ಟಿಕೆಟ್ ನೀಡುವಂತೆ ಸೋಶಿಯಲ್ ಮೀಡಿಯಾದಲ್ಲಿ ಪ್ರತಾಪ್ ಸಿಂಹ ಪರ ಶುರುವಾಯ್ತು ಅಭಿಯಾನ

ಬೆಂಗಳೂರು,ಮಾ.13- ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ ಎಂಬ ವದಂತಿ ಹಬ್ಬಿರುವ ಬೆನ್ನಲ್ಲೇ ಅವರ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟರ್ ಅಭಿಯಾನವೂ ಶುರುವಾಗಿದೆ. ವಿವಿಧ ಪೊಸ್ಟರ್ಗಳನ್ನು ಹಂಚಿಕೊಳ್ಳುವ ಮೂಲಕ ರಾಜ್ಯ ಬಿಜೆಪಿ ನಾಯಕರನ್ನು ಪ್ರಶ್ನೆ ಮಾಡಿರುವ ಅವರ ಬೆಂಬಲಿಗರು, ಪೊಸ್ಟರ್ಗಳಲ್ಲಿ ಯಾವ ಕಾರಣಕ್ಕೆ ಟಿಕೆಟ್ ನೀಡಲಾಗಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಒಕ್ಕಲಿಗ ಎನ್ನುವ ಕಾರಣಕ್ಕೆ ಪ್ರತಾಪ್ ಸಿಂಹಗೆ ಟಿಕೆಟ್ ಕೊಡುವುದಿಲ್ಲವೇ? ರಾಜಕೀಯದಲ್ಲಿ ಒಳ್ಳೆಯರಿಗೆ ಬೆಲೆ … Continue reading ಟಿಕೆಟ್ ನೀಡುವಂತೆ ಸೋಶಿಯಲ್ ಮೀಡಿಯಾದಲ್ಲಿ ಪ್ರತಾಪ್ ಸಿಂಹ ಪರ ಶುರುವಾಯ್ತು ಅಭಿಯಾನ