Saturday, July 27, 2024
Homeರಾಜ್ಯBIG NEWS: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

BIG NEWS: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು, ಮೇ 31 – ಮೈಸೂರು ಜಿಲ್ಲೆ, ಕೆ.ಆರ್.ನಗರ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರು ಸೆಷನ್ ನ್ಯಾಯಾಲಯ ವಜಾ ಮಾಡಿದೆ. ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ವಾದ-ಪ್ರತಿವಾದಗಳನ್ನು ಆಲಿಸಿ ಕಾಯ್ದಿರಿಸಿದ್ದ ತೀರ್ಪನ್ನ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್ ಅವರು ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದರು.

ಈ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್ ನೀಡಿಯೇ ಇರಲಿಲ್ಲ. ಆದರು ಅವರು ಡಿ.ಐ.ಜಿ ಗೆ ಪತ್ರ ಬರೆದು ವಿಚಾರಣೆಗೆ ಸಹಕರಿಸುವುದಾಗಿ ತಿಳಿಸದರು. ಅಲ್ಲದೆ ಪ್ರಕರಣದ ಆರೋಪಿಗಳೊಂದಿಗೆ ಸಂಭಾಷಣೆ ನಡೆಸಿರುವ ಬಗ್ಗೆ ದಾಖಲೆಗಳಿವೆ ಎಂದು ಎಸ್.ಐ.ಟಿ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ಸಂತ್ರಸ್ಥ ಮಹಿಳೆಯನ್ನ ಹೆದರಿಸುವ ಸಂಬಂಧ ಆರೋಪಿಗಳೊಂದಿಗೆ ಚರ್ಚೆ ನಡೆಸಿರುವ ದಾಖಲೆಗಳಿವೆ. ಇವರು ಪ್ರಭಾವಿಯಾಗಿದ್ದು ಇವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು, ಇವರನ್ನು ಎಸ್.ಐ.ಟಿ ವಶದಲ್ಲಿಟ್ಟು ವಿಚಾರಣೆ ನಡೆಸಲು ಅವಕಾಶ ನೀಡಬೇಕೆಂದು ಸರ್ಕಾರಿ ಪರ ವಕೀಲರಾದ ಜಗದೀಶ್ ಅವರು ಪ್ರಭಲ ವಾದ ಮಂಡಿಸಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು ಭವಾನಿ ರೇವಣ್ಣ ಅವರ ಪರ ವಕೀಲರು ಇಷ್ಟು ದಿನಗಳಾದರೂ ಎಸ್.ಐ.ಟಿ ಅವರು ವಿಚಾರಣೆಗೆ ಯಾವುದೇ ನೋಟೀಸ್ ನೀಡಿಲ್ಲ.

ಜಾಮೀನಿಗೆ ಅರ್ಜಿ ಸಲ್ಲಿದ್ದ ಮೇಲೆ ಆಕ್ಷೇಪಗಳನ್ನು ಮಾಡುತ್ತಿದ್ದಾರೆ. ಆರೋಪಿಗಳೊಂದಿಗೆ ನಡೆಸಿದ್ದಾರೆ ಎನ್ನಲಾದ ಸಂಭಾಷಣೆಗಳಿಗೆ ಯಾವುದೇ ದಾಖಲೆಯಿಲ್ಲ. ನಮ್ಮ ಕಕ್ಷಿದಾರರು ವಿಚಾರಣೆಗೆ ಸಹಕರಿಸುತ್ತಾರೆ, ಅವರಿಗೆ ಜಾಮೀನು ನೀಡಬೇಕೆಂದು ಮನವಿ ಮಾಡಿದ್ದರು.

ವಾದ-ಪ್ರತಿವಾದಿಗಳನ್ನು ಆಲಿಸಿದ್ದ ನ್ಯಾಯಾಧೀಶರು ತೀರ್ಪನ್ನು ಮೇ 31ಕ್ಕೆ ಕಾಯ್ದಿರಿಸಿದ್ದ ತೀರ್ಪು ನೀಡಿ, ನಿರೀಕ್ಷಣಾ ಜಾಮೀನು ಮನವಿ ತಳ್ಳಿ ಹಾಕಿದರು ಇದರಿಂದ ಭವಾನಿ ರೇವಣ್ಣ ಅವರಿಗೆ ಬಂಧನದ ಬೀತಿ ಎದುರಾಗಿ

RELATED ARTICLES

Latest News