ಸಿದ್ದರಾಮಯ್ಯ ಸರ್ಕಾರಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ : ವಿಜಯೇಂದ್ರ

ಬೆಂಗಳೂರು,ಜೂ.21– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಕರ್ನಾಟಕ ಇಂದು ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದ್ದು, ರೈತರು, ಕೂಲಿಕಾರ್ಮಿಕರು, ದೀನದಲಿತರು, ಬಡವರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಬರೀ ಗ್ಯಾರಂಟಿಗಳ ಡಂಗೂರ ಸಾರಲಾಗುತ್ತಿದೆ. ಅಭಿವೃದ್ಧಿ ಕಾರ್ಯ ಸಂಪೂರ್ಣವಾಗಿ ಸ್ಥಗಿತವಾಗಿದ್ದು, ಆಡಳಿತ ಪಕ್ಷದ ಶಾಸಕರ ಕ್ಷೇತ್ರಗಳಿಗೆ ನಯಾಪೈಸಾ ಹಣ ಬಿಡುಗಡೆಯಾಗುತ್ತಿಲ್ಲ. ಆರ್ಥಿಕ ಪರಿಸ್ಥಿತಿ ದಿವಾಳಿ ಹಂತಕ್ಕೆ ತಲುಪಿದೆ ಎಂದು ಆರೋಪಿಸಿದರು. … Continue reading ಸಿದ್ದರಾಮಯ್ಯ ಸರ್ಕಾರಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ : ವಿಜಯೇಂದ್ರ