ಮಂಡ್ಯ, ಫೆ.3-ಜಿಲ್ಲೆಯಲ್ಲಿ ಮೈಕ್ರೋಫೈನಾನ್ಸ್ ನವರ ಉಪಟಳ ಜಾಸ್ತಿಯಾಗಿದ್ದು, ಅವರಲ್ಲಿ ಯಾರೇ ಆಗಲಿ ನಿಮ ಮನೆ ಬಳಿಗೆ ಬಂದು ಕಿರುಕುಳ ನೀಡಿದರೆ ತಕ್ಷಣವೇ ನನಗೆ ದೂರವಾಣಿ ಕರೆ ಮಾಡಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಧೈರ್ಯ ತುಂಬಿದರು.
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಸಂತೆಕಸಲಗೆರೆ ಗ್ರಾಮದಲ್ಲಿ ಭೂಮಿ ಸಿದ್ಧೇಶ್ವರಸ್ವಾಮಿ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಿಮಗೆ ಯಾರೇ ಮೈಕ್ರೋಫೈನಾನ್ಸ್ ನವರು ಬಂದು ಕಿರುಕುಳ ನೀಡಿದರೆ ಹೆದರಬೇಡಿ. ರೌಡಿಗಳನ್ನು ಕರೆದುಕೊಂಡು ಬಂದು ಗಲಾಟೆ ಮಾಡಿದರೆ ತಕ್ಷಣ ನನಗೆ ಕರೆ ಮಾಡಿ, ನಾನಿದ್ದೇನೆ. ನಿಮ ಜೀವ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಜೀವ ತೆಗೆದುಕೊಳ್ಳುವ ಕೆಲಸ ಮಾಡಬೇಡಿ ಎಂದು ಅವರು ಹೇಳಿದರು.
ಬಡ್ಡಿ, ಚಕ್ರಬಡ್ಡಿ ವಿಧಿಸಿ ಜನರಿಗೆ ಹಿಂಸೆ ಕೊಡುತ್ತಿದ್ದಾರೆ. ಇದು ಅಮಾನವೀಯ. ಅಸಲು ತೀರುವುದೇ ಇಲ್ಲ ಹಳ್ಳಿಗಳ ಯುವಕರು ಆನ್ಲೈನ್ ಗೇಮ್ಗಳ ಚಟಕ್ಕೆ ಸಿಕ್ಕಿಕೊಳ್ಳುತ್ತಿದ್ದಾರೆ. ಅಲ್ಲಿಯೂ ಸಾಲಕ್ಕೆ ಅವರು ಸಿಲುಕಿ ಕೊನೆಗೆ ಸಾವಿಗೆ ಶರಣಾಗುತ್ತಿದ್ದಾರೆ. ಇದು ಅತ್ಯಂತ ದಾರುಣ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.
ನಾನು 2018ರಲ್ಲಿ ಮುಖ್ಯಮಂತ್ರಿಯಾಗುವ ಮೊದಲು ಮಂಡ್ಯ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ರೈತರು ಆತಹತ್ಯೆ ಮಾಡಿಕೊಂಡಿದ್ದರು. ಈ ಸರಣಿ ಸಾವುಗಳು ನನಗೆ ತೀವ್ರ ಆಘಾತ ಮಾಡುತ್ತಿದ್ದವು. ನಾನು ಮಂಡ್ಯಕ್ಕೆ ಬಂದು ಆತಹತ್ಯೆ ಮಾಡಿಕೊಳ್ಳಬೇಡಿ ಎಂದು ರೈತರಲ್ಲಿ ಮನವಿ ಮಾಡಿದೆ. ಆಮೇಲೆ ನಾನು 25,000 ಕೋಟಿ ರೂ. ಸಾಲ ಮನ್ನಾ ಮಾಡಿದೆ. ಋಣಮುಕ್ತ ಕಾಯ್ದೆ ಜಾರಿಗೆ ತಂದೆ. ನಾನೇ ಸ್ವತಃ ರಾಷ್ಟ್ರಪತಿಗಳ ಬಳಿಗೆ ಹೋಗಿ ಕಾಯ್ದೆಗೆ ಅಂಕಿತ ಹಾಕಿಸಿಕೊಂಡು ಬಂದೆ ಎಂದು ಅವರು ಹೇಳಿದರು.
