕಾಗಿ ಬಳಸಿಕೊಂಡರೇ ಹೊರತು ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಬಯಸಿದಂತೆ ಅಸ್ಪಶ್ಯರು ಮತ್ತು ದಲಿತರನ್ನು ಮೇಲೆತ್ತುವ ಕೆಲಸ ಮಾಡಲಿಲ್ಲ. ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಆದ್ಯತೆ ಕೊಡಲು ಹೇಳಿದ್ದರು. ಬಡತನ, ಮೂಢನಂಬಿಕೆ, ಶಿಕ್ಷಣ ವಂಚಿತರಾಗಿರುವ ದಲಿತರನ್ನು ಮೇಲೆತ್ತುವ ಕೆಲಸವನ್ನು ಯಾವತ್ತೂ ಕಾಂಗ್ರೆಸ್ ಪಕ್ಷ ಮಾಡಲಿಲ್ಲ ಎಂದು ತಿಳಿಸಿದರು.

ಮೋದಿ ಪಂಜಾಬ್‍ ಭೇಟಿ ವೇಳೆ ಭದ್ರತಾಲೋಪ, ಮತ್ತೆ 6 ಪೊಲೀಸರ ಅಮಾನತು

ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ,ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ಪಕ್ಷದ ಪದಾ„ಕಾರಿಗಳು, ಎಸ್‍ಸಿ ಮೋರ್ಚಾ ಪದಾ„ಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES

Latest News