ಅಹಮದಾಬಾದ್, ಜೂ.14- ವಿಮಾನದ ಟೇಕ್ ಆಫ್ಗೆ ಸಾಕಷ್ಟು ಪ್ರೆಷರ್ ಸಿಗುತ್ತಿಲ್ಲ. ವಿದ್ಯುತ್ ಪೂರೈಕೆ ಕಡಿಮೆಯಾಗುತ್ತಿದೆ, ವಿಮಾನ ಟೇಕ್ ಆಫ್ ಆಗುತ್ತಿಲ್ಲ, ಮೇಡೇ ಒತ್ತಡವಿಲ್ಲ, ಶಕ್ತಿ ಕಳೆದುಕೊಳ್ಳುತ್ತಿದೆ. ಮೇಲೇರಿಸಲು ಸಾಧ್ಯವಾಗುತ್ತಿಲ್ಲ. ನಾವು ಬದುಕುಳಿಯುವುದಿಲ್ಲ.! ವಿಶ್ವದ ಅತಿ ದೊಡ್ಡ ವಿಮಾನ ಅಪಘಾತ ಎಂದೇ ಹೇಳಲಾಗಿರುವ ಗುಜರಾತ್ನ ಆಹಮದಬಾದ್ನಲ್ಲಿ ಗುರುವಾರ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೂ ಮುನ್ನ ಪೈಲೆಟ್ ಏರ್ ಟ್ರಾಫಿಕ್ ಕಂಟ್ರೋಲ್ ಗೆ ( ಎಟಿಸಿ) ಗೆ ಕಳುಹಿಸಿದ್ದ ಸಂದೇಶ ಇದು.
ಇದೀಗ ಈ ಸಂದೇಶ ಸಾಕಷ್ಟು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಮೇಡೇ ಎಂಬ ಪದವು ಫ್ರೆಂಚ್ ಪದ ಮೈಡರ್ನಿಂದ ಬಂದಿದೆ. ನಾವು ಆಪಾಯದಲ್ಲಿದ್ದೇವೆ. ನನಗೆ ಸಹಾಯ ಮಾಡಿ ಎಂಬುದು ಇದರ ಅರ್ಥ.ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಆಹಮದಾಬಾದ್ನಲ್ಲಿ ಪತನಗೊಳ್ಳುವ ಮುನ್ನ ಪೈಲಟ್ ಸುಮಿತ್ ಸಭರ್ವಾಲ್ ಮೇಡೇ ಸಂದೇಶ ಮಾತ್ರವಲ್ಲದೆ ಇನ್ನೂ ಕೆಲವು ವಿಚಾರಗಳನ್ನು ಹೇಳಿದ್ದರು ಎಂಬುದು ಆಡಿಯೋ ಸಂದೇಶದಿಂದ ಗೊತ್ತಾಗಿದೆ.
ಸಭರ್ವಾಲ್ ಅವರು ಎಟಿಸಿಗೆ ಕೊನೆಯ ಸಂದೇಶದಲ್ಲಿ ತಿಳಿಸಿದ್ದಾರೆ. ಇದಾದ ಕೆಲವು ಸೆಕೆಂಡುಗಳ ನಂತರ, ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಯಿತು.ವಿಮಾನವು 625 ಅಡಿ ಎತ್ತರವನ್ನು ತಲುಪಿದ ಸ್ವಲ್ಪ ಸಮಯದ ನಂತರ ನಿಮಿಷಕ್ಕೆ – 475 ಅಡಿ ವೇಗದಲ್ಲಿ ಹಠಾತ್ ಇಳಿಯಲು ಪ್ರಾರಂಭಿಸಿತು. ತಕ್ಷಣವೇ ಪೈಲಟ್ ಸುಮೀತ್ ಸಭರ್ವಾಲ್ ಮತ್ತು ಸಹ-ಪೈಲಟ್ ಡ್ರೈವ್ ಕುಂದರ್ ವಾಯು ಸಂಚಾರ ನಿಯಂತ್ರಣ (ಎಟಿಸಿ)ಗೆ ಮೇಡೇ ಸಂದೇಶ ನೀಡಿದ್ದರು. ಇದರ ಬೆನ್ನಲ್ಲೇ ಎಟಿಸಿ ಮಾಡಿದ ಎಲ್ಲಾ ಕರೆಗಳಿಗೆ ಪೈಟನ್ನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ.