ಮೈಕ್ರೋಫೈನಾನ್ಸ್ ಉಪಟಳ ಕೆಲ ತಿಂಗಳ ಹಿಂದೆ ಚಾಮರಾಜನಗರದಲ್ಲಿ ಆರಂಭವಾಯಿತು. ರಾಜ್ಯದ ಉದ್ದಗಲಕ್ಕೂ ಸರಣಿ ಸಾವುಗಳು ಸಂಭವಿಸುತ್ತಿವೆ. ಆದರೆ, ನಮ ರಾಜ್ಯದ ಕಾನೂನು ಸಚಿವರು ಇನ್ನೂ ಸಮಗ್ರವಾಗಿ ಚಿಂತನೆ ಮಾಡುತ್ತಿದ್ದಾರೆ. ಬೇರೆ ಯಾವುದೇ ವಿಷಯಕ್ಕೆ ವಿದ್ಯುತ್ ವೇಗದಲ್ಲಿ ನಿರ್ಧಾರ ಕೈಗೊಳ್ಳುವ ಸರ್ಕಾರ ಮೈಕ್ರೋ ಫೈನಾನ್್ಸಗಳಿಂದ ಜನರನ್ನು ರಕ್ಷಣೆ ಮಾಡಲು ಮೀನಮೇಷ ಎಣಿಸುತ್ತಿದೆ. ಇದು ಯಾಕೆ ಅನುಮಾನ ಕಾಡುತ್ತಿದೆ ಎಂದು ಅವರು ಹೇಳಿದರು.
ಹಳ್ಳಿಯ ಬದುಕು ಅಯೋಮಯವಾಗಿದೆ. ಹಳೆಯ ಕಾಲದ ಹಳ್ಳಿಗಳು ಮರೆಯಾಗುತ್ತಿವೆ. ಮಾನವೀಯ ಮೌಲ್ಯಗಳು ಅಳಿದು ಹೋಗುತ್ತಿವೆ. ಭಾರತ ಇಂದು ಜಗತ್ತಿನ ಮೂರನೇ ಅತಿದೊಡ್ಡ ಜಾಗತಿಕ ಶಕ್ತಿಯಾಗಿ ಹೊರಹೊಮುತ್ತಿದೆ. ಆದರೆ, ಸಮಾಜ ಕಲುಷಿತವಾಗುತ್ತಿದೆ. ಯುವ ಪೀಳಿಗೆ ದಾರಿ ತಪ್ಪುತ್ತಿದೆ. ನಾವು ಬೆಳೆಯಬೇಕು, ಅಭಿವೃದ್ಧಿ ಹೊಂದಬೇಕು ಹಾಗೂ ನಮ ಸಮಾಜ ಸಂತೋಷವಾಗಿರಬೇಕು ಎಂದು ಸಚಿವರು ಆಶಿಸಿದರು.
ಹಿಂದೆ ಸಮಾಜದಲ್ಲಿ ಸೇವಾ ಮನೋಭಾವ, ನಿಸ್ವಾರ್ಥಹ ಇತ್ತು. ಸಮಸ್ಯೆ ಬಂದರೆ ಗ್ರಾಮಸ್ಥರೇ ಕೂತು ಬಗೆಹರಿಸಿಕೊಳ್ಳುತ್ತಿದ್ದರು. ಈಗ ಅಂತಹ ಪರಿಸ್ಥಿತಿ ಇಲ್ಲ. ಸಣ್ಣ ತುಂಡು ಭೂಮಿಗಾಗಿ ಅಣ್ಣತಮಂದಿರು ಜಗಳ ಮಾಡಿಕೊಂಡು ಪೊಲೀಸ್ ಠಾಣೆ, ಕೋರ್ಟ್ ಅಂತ ಅಲೆಯುತ್ತಿದ್ದಾರೆ. ನೆಮದಿಯ ಬದುಕು ದೂರವಾಗಿದೆ. ಹಳ್ಳಿ ಅಭಿವೃದ್ಧಿಯಾಗಬೇಕು, ಆದರೆ ನಮ ಮೌಲ್ಯಗಳನ್ನು ಬಿಟ್ಟುಕೊಡಬಾರದು ಎಂದು ಅವರು ತಿಳಿಸಿದರು.
ರಾಜಕಾರಣಕ್ಕೆ ಪರಸ್ಪರ ಜಗಳ ಬೇಡ. ನಿಮ ಮತ ನಿಮ ಇಷ್ಟ. ರಾಜಕಾರಣ ನಿತ್ಯದ ಕೆಲಸವಾಗಬಾರದು ಎಂದು ಅವರು ಕಿವಿಮಾತು ಹೇಳಿದರು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ, ದೇಗುಲದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್.ತಮಣ್ಣ, ಉಪಾಧ್ಯಕ್ಷ ಶಿವಣ್ಣ ಸೇರಿದಂತೆ ಸಮಿತಿಯ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.