ಬೆಂಗಳೂರು,ಜು.17- ಕಾವೇರಿ ಆರತಿ ನಡೆಸುವ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ನ್ಯಾಯಾಲಯದಿಂದ ಇತ್ಯರ್ಥವಾದ ನಂತರ ನಾವು ಕಾವೇರಿ ಆರತಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡಲು ಉದ್ದೇಶಿಸಲಾಗಿದೆ. ಈ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಅದು ಮುಗಿದ ಬಳಿಕ ನಾವು ಸೂಕ್ತ ತೀರ್ಮಾನ ಮಾಡುತ್ತೇವೆ ಎಂದರು.
ರಾಜ್ಯಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ವಿರೋಧಿಸಿದರು. ಆದರೆ ದೆಹಲಿಯಲ್ಲಿ ಅವರೇ ಜಾರಿಗೆ ತಂದರು. ಬಿಜೆಪಿಯವರು ಹೇಳಿದಂತೆ ನಡೆದುಕೊಂಡಿಲ್ಲ. ಗ್ಯಾರಂಟಿ ಯೋಜನೆಗಳು ಅನುಕೂಲವಾಗಿವೆ. ಈಗ ಬಿಹಾರ ರಾಜ್ಯದಲ್ಲೂ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದಾರೆ ಎಂದು ಹೇಳಿದರು.
ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುತ್ತಿದ್ದು, ಬಿಜೆಪಿಯವರ ಗ್ಯಾರಂಟಿಗಳಿಗೆ ನಮ ವಿರೋಧವೇನೂ ಇಲ್ಲ. ಅವರು ಕೂಡ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನರಿಗೆ ಒಳ್ಳೆಯದನ್ನು ಮಾಡಲಿ ಎಂದರು.
- ಧರ್ಮಸ್ಥಳದ ಪರ ಬಿಜೆಪಿಯವರ ಪ್ರತಿಭಟನೆಗೆ ಹಣ ಎಲ್ಲಿಂದ ಬರುತ್ತಿದೆ.. ? : ಹೊಸ ಟ್ವಿಸ್ಟ್ ಸಿಎಂ
- 232 ಕೋಟಿ ವಂಚನೆ ಪ್ರಕರಣದಲ್ಲಿ ರಾಹುಲ್ ವಿಜಯ್ ಅರೆಸ್ಟ್
- ಪಾಕಿಸ್ತಾನ : ಹೆಲಿಪ್ಯಾಡ್ ಮೇಲೆ ಲ್ಯಾಂಡಿಂಗ್ ಟೆಸ್ಟ್ ನಡೆಸುತ್ತಿದ್ದಾಗ ಹೆಲಿಕಾಪ್ಟರ್ ಪತನ, ಐವರ ಸಾವು
- ಅಮೆರಿಕದಲ್ಲಿ ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ಬಾಡಿ ಬಿಲ್ಡರ್ ಸುರೇಶ್ಬಾಬು ಸಾವು..!
- ಧರ್ಮಸ್ಥಳದ ವಿರುದ್ಧ ಷಡ್ಯಂತ್ರದ ಪ್ರಕರಣಕ್ಕೆ ಇ.ಡಿ ಎಂಟ್ರಿ..!