ಮೇಡೇ ಎಂದರೆ ವಿಮಾನ ತುಂಬಾ ಆಪಾಯದಲ್ಲಿದೆ ಎಂದರ್ಥ. ಜೀವಕ್ಕೆ ಅಪಾಯವಿದೆ ಎಂದು ತುರ್ತು ಪರಿಸ್ಥಿತಿಯನ್ನು ಸೂಚಿಸಲು ವಾಯುಯಾನ ಮತ್ತು ಸಮುದ್ರ ಸಂವಹನದಲ್ಲಿ
ಬಳಸಲಾಗುವ ಅತ್ಯುನ್ನತ ಮಟ್ಟದ ರೇಡಿಯೋ ಸಂಕೇತವಾಗಿದೆ. ಇದು ತಕ್ಷಣದ ಸಹಾಯದ ಅಗತ್ಯವಿದೆ ಎಂದು ಸೂಚಿಸುತ್ತದೆ.
ಜೂನ್ 12 ರಂದು ಸಂಭವಿಸಿದ್ದ ವಿಮಾನ ಅಪಘಾತದಲ್ಲಿ ವಿಮಾನದಲ್ಲಿದ್ದ ಸಿಬ್ಬಂದಿ ಸೇರಿದಂತೆ 241 ಜನರು ಸಾವನ್ನಪ್ಪಿದರು. ಅಲ್ಲದೆ, ವೈದ್ಯಕೀಯ ಕಾಲೇಜು ಹಾಸ್ಟೆಲ್ನಲ್ಲಿದ್ದವರೂ ಮೃತಪಟ್ಟಿದ್ದರು. ಒಟ್ಟಾರೆಯಾಗಿ ಈವರೆಗೆ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿತ್ತು. ವಿಮಾನ ಪತನವಾಗುವ ಮೊದಲು ಪೈಲಟ್ ಎಟಿಸಿಗೆ ಮೇಡೇ ಸಂದೇಶ (ಅಪಾಯವನ್ನು ಸೂಚಿಸುವ ಸಂದೇಶ) ಕಳುಹಿಸಿದ್ದರು.
ಅಪಘಾತಕ್ಕೀಡಾದ ವಿಮಾನವನ್ನು ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಮತ್ತು ಕಮಾಂರ್ಡ ಕೈವ್ ಕುಂದರ್ ನಿರ್ವಹಿಸುತ್ತಿದ್ದರು. ವಿಮಾನವು ಅಹಮದಾಬಾದ್ ರನ್ ವೇ 23 ರಿಂದ ಮಧ್ಯಾಹ್ನ 1:39 ಕ್ಕೆ ಹೊರಟಿತ್ತು. ಕೆಲವೇ ನಿಮಿಷಗಳಲ್ಲಿ ಎಟಿಸಿಗೆ ಆಮೇಡೇ ಸಂದೇಶ ಬಂದಿತು.ಆದರೆ ನಂತರ ವಿಮಾನವು ಎಟಿಸಿ ಮಾಡಿದ ಕರೆಗಳಿಗೆ ಪ್ರತಿಕ್ರಿಯಿಸಲಿಲ್ಲ, ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನವು ಏರ್ಪೋರ್ಟ್ ಪರಿಧಿಯ ಹೊರಗೆ ವೈದ್ಯಕೀಯ ಕಾಲೇಜು ಕಟ್ಟಡಕ್ಕೆ ಅಪ್ಪಳಿಸಿತು. ಅಪಘಾತದ ಸ್ಥಳದಿಂದ ಭಾರೀ ಕಪ್ಪು ಹೊಗೆ ಬರುತ್ತಿರುವುದು ಕಂಡುಬಂದಿತು. ಪೈಲಟ್ ಅವರ ಕೊನೆಯ ಮಾತುಗಳ ನಂತರ ವಿಮಾನ ಅಪಘಾತಕ್ಕೀಡಾಯಿತು. ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಅವರಿಗೆ 200 ಗಂಟೆಗಳ ವಿಮಾನ ಹಾರಾಟದ ಅನುಭವವಿದೆ ಎಂಬುದು ಗಮನಾರ್ಹ.
ಮತ್ತೊಂದೆಡೆ, ವಿಮಾನ ಪತನ ಸಂಬಂಧ ತನಿಖೆ ಚುರುಕುಗೊಂಡಿದೆ. ವಿಮಾನ ದುರಂತ ಸ್ಥಳಕ್ಕೆ ಭೇಟಿ ನೀಡಿರುವ ಡಿಜಿಸಿಎ (ನಾಗರಿಕ ವಿಮಾನಯಾನ) ಅಧಿಕಾರಿಗಳು ಇಂಚಿಂಚೂ ಶೋಧ ನಡೆಸಿ ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ.