Sunday, June 15, 2025
Homeರಾಜ್ಯಚಾಮುಂಡಿ ದರ್ಶನಕ್ಕೆ 2,000 ರೂ. ಟಿಕೆಟ್‌ : ಬಿಜೆಪಿ ಕಿಡಿ

ಚಾಮುಂಡಿ ದರ್ಶನಕ್ಕೆ 2,000 ರೂ. ಟಿಕೆಟ್‌ : ಬಿಜೆಪಿ ಕಿಡಿ

ಬೆಂಗಳೂರು,ಜೂ.15- ಚಾಮುಂಡಿ ಬೆಟ್ಟದಲ್ಲಿ ಜೂನ್‌ 27ರಿಂದ ತಿಂಗಳ ಕಾಲ ಆಷಾಢ ಶುಕ್ರವಾರ ಆಚರಣೆ ನಡೆಯಲಿದ್ದು, ಇದದ ನಡುವೆ ವಿಶೇಷ ದರ್ಶನೞಕ್ಕೆ 2,000 ರೂ. ಟಿಕೆಟ್‌ ಪರಿಚಯಿಸಿದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ. ಸಮಾಜವಾದಿ ಹಿನ್ನೆಲೆಯಿಂದ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರು ಅತಿಯಾದ ಶುಲ್ಕ ವಿಧಿಸುವ ಮೂಲಕ ಹಿಂದೂ ಭಕ್ತರನ್ನು ಶೋಷಿಸುತ್ತಿದ್ದಾರೆಂದು ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ ಅವರು ಆರೋಪಿಸಿದ್ದಾರೆ.

ಬಂಟ್ವಾಳದಲ್ಲಿ ಉರೂಸ್‌‍ ಆಚರಣೆಗೆ 4 ಕೋಟಿ ರೂ. ಮೀಸಲಿಟ್ಟು, ಅಲ್ಪಸಂಖ್ಯಾತರನ್ನು ಓಲೈಸುವುದನ್ನು ಮುಂದುವರೆಸಿರುವ ಸರ್ಕಾರ, ಹಿಂದೂಗಳನ್ನು ಶೋಷಿಸುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಈ ಶುಲ್ಕದ ಮೂಲಕ ಹಣ ಸಂಗ್ರಹಿಸಲು ಯತ್ನಿಸುತ್ತಿದೆ. ಕಾಂಗ್ರೆಸ್‌‍ ಸರ್ಕಾರ ಹಿಂದೂ ವಿರೋಧಿಯಾಗಿದೆ.ದಸರಾ ಆಚರಣೆಗೆ 41.7 ಕೋಟಿ ರೂ. ಖರ್ಚು ಮಾಡಿರುವುದಾಗಿ ಸರ್ಕಾರ ಹೇಳಿದೆ. ಈ ಬಗ್ಗೆ ವಿವರ ಬಿಡುಗಡೆ ಮಾಡಲು ಜಿಲ್ಲಾಳಿತ ಮಂಡಳಿ 10 ತಿಂಗಳು ಸಮಯ ತೆಗೆದುಕೊಂಡಿದೆ. ಈ ಬಗ್ಗೆ ಚರ್ಚೆ ನಡೆಸಬೇಕು ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಸಿದ್ದರಾಮಯ್ಯ ಸಾಮಾಜಿಕ-ಆರ್ಥಿಕ ಮರು ಸಮೀಕ್ಷೆಯನ್ನು ಘೋಷಿಸುವ ಮೂಲಕ ಹಿಂದುಳಿದ ಸಮುದಾಯಗಳಿಗೆ ದೋಹ ಮಾಡಿದ್ದಾರೆ.ಮುಖ್ಯಮಂತ್ರಿ ಹಿಂದುಳಿದ ವರ್ಗಗಳ ಜನರಿಗೆ ಪದೇ ಪದೇ ವಂಚಿಸಿದ್ದಾರೆ. ಹಿಂದೆ ಸಮೀಕ್ಷೆಗೆ ಖರ್ಚು ಮಾಡಿದ 165 ಕೋಟಿ ರೂ. ಸಾರ್ವಜನಿಕ ಹಣ ವ್ಯರ್ಥವಾಗಿದ್ದು, ಅದನ್ನು ಸಿದ್ದರಾಮಯ್ಯ ಅವರು ಮರು ಪಾವತಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರವು ಜನಗಣತಿ ಅಧಿಕಾರವನ್ನು ಹೊಂದಿರುವುದರಿಂದ, ಜಾತಿ ಜನಗಣತಿ ನಡೆಸುವ ಅಧಿಕಾರ ರಾಜ್ಯಕ್ಕೆ ಇಲ್ಲ. ಸಿದ್ದರಾಮಯ್ಯ ಅವರು ತೊಂದರೆಯಲ್ಲಿ ಸಿಲುಕಿದಾಗಲೆಲ್ಲಾ ಹಿಂದುಳಿದ ವರ್ಗಗಳು ಅಥವಾ ಜಾತಿ ಜನಗಣತಿಗೆ ಸಂಬಂಧಿಸಿದ ವಿಷಯಗಳನ್ನು ಎತ್ತುತ್ತಿದ್ದಾರೆಂದೂ ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

RELATED ARTICLES

Latest News