Thursday, May 2, 2024
Homeರಾಜ್ಯದರೋಡೆಗೆ ಹೊಂಚು ಹಾಕಿದ್ದ 6 ಮಂದಿ ಬಂಧನ

ದರೋಡೆಗೆ ಹೊಂಚು ಹಾಕಿದ್ದ 6 ಮಂದಿ ಬಂಧನ

ಬೆಂಗಳೂರು,ಜ.2- ರುದ್ರಭೂಮಿ ಕಡೆಗೆ ಹೋಗುವ ರಸ್ತೆಯಲ್ಲಿ ಸಾರ್ವಜನಿಕರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ, ಬೆಲೆ ಬಾಳುವ ವಸ್ತು ಗಳನ್ನು ದೋಚಲು ಹೊಂಚು ಹಾಕುತ್ತಿದ್ದ ಆರು ಮಂದಿ ದರೋಡೆ ಕೋರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚಂದನ್, ಮನು, ಪವನ್, ಲೋಕೇಶ್, ದರ್ಶನ್ ಮತ್ತು ವಸಂತ್ ಬಂಧಿತ ಆರೋಪಿಗಳು.

ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ವೀರಣ್ಣಪಾಳ್ಯ ಹಿಂದು ರುದ್ರಭೂಮಿ ಕಡೆಗೆ ಹೋಗುವ ರಸ್ತೆಯಲ್ಲಿ ಸಾರ್ವಜನಿಕ ರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಲು ಹೊಂಚು ಹಾಕುತ್ತಿದ್ದಾರೆ ಎಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಧಾವಿಸಿ ಆರು ಮಂದಿಯನ್ನು ಬಂಧಿಸಿ ಮಾರಕಾಸ್ತ್ರಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಮೂರು ಬೈಕ್‍ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ರೈತರು, ಕನ್ನಡಪರ ಹೋರಾಟಗಾರರ ಕೇಸ್ ವಾಪಸ್!

ಆರೋಪಿಗಳ ಪೈಕಿ ಮನು ವಿರುದ್ಧ 2018ನೇ ಇಸವಿಯಲ್ಲಿ ಕೆಜಿಹಳ್ಳಿ ಪೊಲೀಸ್ ಠಾಣೆಯಲ್ಲಿ ಡಕಾಯಿತಿ ಪ್ರಕರಣ ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಈ ದಾಳಿಯನ್ನು ಸಿಸಿಬಿಯ ಸಂಘಟಿತ ಅಪರಾಧ ದಳ(ಪಶ್ಚಿಮ) ಅಧಿಕಾರಿ ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿರುತ್ತಾರೆ.

ಆರೋಪಿಗಳ ವಿರುದ್ಧ ಗೋವಿಂದಪುರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿರುತ್ತದೆ.

RELATED ARTICLES

Latest News