ಡಿಕೆಶಿಗೆ ಕಾನೂನು ಕಂಟಕ : ಸಂಪುಟದ ನಿರ್ಣಯ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಿಬಿಐ

ಬೆಂಗಳೂರು,ಅ.21- ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಣಯವನ್ನು ಪ್ರಶ್ನೆಸಿ ಸಿಬಿಐ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ.ಈಗಾಗಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಸುಪ್ರೀಂಕೋರ್ಟ್‌ಗೆ ಮೇಲ್ನನವಿ ಅರ್ಜಿ ಸಲ್ಲಿಸಿದ್ದು, ನವಂಬರ್‌ 4 ರಂದು ಅರ್ಜಿ ವಿಚಾರಣೆಗೆ ಬರಲಿದೆ. ಇದರ ಬೆನ್ನಲ್ಲೇ ಸಿಬಿಐ ಕೂಡಾ ಸರ್ವೋಚ್ಛ ನ್ಯಾಯಾಲಯಕ್ಕೆ ವಿಶೇಷ ಮೇಲನವಿ ಅರ್ಜಿ ಹಾಕಿರುವುದರಿಂದ ಡಿ.ಕೆ.ಶಿವಕುಮಾರ್‌ಗೆ ಮತ್ತಷ್ಟು ಕಾನೂನಿನ ಕುಣಿಕೆ ಬಿಗಿಯಾಗುವ ಸಾಧ್ಯತೆ ಇದೆ. ಸಿಬಿಐ ಪರವಾಗಿ … Continue reading ಡಿಕೆಶಿಗೆ ಕಾನೂನು ಕಂಟಕ : ಸಂಪುಟದ ನಿರ್ಣಯ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಿಬಿಐ